<p><strong>ನವದೆಹಲಿ:</strong> ಐ-ಪ್ಯಾಕ್ ಕಚೇರಿ ಮತ್ತು ಅದರ ನಿರ್ದೇಶಕರ ನಿವಾಸದ ಮೇಲೆ ಇ.ಡಿ ನಡೆಸಿದ ದಾಳಿ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಪಶ್ಚಿಮ ಬಂಗಾಳದ ಸರ್ಕಾರ ಹಸ್ತಕ್ಷೇಪ ನಡೆಸಿರುವುದು ಆಘಾತಕಾರಿ ಎಂದು ಜಾರಿ ನಿರ್ದೇಶನಾಲಯ ಇಂದು (ಗುರುವಾರ) ಸುಪ್ರೀಂ ಕೋರ್ಟ್ಗೆ ತಿಳಿಸಿದೆ. </p><p>ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ವಿಪುಲ್ ಪಂಚೋಲಿ ಒಳಗೊಂಡ ಪೀಠವು ಅರ್ಜಿಗಳ ವಿಚಾರಣೆ ನಡೆಸಿತು. </p><p>ಜಾರಿ ನಿರ್ದೇಶನಾಲಯದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿಂದೆಯೂ ಶಾಸನಬದ್ಧ ಅಧಿಕಾರಗಳನ್ನು ಚಲಾಯಿಸುವಾಗ ಮಮತಾ ಬ್ಯಾನರ್ಜಿ ಹಸ್ತಕ್ಷೇಪ-ಅಡಚಣೆ ಮಾಡಿದ್ದರು ಎಂದು ಉಲ್ಲೇಖಿಸಿದ್ದಾರೆ.</p>.ಸಂಪಾದಕೀಯ| ಐ–ಪ್ಯಾಕ್ ಮೇಲೆ ED ದಾಳಿ ನಿರೀಕ್ಷಿತ: ಮಮತಾ ಪ್ರತಿಕ್ರಿಯೆ ಅನಿರೀಕ್ಷಿತ.ನಾನು ತಪ್ಪು ಮಾಡಿಲ್ಲ: ED ದಾಳಿ ವೇಳೆ 'ಐ–ಪ್ಯಾಕ್' ಕಚೇರಿಗೆ ಭೇಟಿ ಕುರಿತು ಮಮತಾ.<p>ಇದು ತುಂಬಾ ಆಘಾತಕಾರಿ ಪ್ರವೃತ್ತಿಯನ್ನು ಬಿಂಬಿಸುತ್ತದೆ. ಇಂತಹವುಗಳನ್ನು ಪ್ರೋತ್ಸಾಹಿಸುವ ಮೂಲಕ ಕೇಂದ್ರ ತನಿಖಾ ಸಂಸ್ಥೆಗಳ ಸ್ಥೈರ್ಯ ಕುಗ್ಗಿಸಲಾಗುತ್ತದೆ ಎಂದು ಅವರು ವಾದ ಮಾಡಿದ್ದಾರೆ. </p><p>ಕಳ್ಳತನ ಮಾಡಿದ ಬಳಿಕ ಧರಣಿ ನಡೆಸಬಹುದೆಂದು ರಾಜ್ಯ ಸರ್ಕಾರಗಳು ಭಾವಿಸುತ್ತವೆ. ಅಲ್ಲಿ ಹಾಜರಿದ್ದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.</p><p>ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 8ರಂದು ಸಾಲ್ಟ್ ಲೇಕ್ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಕಚೇರಿ ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್ ಮೇಲೆ ಇ.ಡಿ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಥಳಕ್ಕೆ ಬಂದು ಕಡತಗಳನ್ನು ವಶಕ್ಕೆ ಪಡೆದಿದ್ದರು ಎಂದು ಆರೋಪಿಸಲಾಗಿದೆ. </p><p>ಮಮತಾ ಬ್ಯಾನರ್ಜಿ ಕರ್ತವ್ಯಕ್ಕೆ ಅಡಚಣೆ ಮಾಡಿದ್ದಾರೆ ಎಂದು ಇ.ಡಿ ಆರೋಪಿಸಿದೆ. ಆದರೆ ಇ.ಡಿ ಅತಿಕ್ರಮಣ ಮಾಡಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಅಲ್ಲದೆ ಇ.ಡಿ. ಅಧಿಕಾರಿಗಳ ವಿರುದ್ಧ ಪಶ್ಚಿಮ ಬಂಗಾಳದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಐ-ಪ್ಯಾಕ್ ಕಚೇರಿ ಮತ್ತು ಅದರ ನಿರ್ದೇಶಕರ ನಿವಾಸದ ಮೇಲೆ ಇ.ಡಿ ನಡೆಸಿದ ದಾಳಿ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಪಶ್ಚಿಮ ಬಂಗಾಳದ ಸರ್ಕಾರ ಹಸ್ತಕ್ಷೇಪ ನಡೆಸಿರುವುದು ಆಘಾತಕಾರಿ ಎಂದು ಜಾರಿ ನಿರ್ದೇಶನಾಲಯ ಇಂದು (ಗುರುವಾರ) ಸುಪ್ರೀಂ ಕೋರ್ಟ್ಗೆ ತಿಳಿಸಿದೆ. </p><p>ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ವಿಪುಲ್ ಪಂಚೋಲಿ ಒಳಗೊಂಡ ಪೀಠವು ಅರ್ಜಿಗಳ ವಿಚಾರಣೆ ನಡೆಸಿತು. </p><p>ಜಾರಿ ನಿರ್ದೇಶನಾಲಯದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿಂದೆಯೂ ಶಾಸನಬದ್ಧ ಅಧಿಕಾರಗಳನ್ನು ಚಲಾಯಿಸುವಾಗ ಮಮತಾ ಬ್ಯಾನರ್ಜಿ ಹಸ್ತಕ್ಷೇಪ-ಅಡಚಣೆ ಮಾಡಿದ್ದರು ಎಂದು ಉಲ್ಲೇಖಿಸಿದ್ದಾರೆ.</p>.ಸಂಪಾದಕೀಯ| ಐ–ಪ್ಯಾಕ್ ಮೇಲೆ ED ದಾಳಿ ನಿರೀಕ್ಷಿತ: ಮಮತಾ ಪ್ರತಿಕ್ರಿಯೆ ಅನಿರೀಕ್ಷಿತ.ನಾನು ತಪ್ಪು ಮಾಡಿಲ್ಲ: ED ದಾಳಿ ವೇಳೆ 'ಐ–ಪ್ಯಾಕ್' ಕಚೇರಿಗೆ ಭೇಟಿ ಕುರಿತು ಮಮತಾ.<p>ಇದು ತುಂಬಾ ಆಘಾತಕಾರಿ ಪ್ರವೃತ್ತಿಯನ್ನು ಬಿಂಬಿಸುತ್ತದೆ. ಇಂತಹವುಗಳನ್ನು ಪ್ರೋತ್ಸಾಹಿಸುವ ಮೂಲಕ ಕೇಂದ್ರ ತನಿಖಾ ಸಂಸ್ಥೆಗಳ ಸ್ಥೈರ್ಯ ಕುಗ್ಗಿಸಲಾಗುತ್ತದೆ ಎಂದು ಅವರು ವಾದ ಮಾಡಿದ್ದಾರೆ. </p><p>ಕಳ್ಳತನ ಮಾಡಿದ ಬಳಿಕ ಧರಣಿ ನಡೆಸಬಹುದೆಂದು ರಾಜ್ಯ ಸರ್ಕಾರಗಳು ಭಾವಿಸುತ್ತವೆ. ಅಲ್ಲಿ ಹಾಜರಿದ್ದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.</p><p>ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 8ರಂದು ಸಾಲ್ಟ್ ಲೇಕ್ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಕಚೇರಿ ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್ ಮೇಲೆ ಇ.ಡಿ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಥಳಕ್ಕೆ ಬಂದು ಕಡತಗಳನ್ನು ವಶಕ್ಕೆ ಪಡೆದಿದ್ದರು ಎಂದು ಆರೋಪಿಸಲಾಗಿದೆ. </p><p>ಮಮತಾ ಬ್ಯಾನರ್ಜಿ ಕರ್ತವ್ಯಕ್ಕೆ ಅಡಚಣೆ ಮಾಡಿದ್ದಾರೆ ಎಂದು ಇ.ಡಿ ಆರೋಪಿಸಿದೆ. ಆದರೆ ಇ.ಡಿ ಅತಿಕ್ರಮಣ ಮಾಡಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಅಲ್ಲದೆ ಇ.ಡಿ. ಅಧಿಕಾರಿಗಳ ವಿರುದ್ಧ ಪಶ್ಚಿಮ ಬಂಗಾಳದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>