ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ಬಾನುಮತಿ ಮತ್ತು ಎ.ಎಸ್.ಬೋಪಣ್ಣ ಅವರಿದ್ದ ನ್ಯಾಯಪೀಠವು ಚಿದಂಬರಂ ಅವರು ಈಗಾಗಲೇ ಸಿಬಿಐ ವಶದಲ್ಲಿರುವುದರಿಂದ ಅರ್ಜಿ ಮಹತ್ವ ಕಳೆದುಕೊಂಡಿದೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ, ಕಾನೂನಿನ ಅನುಸಾರ ಪರಿಹಾರ ಪಡೆಯಲು ಚಿದಂಬರಂ ಸ್ವತಂತ್ರರಾಗಿದ್ದಾರೆ ಎಂದೂ ಹೇಳಿದೆ.