<p><strong>ನವದೆಹಲಿ:</strong> ದೀಪಾವಳಿ ಸಮಯದಲ್ಲಿ ಸಾರ್ವಜನಿಕ ಉದ್ಯಾನ, ದಕ್ಷಿಣ ದೆಹಲಿಯ ಮಾಲ್ ಸೇರಿ ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚು ಜನಸಂದಣಿ ಇರುವ ಸ್ಥಳಗಳಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎನ್ನುವ ಆರೋಪದಲ್ಲಿ ಐಸಿಸ್ನ ಇಬ್ಬರು ಶಂಕಿತ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.</p>.ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ ದೆಹಲಿ ಪೊಲೀಸ್ ಬಲೆಗೆ.<p>ಇಬ್ಬರ ಹೆಸರೂ ಅದ್ನಾನ್ ಆಗಿದ್ದು, ಈ ಪೈಕಿ ಒಬ್ಬ ದೆಹಲಿಯ ಸಾದಿಕ್ ನಗರ ಹಾಗೂ ಮತ್ತೊರ್ವ ಮಧ್ಯಪ್ರದೇಶದ ಭೋಪಾಲ್ ನಿವಾಸಿ ಎಂದು ಅವರು ಮಾಹಿತಿ ನೀಡಿದ್ದಾರೆ.</p><p>‘ಇವರಿಬ್ಬರ ಬಂಧನದಿಂದಾಗಿ ದೆಹಲಿಯಲ್ಲಿ ನಡೆಯಬಹುದಾಗಿದ್ದ ದಾಳಿ ತಪ್ಪಿದೆ’ ಎಂದು ಅವರು ಹೇಳಿದ್ದಾರೆ.</p><p>ಐಸಿಸ್ ನಿಷ್ಠೆಯ ಪ್ರತಿಜ್ಞೆ ಮಾಡುವ ವಿಡಿಯೊ ಹಾಗೂ ದೆಹಲಿಯಲ್ಲಿ ಬಾಂಬ್ ಸ್ಫೋಟ ನಡೆಸಲು ಉದ್ದೇಶಿಸಿದ್ದ ಸ್ಥಳದ ಚಿತ್ರಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ.</p>.ಅಹಮದಾಬಾದ್ | ಶ್ರೀಲಂಕಾ ಮೂಲದ ನಾಲ್ವರು ಶಂಕಿತ ಐಸಿಸ್ ಉಗ್ರರ ಬಂಧನ.<p>ಬಾಂಬ್ ಸ್ಫೋಟದ ಟೈಮರ್ ಇಡಲು ತಂದಿದ್ದ ವಾಚು, ಬಾಂಬ್ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳನ್ನು ಖರೀದಿ ಮಾಡಬೇಕಾದ ಸ್ಥಳಗಳ ಚಿತ್ರಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ವಿಶೇಷ) ಪ್ರಮೋದ್ ಕುಶ್ವಾಹ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.</p><p>ದಕ್ಷಿಣ ದೆಹಲಿಯಲ್ಲಿರುವ ಮಾಲ್, ಸಾರ್ವಜನಿಕ ಉದ್ಯಾನ ಸೇರಿದಂತೆ ಅವರು ದಾಳಿ ಮಾಡಲು ಉದ್ದೇಶಿಸಿದ್ದ ಸ್ಥಳದ ಪರಿಶೀಲನೆಯನ್ನೂ ಅವರು ಮಾಡಿದ್ದರು. ಓರ್ವ ಅದ್ನಾನ್ನನ್ನು ಸೆಪ್ಟೆಂಬರ್ 16ರಂದು ದೆಹಲಿಯ ಸಾದಿಕ್ ನಗರದಲ್ಲಿ ಬಂಧಿಸಲಾಗಿತ್ತು. ಬಳಿಕ ಮತ್ತೊಬ್ಬನನ್ನು ಭೋಪಾಲ್ನಲ್ಲಿ ದಸ್ತಗಿರಿ ಮಾಡಲಾಗಿತ್ತು.</p>.ಐಸಿಸ್ ಉಗ್ರರ ಸಂಪರ್ಕ-ಯತ್ನಾಳ ಆರೋಪಿಸಿದ್ದ ಮೌಲ್ವಿ, ಮೋದಿ ಜೊತೆಗೆ: ಪೋಟೊ ಬಿಡುಗಡೆ.<p>ಗ್ಯಾನ್ವ್ಯಾಪಿ ಮಸೀದಿ ಸಮೀಕ್ಷೆ ವೇಳೆ ಭಾರತದ ಪುರಾತತ್ವ ಇಲಾಖೆ ಸಿಬ್ಬಂದಿಗೆ ಬೆದರಿಕೆ ಹಾಕಿದ್ದ ಆರೋಪದಲ್ಲಿ ಭೋಪಾಲ್ ನಿವಾಸಿ ಅದ್ನಾನ್ನನ್ನು ಈ ಹಿಂದೆ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು.</p><p>ಬಂಧಿತರಿಗೆ ಐಸಿಸ್ ನಂಟು ಹೊಂದಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ದೆಹಲಿಯಲ್ಲಿ ಭಾರಿ ಪ್ರಮಾಣದ ದಾಳಿಗೆ ಅವರು ಯೋಜನೆ ಹಾಕಿದ್ದರು. ಎಲೆಕ್ಟ್ರಾನಿಕ್ ಸಾಧನ ಸೇರಿ ಅವರ ವಶದಲ್ಲಿದ್ದ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.</p><p>ಅವರ ನಂಟು ಹಾಗೂ ಇತರ ಯೋಜನೆಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p> .ದೆಹಲಿ ಬಳಿ ಬಿಹಾರದ ಕುಖ್ಯಾತ ರೌಡಿ ರಾಜನ್ ಪಾಠಕ್ ಸೇರಿ ನಾಲ್ವರ ಎನ್ಕೌಂಟರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೀಪಾವಳಿ ಸಮಯದಲ್ಲಿ ಸಾರ್ವಜನಿಕ ಉದ್ಯಾನ, ದಕ್ಷಿಣ ದೆಹಲಿಯ ಮಾಲ್ ಸೇರಿ ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚು ಜನಸಂದಣಿ ಇರುವ ಸ್ಥಳಗಳಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎನ್ನುವ ಆರೋಪದಲ್ಲಿ ಐಸಿಸ್ನ ಇಬ್ಬರು ಶಂಕಿತ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.</p>.ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ ದೆಹಲಿ ಪೊಲೀಸ್ ಬಲೆಗೆ.<p>ಇಬ್ಬರ ಹೆಸರೂ ಅದ್ನಾನ್ ಆಗಿದ್ದು, ಈ ಪೈಕಿ ಒಬ್ಬ ದೆಹಲಿಯ ಸಾದಿಕ್ ನಗರ ಹಾಗೂ ಮತ್ತೊರ್ವ ಮಧ್ಯಪ್ರದೇಶದ ಭೋಪಾಲ್ ನಿವಾಸಿ ಎಂದು ಅವರು ಮಾಹಿತಿ ನೀಡಿದ್ದಾರೆ.</p><p>‘ಇವರಿಬ್ಬರ ಬಂಧನದಿಂದಾಗಿ ದೆಹಲಿಯಲ್ಲಿ ನಡೆಯಬಹುದಾಗಿದ್ದ ದಾಳಿ ತಪ್ಪಿದೆ’ ಎಂದು ಅವರು ಹೇಳಿದ್ದಾರೆ.</p><p>ಐಸಿಸ್ ನಿಷ್ಠೆಯ ಪ್ರತಿಜ್ಞೆ ಮಾಡುವ ವಿಡಿಯೊ ಹಾಗೂ ದೆಹಲಿಯಲ್ಲಿ ಬಾಂಬ್ ಸ್ಫೋಟ ನಡೆಸಲು ಉದ್ದೇಶಿಸಿದ್ದ ಸ್ಥಳದ ಚಿತ್ರಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ.</p>.ಅಹಮದಾಬಾದ್ | ಶ್ರೀಲಂಕಾ ಮೂಲದ ನಾಲ್ವರು ಶಂಕಿತ ಐಸಿಸ್ ಉಗ್ರರ ಬಂಧನ.<p>ಬಾಂಬ್ ಸ್ಫೋಟದ ಟೈಮರ್ ಇಡಲು ತಂದಿದ್ದ ವಾಚು, ಬಾಂಬ್ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳನ್ನು ಖರೀದಿ ಮಾಡಬೇಕಾದ ಸ್ಥಳಗಳ ಚಿತ್ರಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ವಿಶೇಷ) ಪ್ರಮೋದ್ ಕುಶ್ವಾಹ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.</p><p>ದಕ್ಷಿಣ ದೆಹಲಿಯಲ್ಲಿರುವ ಮಾಲ್, ಸಾರ್ವಜನಿಕ ಉದ್ಯಾನ ಸೇರಿದಂತೆ ಅವರು ದಾಳಿ ಮಾಡಲು ಉದ್ದೇಶಿಸಿದ್ದ ಸ್ಥಳದ ಪರಿಶೀಲನೆಯನ್ನೂ ಅವರು ಮಾಡಿದ್ದರು. ಓರ್ವ ಅದ್ನಾನ್ನನ್ನು ಸೆಪ್ಟೆಂಬರ್ 16ರಂದು ದೆಹಲಿಯ ಸಾದಿಕ್ ನಗರದಲ್ಲಿ ಬಂಧಿಸಲಾಗಿತ್ತು. ಬಳಿಕ ಮತ್ತೊಬ್ಬನನ್ನು ಭೋಪಾಲ್ನಲ್ಲಿ ದಸ್ತಗಿರಿ ಮಾಡಲಾಗಿತ್ತು.</p>.ಐಸಿಸ್ ಉಗ್ರರ ಸಂಪರ್ಕ-ಯತ್ನಾಳ ಆರೋಪಿಸಿದ್ದ ಮೌಲ್ವಿ, ಮೋದಿ ಜೊತೆಗೆ: ಪೋಟೊ ಬಿಡುಗಡೆ.<p>ಗ್ಯಾನ್ವ್ಯಾಪಿ ಮಸೀದಿ ಸಮೀಕ್ಷೆ ವೇಳೆ ಭಾರತದ ಪುರಾತತ್ವ ಇಲಾಖೆ ಸಿಬ್ಬಂದಿಗೆ ಬೆದರಿಕೆ ಹಾಕಿದ್ದ ಆರೋಪದಲ್ಲಿ ಭೋಪಾಲ್ ನಿವಾಸಿ ಅದ್ನಾನ್ನನ್ನು ಈ ಹಿಂದೆ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು.</p><p>ಬಂಧಿತರಿಗೆ ಐಸಿಸ್ ನಂಟು ಹೊಂದಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ದೆಹಲಿಯಲ್ಲಿ ಭಾರಿ ಪ್ರಮಾಣದ ದಾಳಿಗೆ ಅವರು ಯೋಜನೆ ಹಾಕಿದ್ದರು. ಎಲೆಕ್ಟ್ರಾನಿಕ್ ಸಾಧನ ಸೇರಿ ಅವರ ವಶದಲ್ಲಿದ್ದ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.</p><p>ಅವರ ನಂಟು ಹಾಗೂ ಇತರ ಯೋಜನೆಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p> .ದೆಹಲಿ ಬಳಿ ಬಿಹಾರದ ಕುಖ್ಯಾತ ರೌಡಿ ರಾಜನ್ ಪಾಠಕ್ ಸೇರಿ ನಾಲ್ವರ ಎನ್ಕೌಂಟರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>