<p><strong>ನವದೆಹಲಿ:</strong> ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕಬ್ಬಿಣ ಅದಿರಿನ ವಾರ್ಷಿಕ ಉತ್ಪಾದನೆಯ ಮಿತಿಯನ್ನು ಹೆಚ್ಚಿಸಬೇಕು ಎಂಬ ಬೇಡಿಕೆ ಕುರಿತು ‘ದೃಢವಾದ ಅಭಿಪ್ರಾಯ’ ನೀಡಲಾಗದು ಎಂದು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ ನೇತೃತ್ವದ ಮೇಲುಸ್ತುವಾರಿ ಪ್ರಾಧಿಕಾರ ಹೇಳಿದೆ.</p>.<p>‘ಅದಿರು ಉತ್ಪಾದನೆ ಮಿತಿಯನ್ನು ಹೆಚ್ಚಿಸುವುದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ನೇಮಿಸಿರುವ ಕೇಂದ್ರೀಯ ಉನ್ನತಾಧಿಕಾರ ಸಮಿತಿ (ಸಿಇಸಿ) ಹಾಗೂ ಮೇಲ್ವಿಚಾರಣಾ ಸಮಿತಿಯು ಪರಸ್ಪರ ವಿರುದ್ಧವಾಗಿರುವ ವರದಿಗಳನ್ನು ನೀಡಿರುವುದೇ ಇದಕ್ಕೆ ಕಾರಣ’ ಎಂದು ಪ್ರಾಧಿಕಾರವು ಸುಪ್ರೀಂಕೋರ್ಟ್ಗೆ ತಿಳಿಸಿದೆ.</p>.<p>ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠವು ಈ ಕುರಿತ ಅರ್ಜಿಯ ವಿಚಾರಣೆಯನ್ನು ಸೋಮವಾರ (ಆ.22) ನಡೆಸಲಿದೆ.</p>.<p>ಸದ್ಯ, ವಾರ್ಷಿಕ 3.5 ಕೋಟಿ ಟನ್ ಅದಿರು ಉತ್ಪಾದನೆ ಮಿತಿ ನಿಗದಿ ಮಾಡಲಾಗಿದೆ. ಈ ಮಿತಿಯನ್ನು ಹೆಚ್ಚಿಸಬೇಕು ಎಂಬುದು ಗಣಿ ಉದ್ಯಮಿಗಳ ಬೇಡಿಕೆಯಾಗಿದೆ.</p>.<p>ಜಿಲ್ಲಾ ಮಟ್ಟದಲ್ಲಿ ಉತ್ಪಾದನೆ ಮೇಲೆ ಹೇರಲಾಗಿರುವ ಮಿತಿಯನ್ನು ತೆಗೆದು ಹಾಕುವ ಬೇಡಿಕೆಗೆ ಸಿಇಸಿ, ಗಣಿ ಉದ್ಯಮಕ್ಕೆ ಸಂಬಂಧಿಸಿದ ಸಂಸ್ಥೆಗಳಾದ ಎಫ್ಐಎಂಐ ಸೌಥ್, ಕೆಐಎಸ್ಎಂಎ ಹಾಗೂ ಕರ್ನಾಟಕ ಸರ್ಕಾರ ಬೆಂಬಲ ವ್ಯಕ್ತಪಡಿಸಿವೆ. ಈ ಅಂಶವನ್ನು ಪ್ರಾಧಿಕಾರವು ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಿದೆ. ಈ ಮಿತಿಯನ್ನು ತೆಗೆದು ಹಾಕುವಂತೆ ಕೇಂದ್ರ ಗಣಿ ಹಾಗೂ ಉಕ್ಕು ಸಚಿವಾಲಯಗಳು ಸಹ ಶಿಫಾರಸು ಮಾಡಿವೆ.</p>.<p>ಈ ಪ್ರಕರಣದಲ್ಲಿ ಅರ್ಜಿದಾರ ಸಂಸ್ಥೆಯಾಗಿರುವ ಸಮಾಜ ಪರಿವರ್ತನಾ ಸಮುದಾಯ ಹಾಗೂ ಮೇಲ್ವಿಚಾರಣಾ ಸಮಿತಿಯು, ‘ಸುಸ್ಥಿರ ಅಭಿವೃದ್ಧಿ ಹಾಗೂ ನ್ಯಾಯದ ದೃಷ್ಟಿಯಿಂದ ಈ ಹಂತದಲ್ಲಿ ಅದಿರು ಉತ್ಪಾದನೆ ಮೇಲಿನ ಮಿತಿಯನ್ನು ತೆಗೆದು ಹಾಕುವುದು ಸರಿಯಲ್ಲ’ ಎಂದು ಸುಪ್ರೀಂಕೋರ್ಟ್ಗೆ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕಬ್ಬಿಣ ಅದಿರಿನ ವಾರ್ಷಿಕ ಉತ್ಪಾದನೆಯ ಮಿತಿಯನ್ನು ಹೆಚ್ಚಿಸಬೇಕು ಎಂಬ ಬೇಡಿಕೆ ಕುರಿತು ‘ದೃಢವಾದ ಅಭಿಪ್ರಾಯ’ ನೀಡಲಾಗದು ಎಂದು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ ನೇತೃತ್ವದ ಮೇಲುಸ್ತುವಾರಿ ಪ್ರಾಧಿಕಾರ ಹೇಳಿದೆ.</p>.<p>‘ಅದಿರು ಉತ್ಪಾದನೆ ಮಿತಿಯನ್ನು ಹೆಚ್ಚಿಸುವುದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ನೇಮಿಸಿರುವ ಕೇಂದ್ರೀಯ ಉನ್ನತಾಧಿಕಾರ ಸಮಿತಿ (ಸಿಇಸಿ) ಹಾಗೂ ಮೇಲ್ವಿಚಾರಣಾ ಸಮಿತಿಯು ಪರಸ್ಪರ ವಿರುದ್ಧವಾಗಿರುವ ವರದಿಗಳನ್ನು ನೀಡಿರುವುದೇ ಇದಕ್ಕೆ ಕಾರಣ’ ಎಂದು ಪ್ರಾಧಿಕಾರವು ಸುಪ್ರೀಂಕೋರ್ಟ್ಗೆ ತಿಳಿಸಿದೆ.</p>.<p>ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠವು ಈ ಕುರಿತ ಅರ್ಜಿಯ ವಿಚಾರಣೆಯನ್ನು ಸೋಮವಾರ (ಆ.22) ನಡೆಸಲಿದೆ.</p>.<p>ಸದ್ಯ, ವಾರ್ಷಿಕ 3.5 ಕೋಟಿ ಟನ್ ಅದಿರು ಉತ್ಪಾದನೆ ಮಿತಿ ನಿಗದಿ ಮಾಡಲಾಗಿದೆ. ಈ ಮಿತಿಯನ್ನು ಹೆಚ್ಚಿಸಬೇಕು ಎಂಬುದು ಗಣಿ ಉದ್ಯಮಿಗಳ ಬೇಡಿಕೆಯಾಗಿದೆ.</p>.<p>ಜಿಲ್ಲಾ ಮಟ್ಟದಲ್ಲಿ ಉತ್ಪಾದನೆ ಮೇಲೆ ಹೇರಲಾಗಿರುವ ಮಿತಿಯನ್ನು ತೆಗೆದು ಹಾಕುವ ಬೇಡಿಕೆಗೆ ಸಿಇಸಿ, ಗಣಿ ಉದ್ಯಮಕ್ಕೆ ಸಂಬಂಧಿಸಿದ ಸಂಸ್ಥೆಗಳಾದ ಎಫ್ಐಎಂಐ ಸೌಥ್, ಕೆಐಎಸ್ಎಂಎ ಹಾಗೂ ಕರ್ನಾಟಕ ಸರ್ಕಾರ ಬೆಂಬಲ ವ್ಯಕ್ತಪಡಿಸಿವೆ. ಈ ಅಂಶವನ್ನು ಪ್ರಾಧಿಕಾರವು ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಿದೆ. ಈ ಮಿತಿಯನ್ನು ತೆಗೆದು ಹಾಕುವಂತೆ ಕೇಂದ್ರ ಗಣಿ ಹಾಗೂ ಉಕ್ಕು ಸಚಿವಾಲಯಗಳು ಸಹ ಶಿಫಾರಸು ಮಾಡಿವೆ.</p>.<p>ಈ ಪ್ರಕರಣದಲ್ಲಿ ಅರ್ಜಿದಾರ ಸಂಸ್ಥೆಯಾಗಿರುವ ಸಮಾಜ ಪರಿವರ್ತನಾ ಸಮುದಾಯ ಹಾಗೂ ಮೇಲ್ವಿಚಾರಣಾ ಸಮಿತಿಯು, ‘ಸುಸ್ಥಿರ ಅಭಿವೃದ್ಧಿ ಹಾಗೂ ನ್ಯಾಯದ ದೃಷ್ಟಿಯಿಂದ ಈ ಹಂತದಲ್ಲಿ ಅದಿರು ಉತ್ಪಾದನೆ ಮೇಲಿನ ಮಿತಿಯನ್ನು ತೆಗೆದು ಹಾಕುವುದು ಸರಿಯಲ್ಲ’ ಎಂದು ಸುಪ್ರೀಂಕೋರ್ಟ್ಗೆ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>