<p><strong>ಹೈದರಾಬಾದ್:</strong> ತೆಲಂಗಾಣ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ರಾಜ್ಯದ ವಿವಿಧ ಪಕ್ಷಗಳ ನಾಯಕರಿಗೆ ಸೇರಿದ ಸ್ವತ್ತುಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಇದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.</p>.<p>ಮಾಜಿ ಸಂಸದ, ಪಲೈರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪೊಂಗುಲೆಟಿ ಶ್ರೀನಿವಾಸ್ ರೆಡ್ಡಿ ಅವರ ಮನೆ ಮೇಲೆ ನಡೆದಿರುವ ಐಟಿ ದಾಳಿಯು ಈ ದಾಳಿಗಳ ಸರಣಿಯಲ್ಲಿ ಈಚಿನದ್ದು. </p>.<p>ಕಮ್ಮಮ್ ಮತ್ತು ನಾರಾಯಣಪುರಂ ಮತ್ತು ಹೈದರಾಬಾದ್ನಲ್ಲಿ ರೆಡ್ಡಿ ಮತ್ತು ಅವರ ಮಗನಿಗೆ ಸೇರಿದ ಸುಮಾರು 30 ಸ್ವತ್ತುಗಳಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.</p>.<p>ರೆಡ್ಡಿ ಅವರು ಇದಕ್ಕೂ ಮೊದಲು ಐಎಸ್ಆರ್ ಕಾಂಗ್ರೆಸ್ ಪಕ್ಷದಲ್ಲಿದ್ದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಪಕ್ಷವು ಟಿಕೆಟ್ ನಿರಾಕರಿಸಿದ ಬಳಿಕ ಅವರು ಕಾಂಗ್ರೆಸ್ ಸೇರ್ಪಡೆ ಆಗಿದ್ದರು. </p>.<p>ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ರೆಡ್ಡಿ ಅವರು ಆರೋಪಿಸಿದ್ದಾರೆ.</p>.<p>ಕಳೆದ ಒಂದು ತಿಂಗಳಲ್ಲಿ ಕಾಂಗ್ರೆಸ್ ಮತ್ತು ಬಿಆರ್ಎಸ್ನ ಹಲವಾರು ನಾಯಕರಿಗೆ ಸೇರಿದ ಸ್ವತ್ತುಗಳ ಮೇಲೆ ಐಟಿ ದಾಳಿ ನಡೆದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ತೆಲಂಗಾಣ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ರಾಜ್ಯದ ವಿವಿಧ ಪಕ್ಷಗಳ ನಾಯಕರಿಗೆ ಸೇರಿದ ಸ್ವತ್ತುಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಇದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.</p>.<p>ಮಾಜಿ ಸಂಸದ, ಪಲೈರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪೊಂಗುಲೆಟಿ ಶ್ರೀನಿವಾಸ್ ರೆಡ್ಡಿ ಅವರ ಮನೆ ಮೇಲೆ ನಡೆದಿರುವ ಐಟಿ ದಾಳಿಯು ಈ ದಾಳಿಗಳ ಸರಣಿಯಲ್ಲಿ ಈಚಿನದ್ದು. </p>.<p>ಕಮ್ಮಮ್ ಮತ್ತು ನಾರಾಯಣಪುರಂ ಮತ್ತು ಹೈದರಾಬಾದ್ನಲ್ಲಿ ರೆಡ್ಡಿ ಮತ್ತು ಅವರ ಮಗನಿಗೆ ಸೇರಿದ ಸುಮಾರು 30 ಸ್ವತ್ತುಗಳಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.</p>.<p>ರೆಡ್ಡಿ ಅವರು ಇದಕ್ಕೂ ಮೊದಲು ಐಎಸ್ಆರ್ ಕಾಂಗ್ರೆಸ್ ಪಕ್ಷದಲ್ಲಿದ್ದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಪಕ್ಷವು ಟಿಕೆಟ್ ನಿರಾಕರಿಸಿದ ಬಳಿಕ ಅವರು ಕಾಂಗ್ರೆಸ್ ಸೇರ್ಪಡೆ ಆಗಿದ್ದರು. </p>.<p>ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ರೆಡ್ಡಿ ಅವರು ಆರೋಪಿಸಿದ್ದಾರೆ.</p>.<p>ಕಳೆದ ಒಂದು ತಿಂಗಳಲ್ಲಿ ಕಾಂಗ್ರೆಸ್ ಮತ್ತು ಬಿಆರ್ಎಸ್ನ ಹಲವಾರು ನಾಯಕರಿಗೆ ಸೇರಿದ ಸ್ವತ್ತುಗಳ ಮೇಲೆ ಐಟಿ ದಾಳಿ ನಡೆದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>