<p><strong>ಕೋಲ್ಕತ್ತ</strong>: ಪಶ್ಚಿಮಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ಹೋರಾಟ ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸುತ್ತಿದ್ದು, ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಸೋಮವಾರ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.</p>.<p>ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. </p>.<p>ಸೆಂಟ್ರಲ್ ಕೋಲ್ಕತ್ತದ ರಾಮಲೀಲಾ ಮೈದಾನದಲ್ಲಿ ಶಾಸಕ ನೌಶಾದ್ ಸಿದ್ಧಕಿ ನಡೆಸುತ್ತಿದ್ದ ವಕ್ಫ್ ಕಾಯ್ದೆ ವಿರೋಧಿ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಬೆಂಬಲಿಗರು ತೆರಳುತ್ತಿದ್ದರು. ಅವರನ್ನು ಭೋಜೆರ್ಹಟ್ನ ಹೆದ್ದಾರಿಯಲ್ಲಿ ಭಾನ್ಗರ್ ಪೊಲೀಸರು ತಡೆದರು. </p>.<p>ಬ್ಯಾರಿಕೇಡ್ ಭೇದಿಸಿ ಮುನ್ನುಗ್ಗಿದ ಕಾರ್ಯಕರ್ತರು ಪೊಲೀಸರ ಜೊತೆ ವಾಗ್ವಾದಕ್ಕೆ ಇಳಿದರು. ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದರು. ಇದರಲ್ಲಿ ಹಲವು ಪೊಲೀಸ್ ಸಿಬ್ಬಂದಿ ಗಾಯಗೊಂಡರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. </p>.<p>ರ್ಯಾಲಿಯಲ್ಲಿ ಮಾತನಾಡಿದ ಐಎಸ್ಎಫ್ ಶಾಸಕ ನೌಶಾದ್ ಸಿದ್ಧಕಿ ‘ವಕ್ಫ್ (ತಿದ್ದುಪಡಿ) ಕಾಯ್ದೆ ತರುವ ಮೂಲಕ ಬಿಜೆಪಿ ಕೋಮು ಗಲಭೆ ಸೃಷ್ಟಿಸುವ ಸಂಚು ರೂಪಿಸುತ್ತಿದೆ. ಕಾಯ್ದೆಯನ್ನು ಜಾರಿ ಮಾಡುವುದಿಲ್ಲ ಎನ್ನುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ನಮ್ಮ ಹೋರಾಟ ತಡೆಯುತ್ತಿರುವುದೇಕೆ’ ಎಂದು ಪ್ರಶ್ನಿಸಿದರು.</p>.<p>ಮತ್ತೊಂದೆಡೆ ‘ಐಎಸ್ಎಫ್ ಪಶ್ಚಿಮ ಬಂಗಾಳದಲ್ಲಿ ಹಿಂಸೆ ಮತ್ತು ಅಶಾಂತಿ ಸೃಷ್ಟಿಸಲು ಪ್ರಚೋದನೆ ನೀಡುತ್ತಿದೆ’ ಎಂದು ಟಿಎಂಸಿ ಶಾಸಕ ಶೌಕತ್ ಮೊಲ್ಹಾ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ಹೋರಾಟ ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸುತ್ತಿದ್ದು, ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಸೋಮವಾರ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.</p>.<p>ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. </p>.<p>ಸೆಂಟ್ರಲ್ ಕೋಲ್ಕತ್ತದ ರಾಮಲೀಲಾ ಮೈದಾನದಲ್ಲಿ ಶಾಸಕ ನೌಶಾದ್ ಸಿದ್ಧಕಿ ನಡೆಸುತ್ತಿದ್ದ ವಕ್ಫ್ ಕಾಯ್ದೆ ವಿರೋಧಿ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಬೆಂಬಲಿಗರು ತೆರಳುತ್ತಿದ್ದರು. ಅವರನ್ನು ಭೋಜೆರ್ಹಟ್ನ ಹೆದ್ದಾರಿಯಲ್ಲಿ ಭಾನ್ಗರ್ ಪೊಲೀಸರು ತಡೆದರು. </p>.<p>ಬ್ಯಾರಿಕೇಡ್ ಭೇದಿಸಿ ಮುನ್ನುಗ್ಗಿದ ಕಾರ್ಯಕರ್ತರು ಪೊಲೀಸರ ಜೊತೆ ವಾಗ್ವಾದಕ್ಕೆ ಇಳಿದರು. ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದರು. ಇದರಲ್ಲಿ ಹಲವು ಪೊಲೀಸ್ ಸಿಬ್ಬಂದಿ ಗಾಯಗೊಂಡರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. </p>.<p>ರ್ಯಾಲಿಯಲ್ಲಿ ಮಾತನಾಡಿದ ಐಎಸ್ಎಫ್ ಶಾಸಕ ನೌಶಾದ್ ಸಿದ್ಧಕಿ ‘ವಕ್ಫ್ (ತಿದ್ದುಪಡಿ) ಕಾಯ್ದೆ ತರುವ ಮೂಲಕ ಬಿಜೆಪಿ ಕೋಮು ಗಲಭೆ ಸೃಷ್ಟಿಸುವ ಸಂಚು ರೂಪಿಸುತ್ತಿದೆ. ಕಾಯ್ದೆಯನ್ನು ಜಾರಿ ಮಾಡುವುದಿಲ್ಲ ಎನ್ನುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ನಮ್ಮ ಹೋರಾಟ ತಡೆಯುತ್ತಿರುವುದೇಕೆ’ ಎಂದು ಪ್ರಶ್ನಿಸಿದರು.</p>.<p>ಮತ್ತೊಂದೆಡೆ ‘ಐಎಸ್ಎಫ್ ಪಶ್ಚಿಮ ಬಂಗಾಳದಲ್ಲಿ ಹಿಂಸೆ ಮತ್ತು ಅಶಾಂತಿ ಸೃಷ್ಟಿಸಲು ಪ್ರಚೋದನೆ ನೀಡುತ್ತಿದೆ’ ಎಂದು ಟಿಎಂಸಿ ಶಾಸಕ ಶೌಕತ್ ಮೊಲ್ಹಾ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>