‘ನೋಟು ರದ್ದತಿಯ ತೀರ್ಮಾನ ಕೈಗೊಳ್ಳುವ ಮೂಲಕ ನೀವು ಆರ್ಥಿಕತೆಯನ್ನು ಅಧೋಗತಿಗೆ ತಳ್ಳಿದಿರಿ. ನಿಮ್ಮ ತಪ್ಪು ನಿರ್ಧಾರದಿಂದಾಗಿ ಇಡೀ ಅಸಂಘಟಿತ ವಲಯವೇ ನಾಶವಾಗಿ ಹೋಗಿತ್ತು. ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ (ಎಂಎಸ್ಎಂಇ) ಉದ್ಯಮಗಳು ಬಾಗಿಲು ಹಾಕಬೇಕಾಯಿತು. ಇದರಿಂದಾಗಿ ಕೋಟ್ಯಂತರ ಉದ್ಯೋಗ ನಷ್ಟವೂ ಉಂಟಾಗಿತ್ತು’ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.