ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕರೆ ನೀಡಿದ್ದಾರೆ. ಈ ಚುನಾವಣೆಯು ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಿಸುವ ಚುನಾವಣೆಯಾಗಿದೆ ಎಂದು ವಾದ್ರಾ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
‘ಪ್ರೀತಿಯ ದೇಶದ ಜನರೆ, ನಿಮ್ಮ ಪ್ರತಿಯೊಂದು ಮತವೂ ಅಮೂಲ್ಯವಾದ್ದದ್ದು. ವಿವೇಚನೆಯನ್ನು ಬಳಿಸಿ ಮತ ಚಲಾಯಿಸಿ, ನಿಮ್ಮ ಒಂದು ಮತವು ನಿಮ್ಮ ಮಕ್ಕಳ ಮುಂದಿನ ಭವಿಷ್ಯವನ್ನು ನಿರ್ಧರಿಸುತ್ತದೆ‘ ಎಂದು ಹೇಳಿದ್ದಾರೆ.