<p><strong>ಶ್ರೀನಗರ</strong>: ‘ಜಮ್ಮು ಮತ್ತು ಕಾಶ್ಮೀರದಲ್ಲಿ ಮಹಿಳೆಯರನ್ನು ರಕ್ಷಿಸುವ ಸರ್ಕಾರದ ಯಾವುದಾದರೂ ಇಲಾಖೆ ಇದೆಯೇ?’ ಎಂದು ಎಎಪಿಯ ಮಾಧ್ಯಮ ವಕ್ತಾರ ನವಾಬ್ ಅವರು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಪ್ರಶ್ನಿಸಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರದಲ್ಲಿ 2019– 21ರ ಅವಧಿಯಲ್ಲಿ ಸುಮಾರು 9 ಸಾವಿರ ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(ಎನ್ಸಿಆರ್ಬಿ) ಬಿಡುಗಡೆ ಮಾಡಿರುವ ವರದಿಯನ್ನು ಆಧರಿಸಿ ಅವರು ಈ ಪ್ರಶ್ನೆ ಕೇಳಿದ್ದಾರೆ.</p><p>‘ಇದು ರಾಜಕೀಯ ವಿಚಾರವಲ್ಲ. ಇದು ಮಹಿಳೆಯರ ಸುರಕ್ಷತೆ ಮತ್ತು ಗೌರವದ ವಿಷಯ. ಕಾಣೆಯಾಗಿರುವ ಮಹಿಳೆಯ ಬಗ್ಗೆ ಮಾಹಿತಿ ನೀಡಬೇಕು. ನಿಮ್ಮ ಆಡಳಿತದಲ್ಲಿರುವ ದೋಷವೇನು? ಕಾಣೆಯಾಗಿರುವ ಮಹಿಳೆಯರನ್ನು ಪತ್ತೆ ಹಚ್ಚಲು ಏನಾದರೂ ಕ್ರಮಗಳನ್ನು ಕೈಗೊಂಡಿದ್ದೀರಾ?’ ಎಂದೂ ಸಿನ್ಹಾ ಅವರನ್ನು ಪ್ರಶ್ನಿಸಿದ್ದಾರೆ.</p><p>ಕೇಂದ್ರಾಡಳಿತ ಪ್ರದೇಶದಲ್ಲಿ ಮಾನವ ಕಳ್ಳ ಸಾಗಣಿಕೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಇದರ ವಿರುದ್ಧವೂ ನವಾಬ್ ಧ್ವನಿ ಎತ್ತಿದ್ದಾರೆ.</p><p>ಈ ಮಾಹಿತಿಯನ್ನು ಆಧರಿಸಿ ಇಲ್ಲಿನ ಪ್ರೆಸ್ ಕಾಲೋನಿಯಲ್ಲಿ ಆಮ್ ಆದ್ಮಿ ಪಕ್ಷದ(ಎಎಪಿ) ಕಾರ್ಯಕರ್ತರು ಫಲಕಗಳನ್ನು ಹಿಡಿದು ಗುರುವಾರ ಪ್ರತಿಭಟನೆ ನಡೆಸಿದೆ.</p><p>2019ರಿಂದ 21ರ ವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 8,617 ಮಹಿಳೆಯರು ಹಾಗೂ 1,148 ಬಾಲಕಿಯರು ನಾಪತ್ತೆಯಾಗಿದ್ದಾರೆ ಎಂದು ಎನ್ಸಿಆರ್ಬಿ ತಿಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ‘ಜಮ್ಮು ಮತ್ತು ಕಾಶ್ಮೀರದಲ್ಲಿ ಮಹಿಳೆಯರನ್ನು ರಕ್ಷಿಸುವ ಸರ್ಕಾರದ ಯಾವುದಾದರೂ ಇಲಾಖೆ ಇದೆಯೇ?’ ಎಂದು ಎಎಪಿಯ ಮಾಧ್ಯಮ ವಕ್ತಾರ ನವಾಬ್ ಅವರು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಪ್ರಶ್ನಿಸಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರದಲ್ಲಿ 2019– 21ರ ಅವಧಿಯಲ್ಲಿ ಸುಮಾರು 9 ಸಾವಿರ ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(ಎನ್ಸಿಆರ್ಬಿ) ಬಿಡುಗಡೆ ಮಾಡಿರುವ ವರದಿಯನ್ನು ಆಧರಿಸಿ ಅವರು ಈ ಪ್ರಶ್ನೆ ಕೇಳಿದ್ದಾರೆ.</p><p>‘ಇದು ರಾಜಕೀಯ ವಿಚಾರವಲ್ಲ. ಇದು ಮಹಿಳೆಯರ ಸುರಕ್ಷತೆ ಮತ್ತು ಗೌರವದ ವಿಷಯ. ಕಾಣೆಯಾಗಿರುವ ಮಹಿಳೆಯ ಬಗ್ಗೆ ಮಾಹಿತಿ ನೀಡಬೇಕು. ನಿಮ್ಮ ಆಡಳಿತದಲ್ಲಿರುವ ದೋಷವೇನು? ಕಾಣೆಯಾಗಿರುವ ಮಹಿಳೆಯರನ್ನು ಪತ್ತೆ ಹಚ್ಚಲು ಏನಾದರೂ ಕ್ರಮಗಳನ್ನು ಕೈಗೊಂಡಿದ್ದೀರಾ?’ ಎಂದೂ ಸಿನ್ಹಾ ಅವರನ್ನು ಪ್ರಶ್ನಿಸಿದ್ದಾರೆ.</p><p>ಕೇಂದ್ರಾಡಳಿತ ಪ್ರದೇಶದಲ್ಲಿ ಮಾನವ ಕಳ್ಳ ಸಾಗಣಿಕೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಇದರ ವಿರುದ್ಧವೂ ನವಾಬ್ ಧ್ವನಿ ಎತ್ತಿದ್ದಾರೆ.</p><p>ಈ ಮಾಹಿತಿಯನ್ನು ಆಧರಿಸಿ ಇಲ್ಲಿನ ಪ್ರೆಸ್ ಕಾಲೋನಿಯಲ್ಲಿ ಆಮ್ ಆದ್ಮಿ ಪಕ್ಷದ(ಎಎಪಿ) ಕಾರ್ಯಕರ್ತರು ಫಲಕಗಳನ್ನು ಹಿಡಿದು ಗುರುವಾರ ಪ್ರತಿಭಟನೆ ನಡೆಸಿದೆ.</p><p>2019ರಿಂದ 21ರ ವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 8,617 ಮಹಿಳೆಯರು ಹಾಗೂ 1,148 ಬಾಲಕಿಯರು ನಾಪತ್ತೆಯಾಗಿದ್ದಾರೆ ಎಂದು ಎನ್ಸಿಆರ್ಬಿ ತಿಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>