<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಟಿಎಂಸಿ ಅಭ್ಯರ್ಥಿ ನಿವಾಸ ಸೇರಿದಂತೆ ಕೋಲ್ಕತ್ತದ ವಿವಿಧೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p><p>ರಾಶ್ ಬೆಹಾರಿ ಕ್ಷೇತ್ರದ ಟಿಎಂಸಿ ಅಭ್ಯರ್ಥಿ ದೇಬಾಶಿಶ್ ಕುಮಾರ್ ಮತ್ತು ಭವಾನಿಪುರ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಮಮತಾ ಬ್ಯಾನರ್ಜಿ ಹೆಸರನ್ನು ಪ್ರಸ್ತಾಪಿಸಿದ್ದ ಮಿರಾಜ್ ಶಾ ಅವರ ಸ್ಥಳಗಳ ಮೇಲೂ ದಾಳಿ ನಡೆದಿದೆ.</p><p>ಇದೇ 23 ಮತ್ತು 29ರಂದು ಮತದಾನ ನಡೆಯುತ್ತಿದ್ದು, ಅದಕ್ಕೂ ಮುನ್ನವೇ ಐಟಿ ದಾಳಿ ನಡೆಸುವ ಮೂಲಕ ಪಕ್ಷವನ್ನು ಬೆದರಿಸುವ ಮತ್ತು ಅಭ್ಯರ್ಥಿಗಳಿಗೆ ಕಿರುಕುಳ ನೀಡುವ ಯತ್ನ ಇದಾಗಿದೆ ಎಂದು ಟಿಎಂಸಿ ಆರೋಪಿಸಿದೆ.</p><p>ಕುಮಾರ್ ಅವರ ಮನೆ, ಚುನಾವಣಾ ಕಚೇರಿ, ಇತರ ಸ್ಥಳಗಳ ಮೇಲೆ ದಾಳಿ ಮಾಡಿರುವ ಅಧಿಕಾರಿಗಳ ತಂಡ, ಬೆಳಿಗ್ಗೆ 6 ಗಂಟೆಯಿಂದ ಶೋಧ ನಡೆಸುತ್ತಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.</p><p>ಇತ್ತ, ದಕ್ಷಿಣ ಕೋಲ್ಕತ್ತದ ಎಲ್ಗಿನ್ ರಸ್ತೆಯ ಮಿರಾಜ್ ನಿವಾಸ ಮತ್ತು ಅವರಿಗೆ ಸೇರಿದ ಇತರ ಸ್ಥಳಗಳಲ್ಲಿ ಶೋಧ ನಡೆಯುತ್ತಿದೆ. </p><p>ದೇಬಾಶಿಶ್ ಕುಮಾರ್ ಅವರ ಆಪ್ತ ಸಹಾಯಕ, ಟಿಎಂಸಿ ನಾಯಕ ಕುಮಾರ್ ಸಹಾ ಅವರ ಕಾಲಿಘಾಟ್ನಲ್ಲಿರುವ ನಿವಾಸದ ಮೇಲೂ ಐಟಿ ದಾಳಿ ನಡೆದಿದೆ.</p><p>ವಿಧಾನಸಭಾ ಚುನಾವಣೆಗೆ ಮುನ್ನ ನಗರದಾದ್ಯಂತ ಹಲವು ಸ್ಥಳಗಳನ್ನು ಒಳಗೊಂಡಂತೆ ಲೆಕ್ಕವಿಲ್ಲದ ಹಣದ ಹರಿವನ್ನು ಪತ್ತೆಹಚ್ಚಲು ವ್ಯಾಪಕ ಕಾರ್ಯಾಚರಣೆಯ ಭಾಗವಾಗಿ ಈ ದಾಳಿಗಳು ನಡೆದಿವೆ ಎಂದು ಅಧಿಕಾರಿ ಹೇಳಿದ್ದಾರೆ.</p><p>ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಇತ್ತೀಚೆಗೆ ಕುಮಾರ್ಗೆ ಹಲವು ಬಾರಿ ಸಮನ್ಸ್ ಜಾರಿ ಮಾಡಿತ್ತು. ಏಪ್ರಿಲ್ 1, 3 ಮತ್ತು 9ರಂದು ಸಾಲ್ಟ್ ಲೇಕ್ನಲ್ಲಿರುವ ಸಿಜಿಒ ಕಾಂಪ್ಲೆಕ್ಸ್ನಲ್ಲಿ ಅವರು ವಿಚಾರಣೆಗೆ ಹಾಜರಾಗಿದ್ದರು. </p><p>ದಾಳಿಗಳನ್ನು ಖಂಡಿಸಿದ ಟಿಎಂಸಿ ಹಿರಿಯ ನಾಯಕ ಜೈಪ್ರಕಾಶ್ ಮಜುಂದಾರ್, ಟಿಎಂಸಿ ಮತ್ತು ಟಿಎಂಸಿಯೊಂದಿಗೆ ನೇರವಾಗಿ ಸಂಬಂಧವಿಲ್ಲದ ಪ್ರಮುಖ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ನಡೆಸಲಾದ ದಾಳಿಗಳಿಂದ ನರೇಂದ್ರ ಮೋದಿ-ಅಮಿತ್ ಶಾ ಆಡಳಿತದ ಸೇಡಿನ ಸ್ವಭಾವವು ಬಹಿರಂಗವಾಗಿದೆ ಎಂದು ದೂರಿದ್ದಾರೆ.</p><p>ಚುನಾವಣೆಗೆ ಮುನ್ನ, ಕೇಂದ್ರೀಯ ಸಂಸ್ಥೆಗಳು ಪಶ್ಚಿಮ ಬಂಗಾಳದಲ್ಲಿ ಅತಿಯಾಗಿ ಸಕ್ರಿಯವಾಗಿವೆ. ಟಿಎಂಸಿ ಅಭ್ಯರ್ಥಿಗಳಿಗೆ ಕಿರುಕುಳ ಮತ್ತು ಬೆದರಿಕೆ ಹಾಕುವ ಏಕೈಕ ಕಾರ್ಯಸೂಚಿಯಡಿಯಲ್ಲಿ ಕೆಲಸ ಮಾಡುತ್ತಿವೆ. ಬಂಗಾಳದ ಜನರು ಮತ್ತೆ ಬಿಜೆಪಿಯನ್ನು ತಿರಸ್ಕರಿಸುತ್ತಾರೆ ಎಂದರು.</p><p>ಏಪ್ರಿಲ್ 29 ರಂದು ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ರಾಶ್ಬೆಹಾರಿ ಮತ್ತು ಭವಾನಿಪುರ ಕ್ಷೇತ್ರಗಳೆರಡರಲ್ಲೂ ಮತದಾನ ನಡೆಯಲಿದ್ದು, ಮೇ 4 ರಂದು ಎಣಿಕೆ ನಡೆಯಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಟಿಎಂಸಿ ಅಭ್ಯರ್ಥಿ ನಿವಾಸ ಸೇರಿದಂತೆ ಕೋಲ್ಕತ್ತದ ವಿವಿಧೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p><p>ರಾಶ್ ಬೆಹಾರಿ ಕ್ಷೇತ್ರದ ಟಿಎಂಸಿ ಅಭ್ಯರ್ಥಿ ದೇಬಾಶಿಶ್ ಕುಮಾರ್ ಮತ್ತು ಭವಾನಿಪುರ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಮಮತಾ ಬ್ಯಾನರ್ಜಿ ಹೆಸರನ್ನು ಪ್ರಸ್ತಾಪಿಸಿದ್ದ ಮಿರಾಜ್ ಶಾ ಅವರ ಸ್ಥಳಗಳ ಮೇಲೂ ದಾಳಿ ನಡೆದಿದೆ.</p><p>ಇದೇ 23 ಮತ್ತು 29ರಂದು ಮತದಾನ ನಡೆಯುತ್ತಿದ್ದು, ಅದಕ್ಕೂ ಮುನ್ನವೇ ಐಟಿ ದಾಳಿ ನಡೆಸುವ ಮೂಲಕ ಪಕ್ಷವನ್ನು ಬೆದರಿಸುವ ಮತ್ತು ಅಭ್ಯರ್ಥಿಗಳಿಗೆ ಕಿರುಕುಳ ನೀಡುವ ಯತ್ನ ಇದಾಗಿದೆ ಎಂದು ಟಿಎಂಸಿ ಆರೋಪಿಸಿದೆ.</p><p>ಕುಮಾರ್ ಅವರ ಮನೆ, ಚುನಾವಣಾ ಕಚೇರಿ, ಇತರ ಸ್ಥಳಗಳ ಮೇಲೆ ದಾಳಿ ಮಾಡಿರುವ ಅಧಿಕಾರಿಗಳ ತಂಡ, ಬೆಳಿಗ್ಗೆ 6 ಗಂಟೆಯಿಂದ ಶೋಧ ನಡೆಸುತ್ತಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.</p><p>ಇತ್ತ, ದಕ್ಷಿಣ ಕೋಲ್ಕತ್ತದ ಎಲ್ಗಿನ್ ರಸ್ತೆಯ ಮಿರಾಜ್ ನಿವಾಸ ಮತ್ತು ಅವರಿಗೆ ಸೇರಿದ ಇತರ ಸ್ಥಳಗಳಲ್ಲಿ ಶೋಧ ನಡೆಯುತ್ತಿದೆ. </p><p>ದೇಬಾಶಿಶ್ ಕುಮಾರ್ ಅವರ ಆಪ್ತ ಸಹಾಯಕ, ಟಿಎಂಸಿ ನಾಯಕ ಕುಮಾರ್ ಸಹಾ ಅವರ ಕಾಲಿಘಾಟ್ನಲ್ಲಿರುವ ನಿವಾಸದ ಮೇಲೂ ಐಟಿ ದಾಳಿ ನಡೆದಿದೆ.</p><p>ವಿಧಾನಸಭಾ ಚುನಾವಣೆಗೆ ಮುನ್ನ ನಗರದಾದ್ಯಂತ ಹಲವು ಸ್ಥಳಗಳನ್ನು ಒಳಗೊಂಡಂತೆ ಲೆಕ್ಕವಿಲ್ಲದ ಹಣದ ಹರಿವನ್ನು ಪತ್ತೆಹಚ್ಚಲು ವ್ಯಾಪಕ ಕಾರ್ಯಾಚರಣೆಯ ಭಾಗವಾಗಿ ಈ ದಾಳಿಗಳು ನಡೆದಿವೆ ಎಂದು ಅಧಿಕಾರಿ ಹೇಳಿದ್ದಾರೆ.</p><p>ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಇತ್ತೀಚೆಗೆ ಕುಮಾರ್ಗೆ ಹಲವು ಬಾರಿ ಸಮನ್ಸ್ ಜಾರಿ ಮಾಡಿತ್ತು. ಏಪ್ರಿಲ್ 1, 3 ಮತ್ತು 9ರಂದು ಸಾಲ್ಟ್ ಲೇಕ್ನಲ್ಲಿರುವ ಸಿಜಿಒ ಕಾಂಪ್ಲೆಕ್ಸ್ನಲ್ಲಿ ಅವರು ವಿಚಾರಣೆಗೆ ಹಾಜರಾಗಿದ್ದರು. </p><p>ದಾಳಿಗಳನ್ನು ಖಂಡಿಸಿದ ಟಿಎಂಸಿ ಹಿರಿಯ ನಾಯಕ ಜೈಪ್ರಕಾಶ್ ಮಜುಂದಾರ್, ಟಿಎಂಸಿ ಮತ್ತು ಟಿಎಂಸಿಯೊಂದಿಗೆ ನೇರವಾಗಿ ಸಂಬಂಧವಿಲ್ಲದ ಪ್ರಮುಖ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ನಡೆಸಲಾದ ದಾಳಿಗಳಿಂದ ನರೇಂದ್ರ ಮೋದಿ-ಅಮಿತ್ ಶಾ ಆಡಳಿತದ ಸೇಡಿನ ಸ್ವಭಾವವು ಬಹಿರಂಗವಾಗಿದೆ ಎಂದು ದೂರಿದ್ದಾರೆ.</p><p>ಚುನಾವಣೆಗೆ ಮುನ್ನ, ಕೇಂದ್ರೀಯ ಸಂಸ್ಥೆಗಳು ಪಶ್ಚಿಮ ಬಂಗಾಳದಲ್ಲಿ ಅತಿಯಾಗಿ ಸಕ್ರಿಯವಾಗಿವೆ. ಟಿಎಂಸಿ ಅಭ್ಯರ್ಥಿಗಳಿಗೆ ಕಿರುಕುಳ ಮತ್ತು ಬೆದರಿಕೆ ಹಾಕುವ ಏಕೈಕ ಕಾರ್ಯಸೂಚಿಯಡಿಯಲ್ಲಿ ಕೆಲಸ ಮಾಡುತ್ತಿವೆ. ಬಂಗಾಳದ ಜನರು ಮತ್ತೆ ಬಿಜೆಪಿಯನ್ನು ತಿರಸ್ಕರಿಸುತ್ತಾರೆ ಎಂದರು.</p><p>ಏಪ್ರಿಲ್ 29 ರಂದು ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ರಾಶ್ಬೆಹಾರಿ ಮತ್ತು ಭವಾನಿಪುರ ಕ್ಷೇತ್ರಗಳೆರಡರಲ್ಲೂ ಮತದಾನ ನಡೆಯಲಿದ್ದು, ಮೇ 4 ರಂದು ಎಣಿಕೆ ನಡೆಯಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>