<p><strong>ನವದೆಹಲಿ:</strong> ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವಾಗಿ ಘೋಷಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p>ಈ ಬಗ್ಗೆ ಬಿಜೆಪಿ ನಾಯಕ ಹಾಗೂ ರಾಜ್ಯ ಸಭೆ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಿದ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆ.ಬಿ. ಪಾರ್ದೀವಾಲಾ ಅವರಿದ್ದ ಪೀಠಕ್ಕೆ ಕೇಂದ್ರ ಸರ್ಕಾರ ಈ ಮಾಹಿತಿ ನೀಡಿದೆ. </p>.<p>‘ಪ್ರಸ್ತುತ ಸಂಸ್ಕೃತಿ ಸಚಿವಾಲಯದಲ್ಲಿ ಈ ಪ್ರಕ್ರಿಯೆ ನಡೆಯುತ್ತಿದೆ. ಅರ್ಜಿದಾರರು ಬಯಸಿದರೆ ಹೆಚ್ಚುವರಿ ಮಾಹಿತಿಯನ್ನೂ ಸಲ್ಲಿಸಬಹುದೆಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದ್ದಾರೆ. ಈ ವಿಷಯ ಸಂಬಂಧ ತಾವು ಸರ್ಕಾರದ ಪ್ರತಿನಿಧಿಯಾಗಲು ಬಯಸುತ್ತೀರಾ? ನಿಮ್ಮ ಅಭಿಪ್ರಾಯವೇನು’ ಎಂದು ಪೀಠವು ಅರ್ಜಿದಾರ ಸ್ವಾಮಿ ಅವರನ್ನು ಪ್ರಶ್ನಿಸಿತು.</p>.<p>ಈ ಬಗ್ಗೆ ನಿರ್ಧಾರಕ್ಕೆ ಬರಲು ಕೇಂದ್ರ ಸರ್ಕಾರಕ್ಕೆ ಸೂಚಿಸಿದ ಪೀಠವು, ಇದರಲ್ಲಿ ಸ್ವಾಮಿ ಅವರಿಗೆ ಅಸಮಾಧಾನವಿದ್ದರೆ ಮತ್ತು ಅವರ ಮಧ್ಯಂತರ ಅರ್ಜಿ ವಿಲೇವಾರಿ ಮಾಡಿದರೆ ಅವರು ಮುಂದಿನ ಹಂತಕ್ಕೆ ಹೋಗಲು ಸ್ವತಂತ್ರರು ಎಂದು ಹೇಳಿತು. ಮುಂದಿನ ವಿಚಾರಣೆಯನ್ನು ಫೆಬ್ರುವರಿಯಲ್ಲಿ ನಡೆಸುವುದಾಗಿ ಪ್ರಕಟಿಸಿತು.</p>.<p>‘ನಾನು ಯಾರನ್ನೂ ಭೇಟಿಯಾಗಲು ಬಯಸುವುದಿಲ್ಲ. ನಾವು ಒಂದೇ ಪಕ್ಷದಲ್ಲಿದ್ದೇವೆ. ಈ ವಿಷಯ ನಮ್ಮ ಪ್ರಣಾಳಿಕೆಯಲ್ಲಿತ್ತು. ಅವರು ಆರು ವಾರಗಳಲ್ಲಿ ನಿರ್ಧರಿಸಲಿ ಅಥವಾ ಏನಾದರೂ ಮಾಡಲಿ. ನಾನು ಮತ್ತೆ ಬರುತ್ತೇನೆ’ ಎಂದು ಹೇಳಿದ ಸ್ವಾಮಿ ಅವರು ಕಾನೂನು ಸಮರ ಮುಂದುವರಿಸುವ ಮುನ್ಸೂಚನೆ ನೀಡಿದರು.</p>.<p>ವಿಚಾರಣೆ ಆರಂಭದಲ್ಲಿ ಸ್ವಾಮಿ ಅವರು, 2019ರಲ್ಲಿ ಆಗಿನ ಸಂಸ್ಕೃತಿ ಸಚಿವ ಪ್ರಹ್ಲಾದ್ ಪಟೇಲ್ ರಾಮಸೇತುವನ್ನು ರಾಷ್ಟ್ರೀಯ ಪಾರಂಪಾರಿಕ ಸ್ಮಾರಕವೆಂದು ಘೋಷಿಸಲು ಶಿಫಾರಸು ಮಾಡಿದ್ದರು. ‘ಸಮಸ್ಯೆಯೆಂದರೆ ಸರ್ಕಾರ ‘ಹೌದು’ ಅಥವಾ ‘ಇಲ್ಲ’ ಎಂದು ಹೇಳಬೇಕಾಗಿರುವುದು’ ಎಂದು ಹೇಳಿದರು. </p>.<p>ಇದಕ್ಕೂ ಮೊದಲು ಈ ಅರ್ಜಿ ತ್ರಿಸದ್ಯ ಪೀಠದ ಎದುರು ವಿಚಾರಣೆಗೆ ಬಂದಾಗ ಪೀಠದಲ್ಲಿದ್ದ ಮತ್ತೊಬ್ಬ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರು ಈ ವಿಷಯದಲ್ಲಿ ಮೊದಲೇ ವಕೀಲರಾಗಿ ಕಾಣಿಸಿಕೊಂಡಿದ್ದರಿಂದ ವಿಚಾರಣೆಯಿಂದ ಹೊರಗುಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವಾಗಿ ಘೋಷಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p>ಈ ಬಗ್ಗೆ ಬಿಜೆಪಿ ನಾಯಕ ಹಾಗೂ ರಾಜ್ಯ ಸಭೆ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಿದ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆ.ಬಿ. ಪಾರ್ದೀವಾಲಾ ಅವರಿದ್ದ ಪೀಠಕ್ಕೆ ಕೇಂದ್ರ ಸರ್ಕಾರ ಈ ಮಾಹಿತಿ ನೀಡಿದೆ. </p>.<p>‘ಪ್ರಸ್ತುತ ಸಂಸ್ಕೃತಿ ಸಚಿವಾಲಯದಲ್ಲಿ ಈ ಪ್ರಕ್ರಿಯೆ ನಡೆಯುತ್ತಿದೆ. ಅರ್ಜಿದಾರರು ಬಯಸಿದರೆ ಹೆಚ್ಚುವರಿ ಮಾಹಿತಿಯನ್ನೂ ಸಲ್ಲಿಸಬಹುದೆಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದ್ದಾರೆ. ಈ ವಿಷಯ ಸಂಬಂಧ ತಾವು ಸರ್ಕಾರದ ಪ್ರತಿನಿಧಿಯಾಗಲು ಬಯಸುತ್ತೀರಾ? ನಿಮ್ಮ ಅಭಿಪ್ರಾಯವೇನು’ ಎಂದು ಪೀಠವು ಅರ್ಜಿದಾರ ಸ್ವಾಮಿ ಅವರನ್ನು ಪ್ರಶ್ನಿಸಿತು.</p>.<p>ಈ ಬಗ್ಗೆ ನಿರ್ಧಾರಕ್ಕೆ ಬರಲು ಕೇಂದ್ರ ಸರ್ಕಾರಕ್ಕೆ ಸೂಚಿಸಿದ ಪೀಠವು, ಇದರಲ್ಲಿ ಸ್ವಾಮಿ ಅವರಿಗೆ ಅಸಮಾಧಾನವಿದ್ದರೆ ಮತ್ತು ಅವರ ಮಧ್ಯಂತರ ಅರ್ಜಿ ವಿಲೇವಾರಿ ಮಾಡಿದರೆ ಅವರು ಮುಂದಿನ ಹಂತಕ್ಕೆ ಹೋಗಲು ಸ್ವತಂತ್ರರು ಎಂದು ಹೇಳಿತು. ಮುಂದಿನ ವಿಚಾರಣೆಯನ್ನು ಫೆಬ್ರುವರಿಯಲ್ಲಿ ನಡೆಸುವುದಾಗಿ ಪ್ರಕಟಿಸಿತು.</p>.<p>‘ನಾನು ಯಾರನ್ನೂ ಭೇಟಿಯಾಗಲು ಬಯಸುವುದಿಲ್ಲ. ನಾವು ಒಂದೇ ಪಕ್ಷದಲ್ಲಿದ್ದೇವೆ. ಈ ವಿಷಯ ನಮ್ಮ ಪ್ರಣಾಳಿಕೆಯಲ್ಲಿತ್ತು. ಅವರು ಆರು ವಾರಗಳಲ್ಲಿ ನಿರ್ಧರಿಸಲಿ ಅಥವಾ ಏನಾದರೂ ಮಾಡಲಿ. ನಾನು ಮತ್ತೆ ಬರುತ್ತೇನೆ’ ಎಂದು ಹೇಳಿದ ಸ್ವಾಮಿ ಅವರು ಕಾನೂನು ಸಮರ ಮುಂದುವರಿಸುವ ಮುನ್ಸೂಚನೆ ನೀಡಿದರು.</p>.<p>ವಿಚಾರಣೆ ಆರಂಭದಲ್ಲಿ ಸ್ವಾಮಿ ಅವರು, 2019ರಲ್ಲಿ ಆಗಿನ ಸಂಸ್ಕೃತಿ ಸಚಿವ ಪ್ರಹ್ಲಾದ್ ಪಟೇಲ್ ರಾಮಸೇತುವನ್ನು ರಾಷ್ಟ್ರೀಯ ಪಾರಂಪಾರಿಕ ಸ್ಮಾರಕವೆಂದು ಘೋಷಿಸಲು ಶಿಫಾರಸು ಮಾಡಿದ್ದರು. ‘ಸಮಸ್ಯೆಯೆಂದರೆ ಸರ್ಕಾರ ‘ಹೌದು’ ಅಥವಾ ‘ಇಲ್ಲ’ ಎಂದು ಹೇಳಬೇಕಾಗಿರುವುದು’ ಎಂದು ಹೇಳಿದರು. </p>.<p>ಇದಕ್ಕೂ ಮೊದಲು ಈ ಅರ್ಜಿ ತ್ರಿಸದ್ಯ ಪೀಠದ ಎದುರು ವಿಚಾರಣೆಗೆ ಬಂದಾಗ ಪೀಠದಲ್ಲಿದ್ದ ಮತ್ತೊಬ್ಬ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರು ಈ ವಿಷಯದಲ್ಲಿ ಮೊದಲೇ ವಕೀಲರಾಗಿ ಕಾಣಿಸಿಕೊಂಡಿದ್ದರಿಂದ ವಿಚಾರಣೆಯಿಂದ ಹೊರಗುಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>