<p><strong>ನವದೆಹಲಿ:</strong> 'ಗಾಜಾದಲ್ಲಿ ಇಸ್ರೇಲ್ 'ನರಮೇಧ' ನಡೆಸುತ್ತಿದೆ. ಇಸ್ರೇಲ್ನಿಂದ ಇಂತಹ ವಿನಾಶಕಾರಿ ದಾಳಿ ನಡೆಯುತ್ತಿದ್ದರೂ ಭಾರತ ಸರ್ಕಾರ ಮೌನ ವಹಿಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ. </p><p>'ಇಸ್ರೇಲ್ ಈವರೆಗೆ 60 ಸಾವಿರ ಜನರನ್ನು ಹತ್ಯೆಗೈದಿದ್ದು, ಇದರಲ್ಲಿ 18,430 ಮಕ್ಕಳು ಸೇರಿದ್ದಾರೆ' ಎಂದು ಅವರು ಹೇಳಿದ್ದಾರೆ. </p><p>ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ, 'ಅನೇಕ ಮಕ್ಕಳನ್ನು ಸೇರಿದಂತೆ ಸಾವಿರಾರು ಜನರು ಹಸಿವಿನಿಂದ ಸಾವಿಗೀಡಾಗಿದ್ದಾರೆ. ಆದರೆ ಭಾರತ ಸರ್ಕಾರ ಮೌನ ವಹಿಸುತ್ತಿರುವುದು ನಾಚಿಕೆಗೇಡಿನ ಸಂಗತಿ' ಎಂದು ಆರೋಪಿಸಿದ್ದಾರೆ. </p><p>'ಇಸ್ರೇಲ್ಗೆ ಅಪರಾಧ ಎಸಗಲು ಮೌನ ಸಮ್ಮತಿ ನೀಡುವುದು ಸಹ ಅಪರಾಧವಾಗಿದೆ' ಎಂದು ಹೇಳಿದ್ದಾರೆ. </p><p>ಇಸ್ರೇಲ್ ನಡೆಸಿದ್ದ ದಾಳಿಯಲ್ಲಿ ಅಲ್ ಜಜೀರಾದ ಐವರು ಪತ್ರಕರ್ತರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದೊಂದು ಕ್ರೂರ ಕೃತ್ಯವಾಗಿದೆ ಎಂದು ಪ್ರಿಯಾಂಕಾ ಖಂಡಿಸಿದ್ದಾರೆ. </p>.ಗಾಜಾದಲ್ಲಿ ಇಸ್ರೇಲ್ 'ನರಮೇಧ'; ಪ್ರಧಾನಿ ಮೌನ ಪ್ರಶ್ನಿಸಿದ ಸೋನಿಯಾ ಗಾಂಧಿ.ಗಾಜಾ| ಇಸ್ರೇಲ್ನಿಂದ ಗುಂಡಿನ ದಾಳಿ: ನೆರವಿನ ನಿರೀಕ್ಷೆಯಲ್ಲಿದ್ದ 26 ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಗಾಜಾದಲ್ಲಿ ಇಸ್ರೇಲ್ 'ನರಮೇಧ' ನಡೆಸುತ್ತಿದೆ. ಇಸ್ರೇಲ್ನಿಂದ ಇಂತಹ ವಿನಾಶಕಾರಿ ದಾಳಿ ನಡೆಯುತ್ತಿದ್ದರೂ ಭಾರತ ಸರ್ಕಾರ ಮೌನ ವಹಿಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ. </p><p>'ಇಸ್ರೇಲ್ ಈವರೆಗೆ 60 ಸಾವಿರ ಜನರನ್ನು ಹತ್ಯೆಗೈದಿದ್ದು, ಇದರಲ್ಲಿ 18,430 ಮಕ್ಕಳು ಸೇರಿದ್ದಾರೆ' ಎಂದು ಅವರು ಹೇಳಿದ್ದಾರೆ. </p><p>ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ, 'ಅನೇಕ ಮಕ್ಕಳನ್ನು ಸೇರಿದಂತೆ ಸಾವಿರಾರು ಜನರು ಹಸಿವಿನಿಂದ ಸಾವಿಗೀಡಾಗಿದ್ದಾರೆ. ಆದರೆ ಭಾರತ ಸರ್ಕಾರ ಮೌನ ವಹಿಸುತ್ತಿರುವುದು ನಾಚಿಕೆಗೇಡಿನ ಸಂಗತಿ' ಎಂದು ಆರೋಪಿಸಿದ್ದಾರೆ. </p><p>'ಇಸ್ರೇಲ್ಗೆ ಅಪರಾಧ ಎಸಗಲು ಮೌನ ಸಮ್ಮತಿ ನೀಡುವುದು ಸಹ ಅಪರಾಧವಾಗಿದೆ' ಎಂದು ಹೇಳಿದ್ದಾರೆ. </p><p>ಇಸ್ರೇಲ್ ನಡೆಸಿದ್ದ ದಾಳಿಯಲ್ಲಿ ಅಲ್ ಜಜೀರಾದ ಐವರು ಪತ್ರಕರ್ತರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದೊಂದು ಕ್ರೂರ ಕೃತ್ಯವಾಗಿದೆ ಎಂದು ಪ್ರಿಯಾಂಕಾ ಖಂಡಿಸಿದ್ದಾರೆ. </p>.ಗಾಜಾದಲ್ಲಿ ಇಸ್ರೇಲ್ 'ನರಮೇಧ'; ಪ್ರಧಾನಿ ಮೌನ ಪ್ರಶ್ನಿಸಿದ ಸೋನಿಯಾ ಗಾಂಧಿ.ಗಾಜಾ| ಇಸ್ರೇಲ್ನಿಂದ ಗುಂಡಿನ ದಾಳಿ: ನೆರವಿನ ನಿರೀಕ್ಷೆಯಲ್ಲಿದ್ದ 26 ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>