<p><strong>ಶ್ರೀಹರಿಕೋಟ: </strong>ಭೂ ಸರ್ವೇಕ್ಷಣಾ ಉಪಗ್ರಹ ಹಾಗೂ ಇತರ 14 ಉಪಗ್ರಹಗಳನ್ನು ಹೊತ್ತು ನಭಕ್ಕೆ ಚಿಮ್ಮಿದ ಪಿಎಸ್ಎಲ್ವಿ–ಸಿ62 ರಾಕೆಟ್ ಯೋಜನೆಯ ಕಾರ್ಯಾಚರಣೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎಂದು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಸೋಮವಾರ ಹೇಳಿದ್ದಾರೆ.</p><p>ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 44.4 ಮೀಟರ್ ಎತ್ತರದ ರಾಕೆಟ್ ಇಂದು (ಸೋಮವಾರ) ಬೆಳಿಗ್ಗೆ 10.18ಕ್ಕೆ ಯಶಸ್ವಿಯಾಗಿ ಉಡಾವಣೆಗೊಂಡಿತು.</p><p>ಇಸ್ರೊ ಅಂಗಸಂಸ್ಥೆಯಾದ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ ನೇತೃತ್ವದಲ್ಲಿ ದೇಶೀಯ ಹಾಗೂ ವಿದೇಶದ 14 ಉಪಗ್ರಹಗಳನ್ನು 17 ನಿಮಿಷಗಳ ಪ್ರಯಾಣದ ನಂತರ, ಸುಮಾರು 511 ಕಿ.ಮೀ ಎತ್ತರದಲ್ಲಿ ಕಕ್ಷಗೆ ಸೇರಿಸುವ ಗುರಿ ಇದರದ್ದಾಗಿತ್ತು.</p><p>ಇಸ್ರೊ ಮಾಹಿತಿ ಪ್ರಕಾರ, ಮೊದಲೆರಡು ಹಂತಗಳ ಕಾರ್ಯಾಚರಣೆಯು ನಿರೀಕ್ಷಿತವಾಗಿ ಸಾಗಿತು. ಆದರೆ, ಮೂರನೇ ಹಂತದ ವೇಳೆ ಅಡಚಣೆ ಎದುರಾಗಿದೆ.</p>.ISRO: ಶ್ರೀಹರಿಕೋಟಾದಿಂದ ನಭಕ್ಕೆ ಚಿಮ್ಮಿದ ಪಿಎಸ್ಎಲ್ವಿ–ಸಿ 62 ರಾಕೆಟ್.<p>ಮಿಷನ್ ಕಂಟ್ರೋಲ್ನಲ್ಲಿ ತಂಡವನ್ನುದ್ದೇಶಿಸಿ ಮಾತನಾಡಿರುವ ನಾರಾಯಣನ್, 'ಪಿಎಸ್ಎಲ್ವಿ ಕಾರ್ಯಾಚರಣೆಯು ನಾಲ್ಕು ಹಂತಗಳನ್ನು ಹೊಂದಿದೆ. ಮೂರನೇ ಹಂತದ ವರೆಗಿನ ಕಾರ್ಯಾಚರಣೆಯು ಯೋಜನೆಯಂತೆಯೇ ಸಾಗಿತು. ಆದರೆ, ಅದಾದ ನಂತರ ಎದುರಾಗಿರುವ ತಾಂತ್ರಿಕ ದೋಷದಿಂದಾಗಿ ಹಾರಾಟವು ನಿಗದಿತ ಮಾರ್ಗದಲ್ಲಿ ಸಾಗುತ್ತಿಲ್ಲ. ಎಲ್ಲ ಮಾಹಿತಿಗಳನ್ನು ವಿಶ್ಲೇಷಿಸುತ್ತಿದ್ದೇವೆ. ಶೀಘ್ರವೇ ಈ ಕುರಿತ ಮಾಹಿತಿ ನೀಡುತ್ತೇವೆ' ಎಂದು ತಿಳಿಸಿದ್ದಾರೆ.</p><p>ಇದೇ ವಿಚಾರವಾಗಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಇಸ್ರೊ ಪೋಸ್ಟ್ ಹಂಚಿಕೊಂಡಿದೆ. 'ಪಿಎಸ್ಎಲ್ವಿ–ಸಿ62 ಕಾರ್ಯಾಚರಣೆಯ ಮೂರನೇ ಹಂತದಲ್ಲಿ ವೈಪರೀತ್ಯ ಕಂಡು ಬಂದಿದೆ. ವಿಶ್ಲೇಷಣೆ ಆರಂಭವಾಗಿದೆ' ಎಂದು ಮಾಹಿತಿ ನೀಡಿದೆ.</p><p>ಇದು, 2026ರಲ್ಲಿ ಇಸ್ರೊದ ಮೊದಲ ಉಡಾವಣೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀಹರಿಕೋಟ: </strong>ಭೂ ಸರ್ವೇಕ್ಷಣಾ ಉಪಗ್ರಹ ಹಾಗೂ ಇತರ 14 ಉಪಗ್ರಹಗಳನ್ನು ಹೊತ್ತು ನಭಕ್ಕೆ ಚಿಮ್ಮಿದ ಪಿಎಸ್ಎಲ್ವಿ–ಸಿ62 ರಾಕೆಟ್ ಯೋಜನೆಯ ಕಾರ್ಯಾಚರಣೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎಂದು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಸೋಮವಾರ ಹೇಳಿದ್ದಾರೆ.</p><p>ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 44.4 ಮೀಟರ್ ಎತ್ತರದ ರಾಕೆಟ್ ಇಂದು (ಸೋಮವಾರ) ಬೆಳಿಗ್ಗೆ 10.18ಕ್ಕೆ ಯಶಸ್ವಿಯಾಗಿ ಉಡಾವಣೆಗೊಂಡಿತು.</p><p>ಇಸ್ರೊ ಅಂಗಸಂಸ್ಥೆಯಾದ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ ನೇತೃತ್ವದಲ್ಲಿ ದೇಶೀಯ ಹಾಗೂ ವಿದೇಶದ 14 ಉಪಗ್ರಹಗಳನ್ನು 17 ನಿಮಿಷಗಳ ಪ್ರಯಾಣದ ನಂತರ, ಸುಮಾರು 511 ಕಿ.ಮೀ ಎತ್ತರದಲ್ಲಿ ಕಕ್ಷಗೆ ಸೇರಿಸುವ ಗುರಿ ಇದರದ್ದಾಗಿತ್ತು.</p><p>ಇಸ್ರೊ ಮಾಹಿತಿ ಪ್ರಕಾರ, ಮೊದಲೆರಡು ಹಂತಗಳ ಕಾರ್ಯಾಚರಣೆಯು ನಿರೀಕ್ಷಿತವಾಗಿ ಸಾಗಿತು. ಆದರೆ, ಮೂರನೇ ಹಂತದ ವೇಳೆ ಅಡಚಣೆ ಎದುರಾಗಿದೆ.</p>.ISRO: ಶ್ರೀಹರಿಕೋಟಾದಿಂದ ನಭಕ್ಕೆ ಚಿಮ್ಮಿದ ಪಿಎಸ್ಎಲ್ವಿ–ಸಿ 62 ರಾಕೆಟ್.<p>ಮಿಷನ್ ಕಂಟ್ರೋಲ್ನಲ್ಲಿ ತಂಡವನ್ನುದ್ದೇಶಿಸಿ ಮಾತನಾಡಿರುವ ನಾರಾಯಣನ್, 'ಪಿಎಸ್ಎಲ್ವಿ ಕಾರ್ಯಾಚರಣೆಯು ನಾಲ್ಕು ಹಂತಗಳನ್ನು ಹೊಂದಿದೆ. ಮೂರನೇ ಹಂತದ ವರೆಗಿನ ಕಾರ್ಯಾಚರಣೆಯು ಯೋಜನೆಯಂತೆಯೇ ಸಾಗಿತು. ಆದರೆ, ಅದಾದ ನಂತರ ಎದುರಾಗಿರುವ ತಾಂತ್ರಿಕ ದೋಷದಿಂದಾಗಿ ಹಾರಾಟವು ನಿಗದಿತ ಮಾರ್ಗದಲ್ಲಿ ಸಾಗುತ್ತಿಲ್ಲ. ಎಲ್ಲ ಮಾಹಿತಿಗಳನ್ನು ವಿಶ್ಲೇಷಿಸುತ್ತಿದ್ದೇವೆ. ಶೀಘ್ರವೇ ಈ ಕುರಿತ ಮಾಹಿತಿ ನೀಡುತ್ತೇವೆ' ಎಂದು ತಿಳಿಸಿದ್ದಾರೆ.</p><p>ಇದೇ ವಿಚಾರವಾಗಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಇಸ್ರೊ ಪೋಸ್ಟ್ ಹಂಚಿಕೊಂಡಿದೆ. 'ಪಿಎಸ್ಎಲ್ವಿ–ಸಿ62 ಕಾರ್ಯಾಚರಣೆಯ ಮೂರನೇ ಹಂತದಲ್ಲಿ ವೈಪರೀತ್ಯ ಕಂಡು ಬಂದಿದೆ. ವಿಶ್ಲೇಷಣೆ ಆರಂಭವಾಗಿದೆ' ಎಂದು ಮಾಹಿತಿ ನೀಡಿದೆ.</p><p>ಇದು, 2026ರಲ್ಲಿ ಇಸ್ರೊದ ಮೊದಲ ಉಡಾವಣೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>