<p><strong>ನವದೆಹಲಿ:</strong> ‘ರೈತರ ಪ್ರತಿಭಟನೆಗೆ ಸಂಬಂಧಿಸಿದ ವಿಷಯಗಳು ತೀರಾ ಗಂಭೀರವಾದವು. ಇದಕ್ಕೆ ಸಂಬಂಧಿಸಿದಂತೆ ಕೇವಲ ಪ್ರಚಾರಕ್ಕಾಗಿ ಸಾರ್ವಜನಿತ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಬಾರದು’ ಎಂದು ಸುಪ್ರೀಂ ಕೋರ್ಟ್ ಕಿವಿಮಾತು ಹೇಳಿದೆ. </p>.<p>ಸಿಖ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಗ್ನೋಸ್ಟೋಸ್ ಥಿಯೋಸ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ಪೀಠವು ಈ ಮಾತು ಹೇಳಿತು.</p>.<p>ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ರೈತರ ಹಕ್ಕನ್ನು ಕೇಂದ್ರ ಮತ್ತು ಕೆಲ ರಾಜ್ಯ ಸರ್ಕಾರಗಳು ಹತ್ತಿಕ್ಕುತ್ತಿವೆ ಎಂದು ಅರ್ಜಿದಾರರು ಆರೋಪಿಸಿದ್ದರು. ಅರ್ಜಿಯನ್ನು ಗಮನಿಸುತ್ತಿದ್ದಂತೆ ಅಭಿಪ್ರಾಯ ವ್ಯಕ್ತಪಡಿಸಿದ ಪೀಠ, ಅದನ್ನು ವಾಪಸು ಪಡೆಯುವಂತೆಯೂ ಸೂಚಿಸಿತು.</p>.<p>‘ಕೇವಲ ಪ್ರಚಾರಕ್ಕಾಗಿ ಅರ್ಜಿ ಸಲ್ಲಿಸಬಾರದು. ನಿಜವಾಗಿ ಗಂಭೀರತೆ ಮತ್ತು ಬದ್ಧತೆ ಉಳ್ಳವರು ಮಾತ್ರ ಅರ್ಜಿ ಸಲ್ಲಿಸಬೇಕು. ದಿನಪತ್ರಿಕೆಗಳನ್ನು ನೀವು ಗಮನಿಸಿದ್ದೇ ಆಗಿದ್ದರೆ ಹೈಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುತ್ತಿರುವುದೂ ನಿಮಗೆ ತಿಳಿದಿರುತ್ತದೆ’ ಎಂದು ಪೀಠ ಹೇಳಿತು.</p>.<p>‘ಹೈಕೋರ್ಟ್ ಈ ಬಗ್ಗೆ ಈಗಾಗಲೇ ಕೆಲವು ನಿರ್ದೇಶನಗಳನ್ನು ನೀಡಿದೆ ಎಂಬುದು ನಿಮಗೆ ಗೊತ್ತಿರಬೇಕು. ಮುಂದಿನ ಬಾರಿ ಎಚ್ಚರಿಕೆಯಿಂದಿರಿ. ಇವು ಸಂಕೀರ್ಣವಾದ ವಿಷಯಗಳು. ಹೆಚ್ಚಿನ ಅಧ್ಯಯನವನ್ನು ಮಾಡಿ’ ಎಂದು ಅರ್ಜಿದಾರರ ಪರ ವಕೀಲರಿಗೆ ತಾಕೀತು ಮಾಡಿತು.</p>.<p>‘ನವದೆಹಲಿಗೆ ಸಂಪರ್ಕ ಕಲ್ಪಿಸುವ ಗಡಿಯನ್ನು ಮುಚ್ಚಿರುವ ಕೇಂದ್ರ, ಕೆಲ ರಾಜ್ಯ ಸರ್ಕಾರಗಳು ರೈತರಿಗೆ ಬೆದರಿಕೆ ಒಡ್ಡಿವೆ. ನಿಷೇಧಾಜ್ಧೆ ಹೇರಿವೆ. ಕೆಲವರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ನಿರ್ಬಂಧಿಸಲಾಗಿದೆ’ ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ರೈತರ ಪ್ರತಿಭಟನೆಗೆ ಸಂಬಂಧಿಸಿದ ವಿಷಯಗಳು ತೀರಾ ಗಂಭೀರವಾದವು. ಇದಕ್ಕೆ ಸಂಬಂಧಿಸಿದಂತೆ ಕೇವಲ ಪ್ರಚಾರಕ್ಕಾಗಿ ಸಾರ್ವಜನಿತ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಬಾರದು’ ಎಂದು ಸುಪ್ರೀಂ ಕೋರ್ಟ್ ಕಿವಿಮಾತು ಹೇಳಿದೆ. </p>.<p>ಸಿಖ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಗ್ನೋಸ್ಟೋಸ್ ಥಿಯೋಸ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ಪೀಠವು ಈ ಮಾತು ಹೇಳಿತು.</p>.<p>ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ರೈತರ ಹಕ್ಕನ್ನು ಕೇಂದ್ರ ಮತ್ತು ಕೆಲ ರಾಜ್ಯ ಸರ್ಕಾರಗಳು ಹತ್ತಿಕ್ಕುತ್ತಿವೆ ಎಂದು ಅರ್ಜಿದಾರರು ಆರೋಪಿಸಿದ್ದರು. ಅರ್ಜಿಯನ್ನು ಗಮನಿಸುತ್ತಿದ್ದಂತೆ ಅಭಿಪ್ರಾಯ ವ್ಯಕ್ತಪಡಿಸಿದ ಪೀಠ, ಅದನ್ನು ವಾಪಸು ಪಡೆಯುವಂತೆಯೂ ಸೂಚಿಸಿತು.</p>.<p>‘ಕೇವಲ ಪ್ರಚಾರಕ್ಕಾಗಿ ಅರ್ಜಿ ಸಲ್ಲಿಸಬಾರದು. ನಿಜವಾಗಿ ಗಂಭೀರತೆ ಮತ್ತು ಬದ್ಧತೆ ಉಳ್ಳವರು ಮಾತ್ರ ಅರ್ಜಿ ಸಲ್ಲಿಸಬೇಕು. ದಿನಪತ್ರಿಕೆಗಳನ್ನು ನೀವು ಗಮನಿಸಿದ್ದೇ ಆಗಿದ್ದರೆ ಹೈಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುತ್ತಿರುವುದೂ ನಿಮಗೆ ತಿಳಿದಿರುತ್ತದೆ’ ಎಂದು ಪೀಠ ಹೇಳಿತು.</p>.<p>‘ಹೈಕೋರ್ಟ್ ಈ ಬಗ್ಗೆ ಈಗಾಗಲೇ ಕೆಲವು ನಿರ್ದೇಶನಗಳನ್ನು ನೀಡಿದೆ ಎಂಬುದು ನಿಮಗೆ ಗೊತ್ತಿರಬೇಕು. ಮುಂದಿನ ಬಾರಿ ಎಚ್ಚರಿಕೆಯಿಂದಿರಿ. ಇವು ಸಂಕೀರ್ಣವಾದ ವಿಷಯಗಳು. ಹೆಚ್ಚಿನ ಅಧ್ಯಯನವನ್ನು ಮಾಡಿ’ ಎಂದು ಅರ್ಜಿದಾರರ ಪರ ವಕೀಲರಿಗೆ ತಾಕೀತು ಮಾಡಿತು.</p>.<p>‘ನವದೆಹಲಿಗೆ ಸಂಪರ್ಕ ಕಲ್ಪಿಸುವ ಗಡಿಯನ್ನು ಮುಚ್ಚಿರುವ ಕೇಂದ್ರ, ಕೆಲ ರಾಜ್ಯ ಸರ್ಕಾರಗಳು ರೈತರಿಗೆ ಬೆದರಿಕೆ ಒಡ್ಡಿವೆ. ನಿಷೇಧಾಜ್ಧೆ ಹೇರಿವೆ. ಕೆಲವರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ನಿರ್ಬಂಧಿಸಲಾಗಿದೆ’ ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>