ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ ಉಗ್ರ ಚಟುವಟಿಕೆ: ಕರ್ನಾಟಕದ ಭಟ್ಕಳ ಸೇರಿ 6 ರಾಜ್ಯಗಳ 13 ಸ್ಥಳಗಳಲ್ಲಿ ಶೋಧ

Last Updated 31 ಜುಲೈ 2022, 8:29 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾನುವಾರ ಆರು ರಾಜ್ಯಗಳ 13 ಸ್ಥಳಗಳಲ್ಲಿ ಐಎಸ್ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಶಂಕಿತರ ಮೇಲೆ ದಾಳಿ ನಡೆಸಿದೆ.

ಮಧ್ಯಪ್ರದೇಶದ ಭೋಪಾಲ್ ಮತ್ತು ರೈಸನ್, ಗುಜರಾತ್‌ನ ಭರೂಚ್, ಸೂರತ್, ನವಸಾರಿ ಮತ್ತು ಅಹಮದಾಬಾದ್, ಬಿಹಾರದ ಅರಾರಿಯಾ ಜಿಲ್ಲೆ, ಕರ್ನಾಟಕದ ಭಟ್ಕಳ ಮತ್ತು ತುಮಕೂರು, ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ನಾಂದೇಡ್ ಜಿಲ್ಲೆಗಳು ಮತ್ತು ಉತ್ತರ ಪ್ರದೇಶದ ದೇವಬಂದ್ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ.

ಜೂನ್ 25 ರಂದು ಎನ್‌ಐಎ ಐಪಿಸಿಯ ಸೆಕ್ಷನ್ 153 ಎ ಮತ್ತು 153 ಬಿ ಮತ್ತು ಸೆಕ್ಷನ್ 18, 18 ಬಿ, 38, 39 ಮತ್ತು 40ರ ಯುಎ (ಪಿ) ಕಾಯಿದೆ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು.

ಶೋಧಕಾರ್ಯಾಚರಣೆ ವೇಳೆ ದಾಖಲೆಗಳು, ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್‌ಐಎ ಹೇಳಿಕೆಯಲ್ಲಿ ತಿಳಿಸಿದೆ. ತನಿಖೆ ನಡೆಯುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT