<p><strong>ನವದೆಹಲಿ:</strong> ಇರಾನ್ ಪರಮಾಣು ಘಟಕಗಳ ಮೇಲೆ ಅಮೆರಿಕದ ದಾಳಿ ಮತ್ತು ಇಸ್ರೇಲ್ ಆಕ್ರಮಣವನ್ನು ಖಂಡಿಸದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದ್ದು, ಮತ್ತಷ್ಟು ನೈತಿಕ ಸ್ಥೈರ್ಯ ತೋರಬೇಕು ಎಂದು ಒತ್ತಾಯಿಸಿದೆ. </p><p>ಇರಾನ್ ಹಾಗೂ ಇಸ್ರೇಲ್ನಲ್ಲಿ ಸಂಘರ್ಷ ಮತ್ತಷ್ಟು ಉಲ್ಬಣಿಸಿರುವಂತೆಯೇ ರಾಜತಾಂತ್ರಿಕತೆ ಮೂಲಕ ಬಿಕ್ಕಟ್ಟು ಶಮನಗೊಳಿಸುವ ಅಗತ್ಯತೆ ಕುರಿತಾಗಿಯೂ ಕಾಂಗ್ರೆಸ್ ಪ್ರತಿಪಾದಿಸಿದೆ. </p><p>ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, 'ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದ ಬಳಿಕ ಮಾತುಕತೆ ನಡೆಸಬೇಕೆಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯು ಹಾಸ್ಯಾಸ್ಪದವಾಗಿದೆ' ಎಂದು ಹೇಳಿದ್ದಾರೆ. </p><p>'ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಈವರೆಗೆ ಇರಾನ್ ಮೇಲೆ ಅಮೆರಿಕದ ದಾಳಿ ಹಾಗೂ ಇಸ್ರೇಲ್ನ ಆಕ್ರಮಣವನ್ನು ಖಂಡಿಸಿಲ್ಲ. ಗಾಜಾದಲ್ಲಿ ಪ್ಯಾಲೆಸ್ಟೀನಿಯನ್ನರ ಮೇಲೆ ನಡೆಯುತ್ತಿರುವ ನರಮೇಧದ ಕುರಿತು ಗಾಢ ಮೌನ ಕಾಯ್ದುಕೊಂಡಿದ್ದಾರೆ' ಎಂದು ಅವರು ಆರೋಪಿಸಿದ್ದಾರೆ. </p><p>ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರ ಜೊತೆ ಭಾನುವಾರ ಮಾತುಕತೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಇರಾನ್–ಇಸ್ರೇಲ್ ಬಿಕ್ಕಟ್ಟು ಕುರಿತು ಕಳವಳ ವ್ಯಕ್ತಪಡಿಸಿದ್ದರು. ಮಾತುಕತೆ ಮತ್ತು ರಾಜತಾಂತ್ರಿಕ ಕ್ರಮಗಳ ಮೂಲಕ ಪ್ರಸ್ತುತ ಮೂಡಿರುವ ಬಿಕ್ಕಟ್ಟು ಶಮನಗೊಳಿಸಬೇಕು ಎಂದು ಸಲಹೆ ಮಾಡಿದ್ದರು. </p>.ಅತ್ಯಂತ ಜಾಗರೂಕರಾಗಿರಿ: ಜಗತ್ತಿನಾದ್ಯಂತ ಇರುವ ಅಮೆರಿಕನ್ನರಿಗೆ ಎಚ್ಚರಿಕೆ.ದಾಳಿಯ 'ಸಮಯ, ಸ್ವರೂಪ, ಪ್ರಮಾಣ'ನಿರ್ಧರಿಸುತ್ತೇವೆ: ಅಮೆರಿಕಕ್ಕೆ ಇರಾನ್ ತಿರುಗೇಟು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇರಾನ್ ಪರಮಾಣು ಘಟಕಗಳ ಮೇಲೆ ಅಮೆರಿಕದ ದಾಳಿ ಮತ್ತು ಇಸ್ರೇಲ್ ಆಕ್ರಮಣವನ್ನು ಖಂಡಿಸದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದ್ದು, ಮತ್ತಷ್ಟು ನೈತಿಕ ಸ್ಥೈರ್ಯ ತೋರಬೇಕು ಎಂದು ಒತ್ತಾಯಿಸಿದೆ. </p><p>ಇರಾನ್ ಹಾಗೂ ಇಸ್ರೇಲ್ನಲ್ಲಿ ಸಂಘರ್ಷ ಮತ್ತಷ್ಟು ಉಲ್ಬಣಿಸಿರುವಂತೆಯೇ ರಾಜತಾಂತ್ರಿಕತೆ ಮೂಲಕ ಬಿಕ್ಕಟ್ಟು ಶಮನಗೊಳಿಸುವ ಅಗತ್ಯತೆ ಕುರಿತಾಗಿಯೂ ಕಾಂಗ್ರೆಸ್ ಪ್ರತಿಪಾದಿಸಿದೆ. </p><p>ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, 'ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದ ಬಳಿಕ ಮಾತುಕತೆ ನಡೆಸಬೇಕೆಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯು ಹಾಸ್ಯಾಸ್ಪದವಾಗಿದೆ' ಎಂದು ಹೇಳಿದ್ದಾರೆ. </p><p>'ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಈವರೆಗೆ ಇರಾನ್ ಮೇಲೆ ಅಮೆರಿಕದ ದಾಳಿ ಹಾಗೂ ಇಸ್ರೇಲ್ನ ಆಕ್ರಮಣವನ್ನು ಖಂಡಿಸಿಲ್ಲ. ಗಾಜಾದಲ್ಲಿ ಪ್ಯಾಲೆಸ್ಟೀನಿಯನ್ನರ ಮೇಲೆ ನಡೆಯುತ್ತಿರುವ ನರಮೇಧದ ಕುರಿತು ಗಾಢ ಮೌನ ಕಾಯ್ದುಕೊಂಡಿದ್ದಾರೆ' ಎಂದು ಅವರು ಆರೋಪಿಸಿದ್ದಾರೆ. </p><p>ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರ ಜೊತೆ ಭಾನುವಾರ ಮಾತುಕತೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಇರಾನ್–ಇಸ್ರೇಲ್ ಬಿಕ್ಕಟ್ಟು ಕುರಿತು ಕಳವಳ ವ್ಯಕ್ತಪಡಿಸಿದ್ದರು. ಮಾತುಕತೆ ಮತ್ತು ರಾಜತಾಂತ್ರಿಕ ಕ್ರಮಗಳ ಮೂಲಕ ಪ್ರಸ್ತುತ ಮೂಡಿರುವ ಬಿಕ್ಕಟ್ಟು ಶಮನಗೊಳಿಸಬೇಕು ಎಂದು ಸಲಹೆ ಮಾಡಿದ್ದರು. </p>.ಅತ್ಯಂತ ಜಾಗರೂಕರಾಗಿರಿ: ಜಗತ್ತಿನಾದ್ಯಂತ ಇರುವ ಅಮೆರಿಕನ್ನರಿಗೆ ಎಚ್ಚರಿಕೆ.ದಾಳಿಯ 'ಸಮಯ, ಸ್ವರೂಪ, ಪ್ರಮಾಣ'ನಿರ್ಧರಿಸುತ್ತೇವೆ: ಅಮೆರಿಕಕ್ಕೆ ಇರಾನ್ ತಿರುಗೇಟು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>