<p>ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong>ಬೈರೂತ್:</strong> ಅಯತೊಲ್ಲಾ ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇರಾನ್ ಬೆಂಬಲಿತ ಬಂಡುಕೋರ ಸಂಘಟನೆ ಹಿಜ್ಬುಲ್ಲಾ ಸೋಮವಾರ ಹೇಳಿದೆ.</p> <p><a href="https://www.prajavani.net/amp/story/news/world-news/hezbollah-missile-attack-israel-retaliation-khamenei-death-3806409">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ವಾಷಿಂಗ್ಟನ್:</strong> ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕ ಆಂಥ್ರೋಪಿಕ್ನ ‘ಕ್ಲಾಡ್’ ಎ.ಐ ಬಳಕೆ ಮಾಡಿತ್ತು ಎಂದು ರಾಯಿಟರ್ಸ್, ದಿ ಗಾರ್ಡಿಯನ್ ಸಹಿತ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.</p><p><a href="https://www.prajavani.net/amp/story/news/world-news/us-military-used-claude-ai-for-iran-attack-reports-3806394">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಟೆಹರಾನ್/ಜೆರುಸಲೇಮ್/ದುಬೈ</strong>: ಅಮೆರಿಕ ಹಾಗೂ ಇಸ್ರೇಲ್ ತನ್ನ ಮೇಲೆ ನಡೆಸುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಭಾನುವಾರ ದಾಳಿ ನಡೆಸಿದೆ. ಇಸ್ರೇಲ್ ಕೇಂದ್ರ ಭಾಗದ ನಗರ ಬೆಟ್ ಶೆಮೆಷ್ ಮೇಲೆ ಇರಾನ್ ನಡೆಸಿದ ಕ್ಷಿಪಣಿಗಳ ದಾಳಿಯಲ್ಲಿ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ.</p><p><a href="https://www.prajavani.net/news/world-news/iran-retaliatory-attack-on-us-israel-nine-killed-missile-strike-3806174">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಮೈಸೂರು</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರಾದ ಮೈಸೂರು ಜಿಲ್ಲೆಯಲ್ಲಿ ‘ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿ’ ಒಂದೂ ಇಲ್ಲ ಎಂಬ ಅಂಶ ಹೊರಬಿದ್ದಿದೆ. ಇದು, ಈ ‘ಸಾಮಾಜಿಕ ಪಿಡುಗು’ ನಿಂತಿಲ್ಲದಿರುವುದಕ್ಕೆ ಕನ್ನಡಿ ಹಿಡಿದಿದೆ.</p><p><a href="https://www.prajavani.net/district/mysuru/mysuru-district-child-marriage-free-gram-panchayats-not-found-siddaramaiah-home-town-3805454">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ದೇವನಹಳ್ಳಿ</strong>: ಇರಾನ್–ಇಸ್ರೇಲ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವುದರೊಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ 37 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.</p><p><a href="https://www.prajavani.net/district/bangaluru-rural/iran-israel-war-flight-cancellations-bengaluru-airport-west-asia-crisis-3806324">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ಪಶ್ಚಿಮ ಎಷ್ಯಾದಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರ ಜೊತೆ ಚರ್ಚಿಸಿದ್ದಾರೆ.</p> <p><a href="https://www.prajavani.net/news/india-news/pm-modi-telephonic-conversation-with-benjamin-netanyahu-on-west-asia-crisis-3806403">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು</strong>: ಪಶ್ಚಿಮ ಏಷ್ಯಾ ಮತ್ತು ಕೊಲ್ಲಿ ದೇಶಗಳ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವವರು ಆಯಾ ದೇಶಗಳ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ.</p><p><a href="https://www.prajavani.net/news/karnataka-news/karnataka-government-helpline-for-kannadigas-in-west-asia-war-zone-3806082">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ಫೆಬ್ರುವರಿ ತಿಂಗಳಿನಲ್ಲಿ ವಾಹನಗಳ ಮಾರಾಟವು ಏರಿಕೆ ಕಂಡಿದೆ. ಗ್ರಾಹಕರಿಂದ ವಾಹನಗಳಿಗೆ ಬೇಡಿಕೆ ಹೆಚ್ಚಾಗಿರುವುದು, ಹೊಸ ಮಾದರಿಯ ವಾಹನಗಳ ಬಿಡುಗಡೆ, ವಾಹನಗಳಲ್ಲಿನ ಸುಧಾರಿತ ತಂತ್ರಜ್ಞಾನ ಸೇರಿದಂತೆ ವಿವಿಧ ಅಂಶಗಳು ಮಾರಾಟ ಹೆಚ್ಚಳಕ್ಕೆ ಕಾರಣವಾಗಿವೆ ಎಂದು ಕಂಪನಿಗಳು ತಿಳಿಸಿವೆ.</p><p><a href="https://www.prajavani.net/automobile/vehicle-world/automobile-sales-growth-february-india-vehicle-market-trends-3805978">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ</strong>: ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳಿಂದ ಪ್ರಯಾಣದ ಯೋಜನೆಗಳಲ್ಲಿ ವ್ಯತ್ಯಾಸವಾಗಿರುವ ವಿದೇಶಿ ಪ್ರಜೆಗಳಿಗೆ ವೀಸಾ ವಿಸ್ತರಣೆ ಅಥವಾ ದೇಶದಲ್ಲಿ ತಮ್ಮ ವಾಸ್ತವ್ಯವನ್ನು ಕ್ರಮಬದ್ಧಗೊಳಿಸಲು ಹತ್ತಿರದ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿಯನ್ನು (ಎಫ್ಆರ್ಆರ್ಒ) ಸಂಪರ್ಕಿಸುವಂತೆ ಭಾರತದ ವಿದೇಶಾಂಗ ಸಚಿವಾಲಯ (ಎಂಇಎ) ತಿಳಿಸಿದೆ. </p><p><a href="https://www.prajavani.net/news/india-news/mea-india-visa-extension-foreign-nationals-middle-east-crisis-3805830">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಕೋಲ್ಕತ್ತ:</strong> ಅತ್ಯಗತ್ಯ ಸಂದರ್ಭದಲ್ಲಿ ಮರಳಿ ಅರಳಿದ ಸಂಜು ಸ್ಯಾಮ್ಸನ್ ಭರ್ಜರಿ ಬ್ಯಾಟಿಂಗ್ನಿಂದಾಗಿ ‘ಹಾಲಿ ಚಾಂಪಿಯನ್’ ಭಾರತ ತಂಡವು ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ಗೆ ಲಗ್ಗೆ ಇಟ್ಟಿತು.<br></p><p><a href="https://www.prajavani.net/sports/cricket/india-beats-west-indies-to-reach-t-twenty-world-cup-semi-final-3806275">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong>ಬೈರೂತ್:</strong> ಅಯತೊಲ್ಲಾ ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇರಾನ್ ಬೆಂಬಲಿತ ಬಂಡುಕೋರ ಸಂಘಟನೆ ಹಿಜ್ಬುಲ್ಲಾ ಸೋಮವಾರ ಹೇಳಿದೆ.</p> <p><a href="https://www.prajavani.net/amp/story/news/world-news/hezbollah-missile-attack-israel-retaliation-khamenei-death-3806409">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ವಾಷಿಂಗ್ಟನ್:</strong> ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕ ಆಂಥ್ರೋಪಿಕ್ನ ‘ಕ್ಲಾಡ್’ ಎ.ಐ ಬಳಕೆ ಮಾಡಿತ್ತು ಎಂದು ರಾಯಿಟರ್ಸ್, ದಿ ಗಾರ್ಡಿಯನ್ ಸಹಿತ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.</p><p><a href="https://www.prajavani.net/amp/story/news/world-news/us-military-used-claude-ai-for-iran-attack-reports-3806394">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಟೆಹರಾನ್/ಜೆರುಸಲೇಮ್/ದುಬೈ</strong>: ಅಮೆರಿಕ ಹಾಗೂ ಇಸ್ರೇಲ್ ತನ್ನ ಮೇಲೆ ನಡೆಸುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಭಾನುವಾರ ದಾಳಿ ನಡೆಸಿದೆ. ಇಸ್ರೇಲ್ ಕೇಂದ್ರ ಭಾಗದ ನಗರ ಬೆಟ್ ಶೆಮೆಷ್ ಮೇಲೆ ಇರಾನ್ ನಡೆಸಿದ ಕ್ಷಿಪಣಿಗಳ ದಾಳಿಯಲ್ಲಿ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ.</p><p><a href="https://www.prajavani.net/news/world-news/iran-retaliatory-attack-on-us-israel-nine-killed-missile-strike-3806174">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಮೈಸೂರು</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರಾದ ಮೈಸೂರು ಜಿಲ್ಲೆಯಲ್ಲಿ ‘ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿ’ ಒಂದೂ ಇಲ್ಲ ಎಂಬ ಅಂಶ ಹೊರಬಿದ್ದಿದೆ. ಇದು, ಈ ‘ಸಾಮಾಜಿಕ ಪಿಡುಗು’ ನಿಂತಿಲ್ಲದಿರುವುದಕ್ಕೆ ಕನ್ನಡಿ ಹಿಡಿದಿದೆ.</p><p><a href="https://www.prajavani.net/district/mysuru/mysuru-district-child-marriage-free-gram-panchayats-not-found-siddaramaiah-home-town-3805454">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ದೇವನಹಳ್ಳಿ</strong>: ಇರಾನ್–ಇಸ್ರೇಲ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವುದರೊಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ 37 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.</p><p><a href="https://www.prajavani.net/district/bangaluru-rural/iran-israel-war-flight-cancellations-bengaluru-airport-west-asia-crisis-3806324">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ಪಶ್ಚಿಮ ಎಷ್ಯಾದಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರ ಜೊತೆ ಚರ್ಚಿಸಿದ್ದಾರೆ.</p> <p><a href="https://www.prajavani.net/news/india-news/pm-modi-telephonic-conversation-with-benjamin-netanyahu-on-west-asia-crisis-3806403">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು</strong>: ಪಶ್ಚಿಮ ಏಷ್ಯಾ ಮತ್ತು ಕೊಲ್ಲಿ ದೇಶಗಳ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವವರು ಆಯಾ ದೇಶಗಳ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ.</p><p><a href="https://www.prajavani.net/news/karnataka-news/karnataka-government-helpline-for-kannadigas-in-west-asia-war-zone-3806082">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ಫೆಬ್ರುವರಿ ತಿಂಗಳಿನಲ್ಲಿ ವಾಹನಗಳ ಮಾರಾಟವು ಏರಿಕೆ ಕಂಡಿದೆ. ಗ್ರಾಹಕರಿಂದ ವಾಹನಗಳಿಗೆ ಬೇಡಿಕೆ ಹೆಚ್ಚಾಗಿರುವುದು, ಹೊಸ ಮಾದರಿಯ ವಾಹನಗಳ ಬಿಡುಗಡೆ, ವಾಹನಗಳಲ್ಲಿನ ಸುಧಾರಿತ ತಂತ್ರಜ್ಞಾನ ಸೇರಿದಂತೆ ವಿವಿಧ ಅಂಶಗಳು ಮಾರಾಟ ಹೆಚ್ಚಳಕ್ಕೆ ಕಾರಣವಾಗಿವೆ ಎಂದು ಕಂಪನಿಗಳು ತಿಳಿಸಿವೆ.</p><p><a href="https://www.prajavani.net/automobile/vehicle-world/automobile-sales-growth-february-india-vehicle-market-trends-3805978">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ</strong>: ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳಿಂದ ಪ್ರಯಾಣದ ಯೋಜನೆಗಳಲ್ಲಿ ವ್ಯತ್ಯಾಸವಾಗಿರುವ ವಿದೇಶಿ ಪ್ರಜೆಗಳಿಗೆ ವೀಸಾ ವಿಸ್ತರಣೆ ಅಥವಾ ದೇಶದಲ್ಲಿ ತಮ್ಮ ವಾಸ್ತವ್ಯವನ್ನು ಕ್ರಮಬದ್ಧಗೊಳಿಸಲು ಹತ್ತಿರದ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿಯನ್ನು (ಎಫ್ಆರ್ಆರ್ಒ) ಸಂಪರ್ಕಿಸುವಂತೆ ಭಾರತದ ವಿದೇಶಾಂಗ ಸಚಿವಾಲಯ (ಎಂಇಎ) ತಿಳಿಸಿದೆ. </p><p><a href="https://www.prajavani.net/news/india-news/mea-india-visa-extension-foreign-nationals-middle-east-crisis-3805830">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಕೋಲ್ಕತ್ತ:</strong> ಅತ್ಯಗತ್ಯ ಸಂದರ್ಭದಲ್ಲಿ ಮರಳಿ ಅರಳಿದ ಸಂಜು ಸ್ಯಾಮ್ಸನ್ ಭರ್ಜರಿ ಬ್ಯಾಟಿಂಗ್ನಿಂದಾಗಿ ‘ಹಾಲಿ ಚಾಂಪಿಯನ್’ ಭಾರತ ತಂಡವು ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ಗೆ ಲಗ್ಗೆ ಇಟ್ಟಿತು.<br></p><p><a href="https://www.prajavani.net/sports/cricket/india-beats-west-indies-to-reach-t-twenty-world-cup-semi-final-3806275">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>