<p><strong>ತಿರುವನಂತಪುರಂ:</strong> ಸಂಘರ್ಷಪೀಡಿತ ಇರಾನ್ನಲ್ಲಿ ಸಿಲುಕಿಕೊಂಡಿರುವ 24 ಮಲಯಾಳಿಗರು ಮರಳಿ ಸ್ವದೇಶಕ್ಕೆ ಕರೆತರುವಂತೆ ಕೇರಳದ ಅನಿವಾಸಿಗರ ಇಲಾಖೆಗೆ (ನೊರ್ಕಾ ರೂಟ್) ಮನವಿ ಮಾಡಿದ್ದಾರೆ.</p>.<p>ಇದರಲ್ಲಿ 12 ಮಂದಿ ವೈದ್ಯಕೀಯ ವಿದ್ಯಾರ್ಥಿಗಳಿದ್ದು, ಉಳಿದವರು ನಾವಿಕರಾಗಿದ್ದಾರೆ.</p>.<p>‘ಭಾರತಕ್ಕೆ ಮರಳಿ ಬರಲು ಬಯಸುತ್ತಿರುವವರ ಸಂಖ್ಯೆ ಕಲೆ ಹಾಕಲಾಗುತ್ತಿದ್ದು, ರಾಯಭಾರ ಕಚೇರಿ ಹಾಗೂ ವಿದೇಶಾಂಗ ಇಲಾಖೆಯ ಜೊತೆಗೂ ಹಂಚಿಕೊಳ್ಳಲಾಗುವುದು’ ಎಂದು ನೊರ್ಕಾ ರೂಟ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಿತ್ ಕೊಲಶ್ಯೇರಿ ತಿಳಿಸಿದ್ದಾರೆ.</p>.<p>ಈಗಿರುವ ಮಾಹಿತಿ ಪ್ರಕಾರ, ಇರಾನ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಲಯಾಳಿಗರು ಇಲ್ಲ. ಈಗಿನ ಅಂದಾಜಿನ ಪ್ರಕಾರ, 50 ವಿದ್ಯಾರ್ಥಿಗಳಿದ್ದಾರೆ ಎಂದು ಅಂದಾಜಿಸಲಾಗಿದೆ. ಉಳಿದವರು ವ್ಯಾಪಾರ ನಿಮಿತ್ತ ಅಲ್ಲಿಗೆ ತೆರಳಿದ್ದಾರೆ. ನಾವಿಕರು ಈಗಲೂ ಹಡಗಿನಲ್ಲಿಯೇ ಇದ್ದು, ಅವರೆಲ್ಲರೂ ಕೂಡ ಯುಇಎ ಹಾಗೂ ಗಲ್ಫ್ನಿಂದ ಬಂದವರಾಗಿದ್ದಾರೆ.</p>.<div>ಕೆರ್ಮನ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ತಮ್ಮನ್ನು ಕರೆದೊಯ್ಯಲು ಮನವಿ ಸಲ್ಲಿಸಿದ್ದಾರೆ. ಅವರು ಈಗಲೂ ಕೂಡ ಕಾಲೇಜಿನ ಹಾಸ್ಟೆಲ್ನಲ್ಲಿದ್ದು, ಅವರೆಲ್ಲರೂ ಕೂಡ ಕಾಸರಗೋಡು, ಮಲಪ್ಪುರಂ, ಕೊಟ್ಟಾಯಂ ಹಾಗೂ ಎರ್ನಾಕುಲಂ ಜಿಲ್ಲೆಯವರು.</div>.<div>ಇಂಟರ್ನೆಟ್ ಕಡಿತಗೊಳಿಸಿರುವ ಕಾರಣ, ಮಕ್ಕಳ ಜೊತೆ ಸಂಪರ್ಕ ಸಾಧ್ಯವಾಗಿಲ್ಲ ಎಂದು ಪೋಷಕರು ಸ್ಥಳೀಯ ಮಾಧ್ಯಮಗಳ ಮುಂದೆ ಆತಂಕ ವ್ಯಕ್ತಪಡಿಸಿದ್ದಾರೆ. ಹಾಸ್ಟೆಲ್ನ ಕೊಠಡಿಯಲ್ಲಿ ಉಳಿದುಕೊಳ್ಳುವಂತೆ ಕಠಿಣ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ:</strong> ಸಂಘರ್ಷಪೀಡಿತ ಇರಾನ್ನಲ್ಲಿ ಸಿಲುಕಿಕೊಂಡಿರುವ 24 ಮಲಯಾಳಿಗರು ಮರಳಿ ಸ್ವದೇಶಕ್ಕೆ ಕರೆತರುವಂತೆ ಕೇರಳದ ಅನಿವಾಸಿಗರ ಇಲಾಖೆಗೆ (ನೊರ್ಕಾ ರೂಟ್) ಮನವಿ ಮಾಡಿದ್ದಾರೆ.</p>.<p>ಇದರಲ್ಲಿ 12 ಮಂದಿ ವೈದ್ಯಕೀಯ ವಿದ್ಯಾರ್ಥಿಗಳಿದ್ದು, ಉಳಿದವರು ನಾವಿಕರಾಗಿದ್ದಾರೆ.</p>.<p>‘ಭಾರತಕ್ಕೆ ಮರಳಿ ಬರಲು ಬಯಸುತ್ತಿರುವವರ ಸಂಖ್ಯೆ ಕಲೆ ಹಾಕಲಾಗುತ್ತಿದ್ದು, ರಾಯಭಾರ ಕಚೇರಿ ಹಾಗೂ ವಿದೇಶಾಂಗ ಇಲಾಖೆಯ ಜೊತೆಗೂ ಹಂಚಿಕೊಳ್ಳಲಾಗುವುದು’ ಎಂದು ನೊರ್ಕಾ ರೂಟ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಿತ್ ಕೊಲಶ್ಯೇರಿ ತಿಳಿಸಿದ್ದಾರೆ.</p>.<p>ಈಗಿರುವ ಮಾಹಿತಿ ಪ್ರಕಾರ, ಇರಾನ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಲಯಾಳಿಗರು ಇಲ್ಲ. ಈಗಿನ ಅಂದಾಜಿನ ಪ್ರಕಾರ, 50 ವಿದ್ಯಾರ್ಥಿಗಳಿದ್ದಾರೆ ಎಂದು ಅಂದಾಜಿಸಲಾಗಿದೆ. ಉಳಿದವರು ವ್ಯಾಪಾರ ನಿಮಿತ್ತ ಅಲ್ಲಿಗೆ ತೆರಳಿದ್ದಾರೆ. ನಾವಿಕರು ಈಗಲೂ ಹಡಗಿನಲ್ಲಿಯೇ ಇದ್ದು, ಅವರೆಲ್ಲರೂ ಕೂಡ ಯುಇಎ ಹಾಗೂ ಗಲ್ಫ್ನಿಂದ ಬಂದವರಾಗಿದ್ದಾರೆ.</p>.<div>ಕೆರ್ಮನ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ತಮ್ಮನ್ನು ಕರೆದೊಯ್ಯಲು ಮನವಿ ಸಲ್ಲಿಸಿದ್ದಾರೆ. ಅವರು ಈಗಲೂ ಕೂಡ ಕಾಲೇಜಿನ ಹಾಸ್ಟೆಲ್ನಲ್ಲಿದ್ದು, ಅವರೆಲ್ಲರೂ ಕೂಡ ಕಾಸರಗೋಡು, ಮಲಪ್ಪುರಂ, ಕೊಟ್ಟಾಯಂ ಹಾಗೂ ಎರ್ನಾಕುಲಂ ಜಿಲ್ಲೆಯವರು.</div>.<div>ಇಂಟರ್ನೆಟ್ ಕಡಿತಗೊಳಿಸಿರುವ ಕಾರಣ, ಮಕ್ಕಳ ಜೊತೆ ಸಂಪರ್ಕ ಸಾಧ್ಯವಾಗಿಲ್ಲ ಎಂದು ಪೋಷಕರು ಸ್ಥಳೀಯ ಮಾಧ್ಯಮಗಳ ಮುಂದೆ ಆತಂಕ ವ್ಯಕ್ತಪಡಿಸಿದ್ದಾರೆ. ಹಾಸ್ಟೆಲ್ನ ಕೊಠಡಿಯಲ್ಲಿ ಉಳಿದುಕೊಳ್ಳುವಂತೆ ಕಠಿಣ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>