<p><strong>ಕೋಲ್ಕತ್ತ</strong>: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಪಾಕಿಸ್ತಾನದ ಕ್ರಿಕೆಟಿಗರಿಗೆ ಅವಕಾಶ ನಿರಾಕರಿಸಿರುವಂತೆಯೇ, ಬಾಂಗ್ಲಾದೇಶದ ಕ್ರಿಕೆಟಿಗರಿಗೂ ಅವಕಾಶ ನೀಡಬಾರದು ಎಂದು ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.</p>.<p>ಬಾಂಗ್ಲಾದ ವೇಗದ ಬೌಲರ್ ಮುಸ್ತಫಿಝರ್ ರೆಹಮಾನ್ ಅವರನ್ನು 2026ರ ಐಪಿಎಲ್ ತಂಡದಿಂದ ಬಿಡುಗಡೆ ಮಾಡುವಂತೆ ಕೋಲ್ಕತ್ತ ನೈಟ್ ರೈಡರ್ಸ್ಗೆ (ಕೆಕೆಆರ್) ಬಿಸಿಸಿಐ ನೀಡಿದ ಆದೇಶವನ್ನು ಘೋಷ್ ಸ್ವಾಗತಿಸಿದ್ದಾರೆ.</p>.<p>‘ಬಾಂಗ್ಲಾದಲ್ಲಿ ನಡೆಯುತ್ತಿರುವುದು ಯಾರಿಗೂ ಒಳ್ಳೆಯದಲ್ಲ. ಹಿಂದೂಗಳ ವಿರುದ್ಧ ನಡೆಯುತ್ತಿರುವ ದೌರ್ಜನ್ಯದಿಂದ ಪಶ್ಚಿಮ ಬಂಗಾಳದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಅಮಾನವೀಯ’ ಎಂದು ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಬಾಂಗ್ಲಾದಲ್ಲಿ ಚುನಾವಣೆ ನಡೆದು ಸ್ಥಿರ ಸರ್ಕಾರ ರಚನೆಯಾಗಲಿ. ಕಾನೂನು ಮತ್ತು ಸುವ್ಯವಸ್ಥೆ ಪುನರ್ ಸ್ಥಾಪನೆಯಾಗಲಿ ಎಂದು ನಾವು ಬಯಸುತ್ತೇವೆ. ಇದರಿಂದ ಜೀವಗಳು ಮತ್ತು ಆಸ್ತಿಯ ರಕ್ಷಣೆಯಾಗುತ್ತದೆ. ಗಡಿಯಲ್ಲಿನ ಉದ್ವಿಗ್ನತೆಯೂ ಕಡಿಮೆಯಾಗಲಿದೆ’ ಎಂದು ಹೇಳಿದ್ದಾರೆ.</p>.<p>‘ಪಶ್ಚಿಮ ಬಂಗಾಳದ ಬೇಡಿಕೆಯನ್ನು ಪರಿಗಣಿಸಿ, ಐಪಿಎಲ್ನಿಂದ ಬಾಂಗ್ಲಾದ ಕ್ರಿಕೆಟಿಗನನ್ನು ಹೊರಗಿಟ್ಟ ಬಿಸಿಸಿಐಗೆ ಧನ್ಯವಾದ ಹೇಳುತ್ತೇನೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಪಾಕಿಸ್ತಾನದ ಕ್ರಿಕೆಟಿಗರಿಗೆ ಅವಕಾಶ ನಿರಾಕರಿಸಿರುವಂತೆಯೇ, ಬಾಂಗ್ಲಾದೇಶದ ಕ್ರಿಕೆಟಿಗರಿಗೂ ಅವಕಾಶ ನೀಡಬಾರದು ಎಂದು ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.</p>.<p>ಬಾಂಗ್ಲಾದ ವೇಗದ ಬೌಲರ್ ಮುಸ್ತಫಿಝರ್ ರೆಹಮಾನ್ ಅವರನ್ನು 2026ರ ಐಪಿಎಲ್ ತಂಡದಿಂದ ಬಿಡುಗಡೆ ಮಾಡುವಂತೆ ಕೋಲ್ಕತ್ತ ನೈಟ್ ರೈಡರ್ಸ್ಗೆ (ಕೆಕೆಆರ್) ಬಿಸಿಸಿಐ ನೀಡಿದ ಆದೇಶವನ್ನು ಘೋಷ್ ಸ್ವಾಗತಿಸಿದ್ದಾರೆ.</p>.<p>‘ಬಾಂಗ್ಲಾದಲ್ಲಿ ನಡೆಯುತ್ತಿರುವುದು ಯಾರಿಗೂ ಒಳ್ಳೆಯದಲ್ಲ. ಹಿಂದೂಗಳ ವಿರುದ್ಧ ನಡೆಯುತ್ತಿರುವ ದೌರ್ಜನ್ಯದಿಂದ ಪಶ್ಚಿಮ ಬಂಗಾಳದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಅಮಾನವೀಯ’ ಎಂದು ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಬಾಂಗ್ಲಾದಲ್ಲಿ ಚುನಾವಣೆ ನಡೆದು ಸ್ಥಿರ ಸರ್ಕಾರ ರಚನೆಯಾಗಲಿ. ಕಾನೂನು ಮತ್ತು ಸುವ್ಯವಸ್ಥೆ ಪುನರ್ ಸ್ಥಾಪನೆಯಾಗಲಿ ಎಂದು ನಾವು ಬಯಸುತ್ತೇವೆ. ಇದರಿಂದ ಜೀವಗಳು ಮತ್ತು ಆಸ್ತಿಯ ರಕ್ಷಣೆಯಾಗುತ್ತದೆ. ಗಡಿಯಲ್ಲಿನ ಉದ್ವಿಗ್ನತೆಯೂ ಕಡಿಮೆಯಾಗಲಿದೆ’ ಎಂದು ಹೇಳಿದ್ದಾರೆ.</p>.<p>‘ಪಶ್ಚಿಮ ಬಂಗಾಳದ ಬೇಡಿಕೆಯನ್ನು ಪರಿಗಣಿಸಿ, ಐಪಿಎಲ್ನಿಂದ ಬಾಂಗ್ಲಾದ ಕ್ರಿಕೆಟಿಗನನ್ನು ಹೊರಗಿಟ್ಟ ಬಿಸಿಸಿಐಗೆ ಧನ್ಯವಾದ ಹೇಳುತ್ತೇನೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>