<p><strong>ಕೋಲ್ಕತ್ತ</strong>: ಬಂಧನದಲ್ಲಿರುವ ಹಿಂದೂ ಮುಖಂಡ ಚಿನ್ಮಯಿ ಕೃಷ್ಣದಾಸ್ ಅವರ ಪರವಾಗಿ ವಾದ ಮಂಡನೆಗೆ ಮುಂದಾಗುವ ವಕೀಲರ ರಕ್ಷಣೆಗೆ ಬಾಂಗ್ಲಾ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೋಲ್ಕತ್ತದ ಇಸ್ಕಾನ್ ಮನವಿ ಮಾಡಿದೆ.</p>.<p>ಕೋಲ್ಕತ್ತದ ಇಸ್ಕಾನ್ ವಕ್ತಾರ ರಾಧಾರಮಣ್ ದಾಸ್ ಅವರು, ‘ಚಿನ್ಮಯಿ ಕೃಷ್ಣದಾಸ್ ಅವರ ಪರ ವಕೀಲ ರಮಣ್ ರಾಯ್ ಅವರ ಮೇಲೆ ಗುಂಪೊಂದು ಹಲ್ಲೆ ಮಾಡಿದೆ. ಹೀಗಾಗಿ ವಾದ ಮಂಡನೆಗೆ ವಕೀಲರು ಮುಂದೆ ಬರುತ್ತಿಲ್ಲ. ಈ ಪ್ರಕರಣದಲ್ಲಿ ವಾದ ಮಂಡನೆಗೆ ಮುಂದಾಗುವ ವಕೀಲರಿಗೆ ಸರ್ಕಾರ ಭದ್ರತೆ ನೀಡಬೇಕು’ ಎಂದು ಕೇಳಿದ್ದಾರೆ.</p>.<p>ನ್ಯಾಯಾಲಯದಲ್ಲಿ ಚಿನ್ಮಯಿ ಅವರನ್ನು ಸಮರ್ಥಿಸಿಕೊಂಡರು ಎಂಬ ಕಾರಣಕ್ಕಾಗಿ ಅವರ ಮೇಲೆ ಹಲ್ಲೆ ನಡೆದಿದ್ದು, ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ಮನವಿ ಮಾಡಿದ್ದಾರೆ.</p>.<p>‘ಬಾಂಗ್ಲಾದೇಶ ಸಮ್ಮಿಲಿತ್ ಸನಾತನಿ ಜಾಗರಣ ಜೋತೆ’ ವಕ್ತಾರರಾದ ಕೃಷ್ಣದಾಸ್ ಅವರನ್ನು ದೇಶದ್ರೋಹದ ಆರೋಪದ ಮೇಲೆ ಕಳೆದ ಸೋಮವಾರ ಬಂಧಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಬಂಧನದಲ್ಲಿರುವ ಹಿಂದೂ ಮುಖಂಡ ಚಿನ್ಮಯಿ ಕೃಷ್ಣದಾಸ್ ಅವರ ಪರವಾಗಿ ವಾದ ಮಂಡನೆಗೆ ಮುಂದಾಗುವ ವಕೀಲರ ರಕ್ಷಣೆಗೆ ಬಾಂಗ್ಲಾ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೋಲ್ಕತ್ತದ ಇಸ್ಕಾನ್ ಮನವಿ ಮಾಡಿದೆ.</p>.<p>ಕೋಲ್ಕತ್ತದ ಇಸ್ಕಾನ್ ವಕ್ತಾರ ರಾಧಾರಮಣ್ ದಾಸ್ ಅವರು, ‘ಚಿನ್ಮಯಿ ಕೃಷ್ಣದಾಸ್ ಅವರ ಪರ ವಕೀಲ ರಮಣ್ ರಾಯ್ ಅವರ ಮೇಲೆ ಗುಂಪೊಂದು ಹಲ್ಲೆ ಮಾಡಿದೆ. ಹೀಗಾಗಿ ವಾದ ಮಂಡನೆಗೆ ವಕೀಲರು ಮುಂದೆ ಬರುತ್ತಿಲ್ಲ. ಈ ಪ್ರಕರಣದಲ್ಲಿ ವಾದ ಮಂಡನೆಗೆ ಮುಂದಾಗುವ ವಕೀಲರಿಗೆ ಸರ್ಕಾರ ಭದ್ರತೆ ನೀಡಬೇಕು’ ಎಂದು ಕೇಳಿದ್ದಾರೆ.</p>.<p>ನ್ಯಾಯಾಲಯದಲ್ಲಿ ಚಿನ್ಮಯಿ ಅವರನ್ನು ಸಮರ್ಥಿಸಿಕೊಂಡರು ಎಂಬ ಕಾರಣಕ್ಕಾಗಿ ಅವರ ಮೇಲೆ ಹಲ್ಲೆ ನಡೆದಿದ್ದು, ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ಮನವಿ ಮಾಡಿದ್ದಾರೆ.</p>.<p>‘ಬಾಂಗ್ಲಾದೇಶ ಸಮ್ಮಿಲಿತ್ ಸನಾತನಿ ಜಾಗರಣ ಜೋತೆ’ ವಕ್ತಾರರಾದ ಕೃಷ್ಣದಾಸ್ ಅವರನ್ನು ದೇಶದ್ರೋಹದ ಆರೋಪದ ಮೇಲೆ ಕಳೆದ ಸೋಮವಾರ ಬಂಧಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>