<p><strong>ನವದೆಹಲಿ</strong>: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಬುಧವಾರ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ಗಾಜಾ ಪಟ್ಟಿಯಲ್ಲಿ ಶಾಂತಿ ಮರುಸ್ಥಾಪನೆಗೆ ನಡೆಯುತ್ತಿರುವ ಪ್ರಯತ್ನಗಳನ್ನು ವಿವರಿಸಿದ್ದಾರೆ. ಇದೇ ವೇಳೆ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ನ ದೃಢ ಸಂಕಲ್ಪವನ್ನು ಅವರು ಪುನರುಚ್ಚರಿಸಿದ್ದಾರೆ. </p>.<p>‘ಉಭಯ ದೇಶಗಳ ನಾಯಕರು ಪರಸ್ಪರ ಹೊಸ ವರ್ಷದ ಶುಭಾಶಯ ಕೋರಿ, ಎರಡೂ ದೇಶಗಳ ಜನತೆಗೆ ಶಾಂತಿ, ಸಮೃದ್ಧಿಯನ್ನು ಹಾರೈಸಿದರು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಯ ಪ್ರಕಟಣೆ ತಿಳಿಸಿದೆ. </p>.<p>‘ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಜಾರಿಗೆ ತರಲು ಉದ್ದೇಸಿರುವ ಶಾಂತಿ ಯೋಜನೆ ಕುರಿತು ನೆತನ್ಯಾಹು, ಮೋದಿ ಅವರಿಗೆ ವಿವರಿಸಿದರು. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರ ವೃದ್ಧಿಯ ಬಗ್ಗೆಯೂ ಮಾತುಕತೆ ನಡೆಯಿತು’ ಎಂದು ಪ್ರಕಟಣೆ ವಿವರಿಸಿದೆ. </p>.<p class="bodytext">‘ಮಾತುಕತೆ ವೇಳೆ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ನ ಶೂನ್ಯ ಸಹನೆ ನೀತಿಯನ್ನು ಅಲ್ಲಿನ ಪ್ರಧಾನಿ ಮತ್ತೆ ಒತ್ತಿ ಹೇಳಿದ್ದಾರೆ. ನನ್ನ ಸ್ನೇಹಿತನೊಂದಿಗೆ ಮಾತನಾಡಿ ಸಂತೋಷವಾಯಿತು’ ಎಂದು ಪ್ರಧಾನಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಬುಧವಾರ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ಗಾಜಾ ಪಟ್ಟಿಯಲ್ಲಿ ಶಾಂತಿ ಮರುಸ್ಥಾಪನೆಗೆ ನಡೆಯುತ್ತಿರುವ ಪ್ರಯತ್ನಗಳನ್ನು ವಿವರಿಸಿದ್ದಾರೆ. ಇದೇ ವೇಳೆ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ನ ದೃಢ ಸಂಕಲ್ಪವನ್ನು ಅವರು ಪುನರುಚ್ಚರಿಸಿದ್ದಾರೆ. </p>.<p>‘ಉಭಯ ದೇಶಗಳ ನಾಯಕರು ಪರಸ್ಪರ ಹೊಸ ವರ್ಷದ ಶುಭಾಶಯ ಕೋರಿ, ಎರಡೂ ದೇಶಗಳ ಜನತೆಗೆ ಶಾಂತಿ, ಸಮೃದ್ಧಿಯನ್ನು ಹಾರೈಸಿದರು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಯ ಪ್ರಕಟಣೆ ತಿಳಿಸಿದೆ. </p>.<p>‘ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಜಾರಿಗೆ ತರಲು ಉದ್ದೇಸಿರುವ ಶಾಂತಿ ಯೋಜನೆ ಕುರಿತು ನೆತನ್ಯಾಹು, ಮೋದಿ ಅವರಿಗೆ ವಿವರಿಸಿದರು. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರ ವೃದ್ಧಿಯ ಬಗ್ಗೆಯೂ ಮಾತುಕತೆ ನಡೆಯಿತು’ ಎಂದು ಪ್ರಕಟಣೆ ವಿವರಿಸಿದೆ. </p>.<p class="bodytext">‘ಮಾತುಕತೆ ವೇಳೆ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ನ ಶೂನ್ಯ ಸಹನೆ ನೀತಿಯನ್ನು ಅಲ್ಲಿನ ಪ್ರಧಾನಿ ಮತ್ತೆ ಒತ್ತಿ ಹೇಳಿದ್ದಾರೆ. ನನ್ನ ಸ್ನೇಹಿತನೊಂದಿಗೆ ಮಾತನಾಡಿ ಸಂತೋಷವಾಯಿತು’ ಎಂದು ಪ್ರಧಾನಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>