<p><strong>ನವದೆಹಲಿ:</strong> ಐಆರ್ಸಿಟಿಸಿಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಆರ್ಜೆಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್, ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಹಾಗೂ ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ವಿರುದ್ಧ ಇಲ್ಲಿನ ನ್ಯಾಯಾಲಯವೊಂದು ಸೋಮವಾರ ದೋಷಾರೋಪ ನಿಗದಿ ಮಾಡಿದೆ.</p>.Bihar Elections: ಮೊದಲ ದಿನವೇ ಲಾಲು ಪ್ರಸಾದ್ ನಾಮಪತ್ರ ಸಲ್ಲಿಕೆ; ಇವರು ಅವರಲ್ಲ!.<p>ಬಿಹಾರ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವಾಗಲೇ ಈ ಬೆಳವಣಿಗೆ ನಡೆದಿದೆ.</p><p>ವಿಶೇಷ ನ್ಯಾಯಾಧೀಶ ವಿಶಾಲ್ ಗೊಗ್ನೆ ಅವರು, ರಾಬ್ಡಿ ದೇವಿ ಹಾಗೂ ತೇಜಸ್ವಿ ವಿರುದ್ಧ ಕ್ರಿಮಿನಲ್ ಸಂಚು ಹಾಗೂ ಮೋಸದ ಆರೋಪ ಹೊರಿಸಿದ್ದಾರೆ. ಐಆರ್ಸಿಟಿಸಿಯ ಎರಡು ಹೋಟೆಲ್ಗಳ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ವಹಿಸುವ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ.</p><p>ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲಾಲು ಪ್ರಸಾದ್ ವಿರುದ್ಧ ಕೋರ್ಟ್ ದೋಷಾರೋಪ ಹೊರಿಸಿದೆ. ಪ್ರಕರಣದಲ್ಲಿ ಈ ಮೂವರು ತಪ್ಪೊಪ್ಪಿಕೊಂಡಿಲ್ಲ. ಆದೇಶದ ವಿಸ್ತೃತ ಪ್ರತಿ ಲಭ್ಯವಾಗಬೇಕಷ್ಟೇ.</p><p>ದೋಷಾರೋಪ ನಿಗದಿ ಮಾಡುವ ಆದೇಶದ ವೇಳೆ ಮೂವರು ಖುದ್ದಾಗಿ ಕೋರ್ಟ್ನಲ್ಲಿ ಹಾಜರಿರಬೇಕು ಎಂದು ಮೂವರಿಗೂ ಕೋರ್ಟ್ ಸೆಪ್ಟೆಂಬರ್ 24ರಂದು ಸೂಚಿಸಿತ್ತು.</p>.ಬಿಹಾರ|ಆರ್ಜೆಡಿಯಿಂದ ಮಹಿಳೆಯರಿಗೆ ಸಂಕಷ್ಟ: ಲಾಲು ಪಕ್ಷದ ವಿರುದ್ಧ ಮೋದಿ ವಾಗ್ದಾಳಿ.<p>ಸಿಬಿಐ ಚಾರ್ಜ್ಶೀಟ್ ಪ್ರಕಾರ, 2004 –2014ರ ಅವಧಿಯಲ್ಲಿ ಈ ಅವ್ಯವಹಾರ ನಡೆದಿದ್ದು, ಪುರಿ ಹಾಗೂ ರಾಂಚಿಯಲ್ಲಿರುವ ಭಾರತೀಯ ರೈಲ್ವೆಯ ಬಿಎನ್ಆರ್ ಹೋಟೆಲ್ಗಳನ್ನು ಮೊದಲು ಐಆರ್ಸಿಟಿ ವರ್ಗಾಯಿಸಿ ಬಳಿಕ ಅದರ ನಿರ್ವಹಣೆಯನ್ನು ಪಟ್ನಾ ಮೂಲದ ಸುಜಾತ ಹೋಟೆಲ್ಸ್ ಪ್ರೈವೆಟ್ ಲಿಮಿಟೆಡ್ಗೆ ನೀಡಲಾಗಿತ್ತು.</p><p>ಸುಜಾತ ಹೋಟೆಲ್ಗೆ ಸಹಾಯ ಮಾಡಲು ಟೆಂಡರ್ ಪ್ರಕ್ರಿಯೆಯಲ್ಲಿ ಕೃತ್ರಿಮ ನಡೆಸಲಾಗಿತ್ತು ಎಂದು ಸಿಬಿಐ ಆರೋಪಿಸಿತ್ತು.</p>.ದೇಶದ ಪ್ರಸ್ತುತ ಪರಿಸ್ಥಿತಿ ತುರ್ತು ಪರಿಸ್ಥಿತಿಗಿಂತ ಕೆಟ್ಟದಾಗಿದೆ: ಲಾಲು ಪ್ರಸಾದ್.<p>ಚಾರ್ಜ್ಶೀಟ್ನಲ್ಲಿ ಐಆರ್ಸಿಟಿಸಿಯ ಸಮೂಹ ವ್ಯವಸ್ಥಾಪಕರಾದ ವಿ.ಕೆ ಆಸ್ಥಾನ ಹಾಗೂ ಆರ್.ಕೆ ಗೋಯಲ್ ಮತ್ತು ಚಾಣಕ್ಯ ಹೋಟೆಲ್ನ ಮಾಲೀಕರು ಹಾಗೂ ಸುಜಾತ ಹೋಟೆಲ್ನ ನಿರ್ದೇಶಕರಾದ ವಿಜಯ್ ಕೊಚ್ಚಾರ್, ವಿನಯ್ ಕೊಚ್ಚಾರ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿತ್ತು.</p>.ಬಿಹಾರ ಬಿಜೆಪಿ ನಾಯಕರು ಲಾಲು ಪ್ರಸಾದ್ಗಿಂತಲೂ ಭ್ರಷ್ಟರು: ಪ್ರಶಾಂತ್ ಕಿಶೋರ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಐಆರ್ಸಿಟಿಸಿಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಆರ್ಜೆಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್, ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಹಾಗೂ ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ವಿರುದ್ಧ ಇಲ್ಲಿನ ನ್ಯಾಯಾಲಯವೊಂದು ಸೋಮವಾರ ದೋಷಾರೋಪ ನಿಗದಿ ಮಾಡಿದೆ.</p>.Bihar Elections: ಮೊದಲ ದಿನವೇ ಲಾಲು ಪ್ರಸಾದ್ ನಾಮಪತ್ರ ಸಲ್ಲಿಕೆ; ಇವರು ಅವರಲ್ಲ!.<p>ಬಿಹಾರ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವಾಗಲೇ ಈ ಬೆಳವಣಿಗೆ ನಡೆದಿದೆ.</p><p>ವಿಶೇಷ ನ್ಯಾಯಾಧೀಶ ವಿಶಾಲ್ ಗೊಗ್ನೆ ಅವರು, ರಾಬ್ಡಿ ದೇವಿ ಹಾಗೂ ತೇಜಸ್ವಿ ವಿರುದ್ಧ ಕ್ರಿಮಿನಲ್ ಸಂಚು ಹಾಗೂ ಮೋಸದ ಆರೋಪ ಹೊರಿಸಿದ್ದಾರೆ. ಐಆರ್ಸಿಟಿಸಿಯ ಎರಡು ಹೋಟೆಲ್ಗಳ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ವಹಿಸುವ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ.</p><p>ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲಾಲು ಪ್ರಸಾದ್ ವಿರುದ್ಧ ಕೋರ್ಟ್ ದೋಷಾರೋಪ ಹೊರಿಸಿದೆ. ಪ್ರಕರಣದಲ್ಲಿ ಈ ಮೂವರು ತಪ್ಪೊಪ್ಪಿಕೊಂಡಿಲ್ಲ. ಆದೇಶದ ವಿಸ್ತೃತ ಪ್ರತಿ ಲಭ್ಯವಾಗಬೇಕಷ್ಟೇ.</p><p>ದೋಷಾರೋಪ ನಿಗದಿ ಮಾಡುವ ಆದೇಶದ ವೇಳೆ ಮೂವರು ಖುದ್ದಾಗಿ ಕೋರ್ಟ್ನಲ್ಲಿ ಹಾಜರಿರಬೇಕು ಎಂದು ಮೂವರಿಗೂ ಕೋರ್ಟ್ ಸೆಪ್ಟೆಂಬರ್ 24ರಂದು ಸೂಚಿಸಿತ್ತು.</p>.ಬಿಹಾರ|ಆರ್ಜೆಡಿಯಿಂದ ಮಹಿಳೆಯರಿಗೆ ಸಂಕಷ್ಟ: ಲಾಲು ಪಕ್ಷದ ವಿರುದ್ಧ ಮೋದಿ ವಾಗ್ದಾಳಿ.<p>ಸಿಬಿಐ ಚಾರ್ಜ್ಶೀಟ್ ಪ್ರಕಾರ, 2004 –2014ರ ಅವಧಿಯಲ್ಲಿ ಈ ಅವ್ಯವಹಾರ ನಡೆದಿದ್ದು, ಪುರಿ ಹಾಗೂ ರಾಂಚಿಯಲ್ಲಿರುವ ಭಾರತೀಯ ರೈಲ್ವೆಯ ಬಿಎನ್ಆರ್ ಹೋಟೆಲ್ಗಳನ್ನು ಮೊದಲು ಐಆರ್ಸಿಟಿ ವರ್ಗಾಯಿಸಿ ಬಳಿಕ ಅದರ ನಿರ್ವಹಣೆಯನ್ನು ಪಟ್ನಾ ಮೂಲದ ಸುಜಾತ ಹೋಟೆಲ್ಸ್ ಪ್ರೈವೆಟ್ ಲಿಮಿಟೆಡ್ಗೆ ನೀಡಲಾಗಿತ್ತು.</p><p>ಸುಜಾತ ಹೋಟೆಲ್ಗೆ ಸಹಾಯ ಮಾಡಲು ಟೆಂಡರ್ ಪ್ರಕ್ರಿಯೆಯಲ್ಲಿ ಕೃತ್ರಿಮ ನಡೆಸಲಾಗಿತ್ತು ಎಂದು ಸಿಬಿಐ ಆರೋಪಿಸಿತ್ತು.</p>.ದೇಶದ ಪ್ರಸ್ತುತ ಪರಿಸ್ಥಿತಿ ತುರ್ತು ಪರಿಸ್ಥಿತಿಗಿಂತ ಕೆಟ್ಟದಾಗಿದೆ: ಲಾಲು ಪ್ರಸಾದ್.<p>ಚಾರ್ಜ್ಶೀಟ್ನಲ್ಲಿ ಐಆರ್ಸಿಟಿಸಿಯ ಸಮೂಹ ವ್ಯವಸ್ಥಾಪಕರಾದ ವಿ.ಕೆ ಆಸ್ಥಾನ ಹಾಗೂ ಆರ್.ಕೆ ಗೋಯಲ್ ಮತ್ತು ಚಾಣಕ್ಯ ಹೋಟೆಲ್ನ ಮಾಲೀಕರು ಹಾಗೂ ಸುಜಾತ ಹೋಟೆಲ್ನ ನಿರ್ದೇಶಕರಾದ ವಿಜಯ್ ಕೊಚ್ಚಾರ್, ವಿನಯ್ ಕೊಚ್ಚಾರ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿತ್ತು.</p>.ಬಿಹಾರ ಬಿಜೆಪಿ ನಾಯಕರು ಲಾಲು ಪ್ರಸಾದ್ಗಿಂತಲೂ ಭ್ರಷ್ಟರು: ಪ್ರಶಾಂತ್ ಕಿಶೋರ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>