<p><strong>ನವದೆಹಲಿ: </strong>ದೆಹಲಿ ಪೊಲೀಸರು ಬಂಧಿಸಿರುವ ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್ಐ)ನಿಂದ ತರಬೇತಿ ಪಡೆದಿರುವ ಇಬ್ಬರು ಭಯೋತ್ಪಾದಕರು, ಸೇತುವೆಗಳು ಮತ್ತು ರೈಲ್ವೆ ಹಳಿಗಳನ್ನು ಸ್ಫೋಟಿಸುವ ಮೂಲಕ ದೇಶದಲ್ಲಿ ಭಾರೀ ಪ್ರಾಣಹಾನಿ ಉಂಟು ಮಾಡುವ ಸಂಚು ರೂಪಿಸಿದ್ದ ಮಾಹಿತಿ ವಿಚಾರಣೆಯಲ್ಲಿ ಬಹಿರಂಗವಾಗಿದೆ.</p>.<p>ಅಧಿಕೃತ ಮೂಲಗಳ ಪ್ರಕಾರ, ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ತಟ್ಟಾದಲ್ಲಿ ಐಎಸ್ಐನಿಂದ ತರಬೇತಿ ಪಡೆದಿರುವ ಈ ಇಬ್ಬರು (ಒಸಾಮಾ ಮತ್ತು ಜೀಶನ್) ಭಯೋತ್ಪಾದಕರಿಗೆ ಹೆಚ್ಚಿನ ಪ್ರಮಾಣದ ಪ್ರಯಾಣಿಕರು ಪ್ರಯಾಣಿಸುವ ರೈಲುಗಳ ಸಮಯ ಮತ್ತು ಮಾರ್ಗದ ವಿವರಗಳನ್ನು ಸಂಗ್ರಹಿಸುವಂತೆ ಸೂಚಿಸಲಾಗಿತ್ತು.</p>.<p>ದೆಹಲಿ ಪೊಲೀಸರು ಇವರನ್ನು ಸೆರೆ ಹಿಡಿದಾಗ ಅವರಿಂದ 1.5 ಕೆಜಿ ಆರ್ಡಿಎಕ್ಸ್ ವಶಪಡಿಸಿಕೊಳ್ಳಲಾಗಿದೆ. ದೊಡ್ಡ ಪ್ರಮಾಣದ ವಿನಾಶವನ್ನು ಉಂಟುಮಾಡಲು ಇಷ್ಟು ಪ್ರಮಾಣದ ಆರ್ಡಿಎಕ್ಸ್ ಸಾಕು ಎಂದು ಮೂಲಗಳು ತಿಳಿಸಿವೆ.</p>.<p>ಇತ್ತೀಚಿನ ವರದಿಗಳ ಪ್ರಕಾರ, ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ದೆಹಲಿ ಪೋಲಿಸ್ನ ವಿಶೇಷ ದಳವು ಎಲ್ಲಾ ಶಂಕಿತ ಭಯೋತ್ಪಾದಕರನ್ನು ಜಂಟಿಯಾಗಿ ವಿಚಾರಣೆ ನಡೆಸುತ್ತಿವೆ. ಡಿ ಕಂಪನಿಯ ಶಂಕಿತ ಭಯೋತ್ಪಾದಕ ಜಾನ್ ಮೊಹಮ್ಮದ್ ಮೇಲೆ ಪೊಲೀಸರು ವಿಶೇಷ ಗಮನಹರಿಸುತ್ತಿದ್ದಾರೆ.</p>.<p>ಬಂಧಿತ ಶಂಕಿತ ಉಗ್ರ ಜಾನ್ ಮೊಹಮ್ಮದ್ ಮುಂಬೈನ ಧಾರಾವಿಯ ಮೂಲದವನು ಎಂದು ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ವಿನೀತ್ ಅಗರ್ವಾಲ್ ಹೇಳಿದ್ದಾರೆ.</p>.<p>ಉಗ್ರ ಒಸಾಮಾ ತಂದೆ ಹುಮೈದ್-ಉರ್-ರೆಹಮಾನ್ನನ್ನು ಸಹ ಪೊಲೀಸರು ಹುಡುಕುತ್ತಿದ್ದಾರೆ. ಅವನೇ ಭಯೋತ್ಪಾದಕ ಕೃತ್ಯದ ಮಾಸ್ಟರ್ ಮೈಂಡ್ ಎಂದು ಶಂಕಿಸಲಾಗಿದೆ. ಒಸಾಮಾ ಮತ್ತು ಉತ್ತರ ಪ್ರದೇಶದ ಅಲಹಾಬಾದ್ ನಿವಾಸಿ ಜೀಶನ್ನನ್ನು ಹುಮೈದ್, ಪಾಕಿಸ್ತಾನದಲ್ಲಿ ತರಬೇತಿ ಪಡೆಯುವ ಉದ್ದೇಶದಿಂದ ಮಸ್ಕತ್ಗೆ ಕಳುಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಅವರು ಮಸ್ಕತ್ಗೆ ತಲುಪಿದ ನಂತರ, ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್ಐ) ಅವರನ್ನು ಸ್ಫೋಟಕಗಳು ಮತ್ತು ಬಾಂಬ್ ತಯಾರಿಸುವ ತರಬೇತಿ ಪಡೆಯಲು ಸಮುದ್ರ ಮಾರ್ಗಗಳ ಮೂಲಕ ಗ್ವಾದರ್ ಬಂದರಿಗೆ ಕರೆದುಕೊಂಡು ಹೋಗಿತ್ತು.</p>.<p>ಒಸಾಮ ಮತ್ತು ಜೀಶನ್ ಕಮಾರ್ ಅವರಿಗೆ ಸಿಂಧ್ ಪ್ರಾಂತ್ಯದ ತಟ್ಟಾದಲ್ಲಿರುವ ಫಾರ್ಮ್ ಹೌಸ್ನಲ್ಲಿ ಬಾಂಬ್, ಐಇಡಿ ತಯಾರಿಕೆ ಮತ್ತು ದೈನಂದಿನ ಬಳಕೆಯ ವಸ್ತುಗಳಿಂದ ಬೆಂಕಿ ಹಚ್ಚುವ ತರಬೇತಿಯನ್ನು ನೀಡಲಾಗಿತ್ತು.</p>.<p>ಆ ತೋಟದ ಮನೆಯಲ್ಲಿ ಮೂವರು ಪಾಕಿಸ್ತಾನಿ ಪ್ರಜೆಗಳಿದ್ದರು. ಜಬ್ಬಾರ್ ಮತ್ತು ಹಮ್ಜಾ ಎಂಬ ಇಬ್ಬರು ಇವರಿಗೆ ತರಬೇತಿ ನೀಡಿದ್ದಾರೆ. ಅವರಿಬ್ಬರೂ ಸೇನಾ ಸಮವಸ್ತ್ರ ಧರಿಸಿದ್ದರಿಂದ ಅವರು ಪಾಕ್ ಸೇನಾ ಸಿಬ್ಬಂದಿಯೇ ಎಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೆಹಲಿ ಪೊಲೀಸರು ಬಂಧಿಸಿರುವ ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್ಐ)ನಿಂದ ತರಬೇತಿ ಪಡೆದಿರುವ ಇಬ್ಬರು ಭಯೋತ್ಪಾದಕರು, ಸೇತುವೆಗಳು ಮತ್ತು ರೈಲ್ವೆ ಹಳಿಗಳನ್ನು ಸ್ಫೋಟಿಸುವ ಮೂಲಕ ದೇಶದಲ್ಲಿ ಭಾರೀ ಪ್ರಾಣಹಾನಿ ಉಂಟು ಮಾಡುವ ಸಂಚು ರೂಪಿಸಿದ್ದ ಮಾಹಿತಿ ವಿಚಾರಣೆಯಲ್ಲಿ ಬಹಿರಂಗವಾಗಿದೆ.</p>.<p>ಅಧಿಕೃತ ಮೂಲಗಳ ಪ್ರಕಾರ, ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ತಟ್ಟಾದಲ್ಲಿ ಐಎಸ್ಐನಿಂದ ತರಬೇತಿ ಪಡೆದಿರುವ ಈ ಇಬ್ಬರು (ಒಸಾಮಾ ಮತ್ತು ಜೀಶನ್) ಭಯೋತ್ಪಾದಕರಿಗೆ ಹೆಚ್ಚಿನ ಪ್ರಮಾಣದ ಪ್ರಯಾಣಿಕರು ಪ್ರಯಾಣಿಸುವ ರೈಲುಗಳ ಸಮಯ ಮತ್ತು ಮಾರ್ಗದ ವಿವರಗಳನ್ನು ಸಂಗ್ರಹಿಸುವಂತೆ ಸೂಚಿಸಲಾಗಿತ್ತು.</p>.<p>ದೆಹಲಿ ಪೊಲೀಸರು ಇವರನ್ನು ಸೆರೆ ಹಿಡಿದಾಗ ಅವರಿಂದ 1.5 ಕೆಜಿ ಆರ್ಡಿಎಕ್ಸ್ ವಶಪಡಿಸಿಕೊಳ್ಳಲಾಗಿದೆ. ದೊಡ್ಡ ಪ್ರಮಾಣದ ವಿನಾಶವನ್ನು ಉಂಟುಮಾಡಲು ಇಷ್ಟು ಪ್ರಮಾಣದ ಆರ್ಡಿಎಕ್ಸ್ ಸಾಕು ಎಂದು ಮೂಲಗಳು ತಿಳಿಸಿವೆ.</p>.<p>ಇತ್ತೀಚಿನ ವರದಿಗಳ ಪ್ರಕಾರ, ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ದೆಹಲಿ ಪೋಲಿಸ್ನ ವಿಶೇಷ ದಳವು ಎಲ್ಲಾ ಶಂಕಿತ ಭಯೋತ್ಪಾದಕರನ್ನು ಜಂಟಿಯಾಗಿ ವಿಚಾರಣೆ ನಡೆಸುತ್ತಿವೆ. ಡಿ ಕಂಪನಿಯ ಶಂಕಿತ ಭಯೋತ್ಪಾದಕ ಜಾನ್ ಮೊಹಮ್ಮದ್ ಮೇಲೆ ಪೊಲೀಸರು ವಿಶೇಷ ಗಮನಹರಿಸುತ್ತಿದ್ದಾರೆ.</p>.<p>ಬಂಧಿತ ಶಂಕಿತ ಉಗ್ರ ಜಾನ್ ಮೊಹಮ್ಮದ್ ಮುಂಬೈನ ಧಾರಾವಿಯ ಮೂಲದವನು ಎಂದು ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ವಿನೀತ್ ಅಗರ್ವಾಲ್ ಹೇಳಿದ್ದಾರೆ.</p>.<p>ಉಗ್ರ ಒಸಾಮಾ ತಂದೆ ಹುಮೈದ್-ಉರ್-ರೆಹಮಾನ್ನನ್ನು ಸಹ ಪೊಲೀಸರು ಹುಡುಕುತ್ತಿದ್ದಾರೆ. ಅವನೇ ಭಯೋತ್ಪಾದಕ ಕೃತ್ಯದ ಮಾಸ್ಟರ್ ಮೈಂಡ್ ಎಂದು ಶಂಕಿಸಲಾಗಿದೆ. ಒಸಾಮಾ ಮತ್ತು ಉತ್ತರ ಪ್ರದೇಶದ ಅಲಹಾಬಾದ್ ನಿವಾಸಿ ಜೀಶನ್ನನ್ನು ಹುಮೈದ್, ಪಾಕಿಸ್ತಾನದಲ್ಲಿ ತರಬೇತಿ ಪಡೆಯುವ ಉದ್ದೇಶದಿಂದ ಮಸ್ಕತ್ಗೆ ಕಳುಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಅವರು ಮಸ್ಕತ್ಗೆ ತಲುಪಿದ ನಂತರ, ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್ಐ) ಅವರನ್ನು ಸ್ಫೋಟಕಗಳು ಮತ್ತು ಬಾಂಬ್ ತಯಾರಿಸುವ ತರಬೇತಿ ಪಡೆಯಲು ಸಮುದ್ರ ಮಾರ್ಗಗಳ ಮೂಲಕ ಗ್ವಾದರ್ ಬಂದರಿಗೆ ಕರೆದುಕೊಂಡು ಹೋಗಿತ್ತು.</p>.<p>ಒಸಾಮ ಮತ್ತು ಜೀಶನ್ ಕಮಾರ್ ಅವರಿಗೆ ಸಿಂಧ್ ಪ್ರಾಂತ್ಯದ ತಟ್ಟಾದಲ್ಲಿರುವ ಫಾರ್ಮ್ ಹೌಸ್ನಲ್ಲಿ ಬಾಂಬ್, ಐಇಡಿ ತಯಾರಿಕೆ ಮತ್ತು ದೈನಂದಿನ ಬಳಕೆಯ ವಸ್ತುಗಳಿಂದ ಬೆಂಕಿ ಹಚ್ಚುವ ತರಬೇತಿಯನ್ನು ನೀಡಲಾಗಿತ್ತು.</p>.<p>ಆ ತೋಟದ ಮನೆಯಲ್ಲಿ ಮೂವರು ಪಾಕಿಸ್ತಾನಿ ಪ್ರಜೆಗಳಿದ್ದರು. ಜಬ್ಬಾರ್ ಮತ್ತು ಹಮ್ಜಾ ಎಂಬ ಇಬ್ಬರು ಇವರಿಗೆ ತರಬೇತಿ ನೀಡಿದ್ದಾರೆ. ಅವರಿಬ್ಬರೂ ಸೇನಾ ಸಮವಸ್ತ್ರ ಧರಿಸಿದ್ದರಿಂದ ಅವರು ಪಾಕ್ ಸೇನಾ ಸಿಬ್ಬಂದಿಯೇ ಎಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>