<p><strong>ಮುಂಬೈ:</strong> ನಮ್ಮ ವಿರುದ್ಧ ಭಯೋತ್ಪಾದನೆಯನ್ನು ಪ್ರಾಯೋಜಿಸುತ್ತಿರುವ ಪಾಕಿಸ್ತಾನದ ಜೊತೆ ಏಷ್ಯಾ ಕಪ್ ಕ್ರಿಕೆಟ್ ಮತ್ತು ಹಾಕಿ ಟೂರ್ನಿಯನ್ನು ಆಡುವುದು ಸರಿಯೇ ಎಂದು ಶಿವಸೇನಾ (ಉದ್ಧವ್ ಬಣ)ದ ನಾಯಕ ಆದಿತ್ಯ ಠಾಕ್ರೆ ಅವರು ಶುಕ್ರವಾರ ಪ್ರಶ್ನಿಸಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಠಾಕ್ರೆ, ‘ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಆಡಬೇಕೇ? ಈ ಕುರಿತು ಬಿಜೆಪಿ ಮತ್ತು ಕೇಂದ್ರ ಸರ್ಕಾರದಿಂದ ಸ್ಪಷ್ಟ ಉತ್ತರ ಬಯಸುತ್ತಿದ್ದೇವೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಹಲವು ಪ್ರಶ್ನೆಗಳಿಗೆ ಕೇಂದ್ರದಿಂದ ಇನ್ನೂ ಉತ್ತರ ದೊರೆತಿಲ್ಲ’ ಎಂದರು.</p>.<p class="title">‘ಬಿಸಿಸಿಐ ಭಾರತೀಯ ಕ್ರಿಕೆಟ್ ತಂಡವನ್ನು ಪಾಕಿಸ್ತಾನದೊಂದಿಗೆ ಆಡಲು ಅನುಮತಿಸಿದರೆ, ಇತರರಿಗೆ ಮಾಡಿದಂತೆ ಬಿಜೆಪಿ ಬಿಸಿಸಿಐಗೂ ರಾಷ್ಟ್ರವಿರೋಧಿ ಪಟ್ಟ ಕಟ್ಟುತ್ತದೆಯೇ?’ ಎಂದು ಕೇಳಿದರು. </p>.<p class="title">ಪಹಲ್ಗಾಮ್ ಉಗ್ರರ ದಾಳಿ ಮತ್ತು ರಾಷ್ಟ್ರೀಯ ಭದ್ರತೆ ನಿರ್ವಹಣೆಯಲ್ಲಿ ಕೇಂದ್ರ ಕೈಗೊಂಡ ಕ್ರಮಗಳ ಬಗ್ಗೆ ಠಾಕ್ರೆ ಅಸಮಾಧಾನ ವ್ಯಕ್ತಪಡಿಸಿದರು. </p>.<p class="title">ಏಷ್ಯಾ ಕಪ್ ಟಿ20 ಮತ್ತು ಏಷ್ಯಾ ಕಪ್ ಹಾಕಿ ಟೂರ್ನಿಗಳಿಗೆ ಭಾರತ ಆತಿಥ್ಯ ವಹಿಸಿದ್ದು, ಪಂದ್ಯಗಳು ಬಿಹಾರದಲ್ಲಿ ನಡೆಯಲಿವೆ. ಸೆಪ್ಟೆಂಬರ್ನಲ್ಲಿ ಏಷ್ಯಾ ಕಪ್ ಟಿ20 ನಡೆಯುವ ನಿರೀಕ್ಷೆಯಿದೆ ಮತ್ತು ಏಷ್ಯಾ ಕಪ್ ಹಾಕಿ ಟೂರ್ನಿಯನ್ನು ಆಗಸ್ಟ್ 27ರಂದು ಆಯೋಜಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ನಮ್ಮ ವಿರುದ್ಧ ಭಯೋತ್ಪಾದನೆಯನ್ನು ಪ್ರಾಯೋಜಿಸುತ್ತಿರುವ ಪಾಕಿಸ್ತಾನದ ಜೊತೆ ಏಷ್ಯಾ ಕಪ್ ಕ್ರಿಕೆಟ್ ಮತ್ತು ಹಾಕಿ ಟೂರ್ನಿಯನ್ನು ಆಡುವುದು ಸರಿಯೇ ಎಂದು ಶಿವಸೇನಾ (ಉದ್ಧವ್ ಬಣ)ದ ನಾಯಕ ಆದಿತ್ಯ ಠಾಕ್ರೆ ಅವರು ಶುಕ್ರವಾರ ಪ್ರಶ್ನಿಸಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಠಾಕ್ರೆ, ‘ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಆಡಬೇಕೇ? ಈ ಕುರಿತು ಬಿಜೆಪಿ ಮತ್ತು ಕೇಂದ್ರ ಸರ್ಕಾರದಿಂದ ಸ್ಪಷ್ಟ ಉತ್ತರ ಬಯಸುತ್ತಿದ್ದೇವೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಹಲವು ಪ್ರಶ್ನೆಗಳಿಗೆ ಕೇಂದ್ರದಿಂದ ಇನ್ನೂ ಉತ್ತರ ದೊರೆತಿಲ್ಲ’ ಎಂದರು.</p>.<p class="title">‘ಬಿಸಿಸಿಐ ಭಾರತೀಯ ಕ್ರಿಕೆಟ್ ತಂಡವನ್ನು ಪಾಕಿಸ್ತಾನದೊಂದಿಗೆ ಆಡಲು ಅನುಮತಿಸಿದರೆ, ಇತರರಿಗೆ ಮಾಡಿದಂತೆ ಬಿಜೆಪಿ ಬಿಸಿಸಿಐಗೂ ರಾಷ್ಟ್ರವಿರೋಧಿ ಪಟ್ಟ ಕಟ್ಟುತ್ತದೆಯೇ?’ ಎಂದು ಕೇಳಿದರು. </p>.<p class="title">ಪಹಲ್ಗಾಮ್ ಉಗ್ರರ ದಾಳಿ ಮತ್ತು ರಾಷ್ಟ್ರೀಯ ಭದ್ರತೆ ನಿರ್ವಹಣೆಯಲ್ಲಿ ಕೇಂದ್ರ ಕೈಗೊಂಡ ಕ್ರಮಗಳ ಬಗ್ಗೆ ಠಾಕ್ರೆ ಅಸಮಾಧಾನ ವ್ಯಕ್ತಪಡಿಸಿದರು. </p>.<p class="title">ಏಷ್ಯಾ ಕಪ್ ಟಿ20 ಮತ್ತು ಏಷ್ಯಾ ಕಪ್ ಹಾಕಿ ಟೂರ್ನಿಗಳಿಗೆ ಭಾರತ ಆತಿಥ್ಯ ವಹಿಸಿದ್ದು, ಪಂದ್ಯಗಳು ಬಿಹಾರದಲ್ಲಿ ನಡೆಯಲಿವೆ. ಸೆಪ್ಟೆಂಬರ್ನಲ್ಲಿ ಏಷ್ಯಾ ಕಪ್ ಟಿ20 ನಡೆಯುವ ನಿರೀಕ್ಷೆಯಿದೆ ಮತ್ತು ಏಷ್ಯಾ ಕಪ್ ಹಾಕಿ ಟೂರ್ನಿಯನ್ನು ಆಗಸ್ಟ್ 27ರಂದು ಆಯೋಜಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>