ನವದೆಹಲಿ: ಇಸ್ರೇಲ್ನಿಂದ 212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಂದು (ಶುಕ್ರವಾರ) ಬೆಳಿಗ್ಗೆ ದೆಹಲಿಗೆ ಬಂದಿಳಿದಿದೆ.
‘ಆಪರೇಷನ್ ಅಜಯ್’ ಕಾರ್ಯಾಚರಣೆಯ ಅಡಿಯಲ್ಲಿ ಇಸ್ರೇಲ್ನಿಂದ ಹೊರಟ ಮೊದಲ ವಿಮಾನದಲ್ಲಿ 212 ಮಂದಿ ಭಾರತೀಯರನ್ನು ತಾಯ್ನಾಡಿಗೆ ವಾಪಸ್ ಕರೆತರಲಾಗಿದೆ.
ಇಸ್ರೇಲ್ನಿಂದ ಹೊರಟ ವಿಮಾನವು ಇಂದು ಬೆಳಿಗ್ಗೆ ದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಪ್ರಯಾಣಿಕರನ್ನು ಬರಮಾಡಿಕೊಂಡಿದ್ದಾರೆ.
ಪ್ರಯಾಣದ ವೇಳೆ ಭಾರತೀಯರು ‘ವಂದೇ ಮಾತರಂ’, ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಇದರ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.