<p><strong>ರಾಯ್ಬರೇಲಿ:</strong> ‘ಸಂವಿಧಾನ ರಚನೆಯಲ್ಲಿ ದಲಿತರ ಯೋಗದಾನ ಮಹತ್ವದ್ದು. ಆದರೆ ಇಂದು ನಿಮ್ಮನ್ನು ಎಲ್ಲೆಡೆ ತುಳಿಯುವ ವ್ಯವಸ್ಥೆ ಇದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p><p>ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿ ಅವರು ಪ್ರತಿನಿಧಿಸುವ ರಾಯ್ಬರೇಲಿಗೆ ಎರಡು ದಿನಗಳ ಭೇಟಿ ನೀಡಿದ್ದು, ದಲಿತ ವಿದ್ಯಾರ್ಥಿಗಳೊಂದಿಗೆ ಗುರುವಾರ ಸಂವಾದ ನಡೆಸಿದ್ದಾರೆ.</p><p>‘ದೇಶದ ಪ್ರಮುಖ 500 ಕಂಪನಿಗಳ ಉನ್ನತ ಸ್ಥಾನದಲ್ಲಿ ದಲಿತರಿಗೆ ಎಷ್ಟು ಸ್ಥಾನ ದೊರೆತಿದೆ ಎಂಬುದನ್ನು ಪ್ರಶ್ನಿಸಬೇಕಿದೆ’ ಎಂದಿದ್ದಾರೆ.</p><p>ಇದಕ್ಕೆ ಪ್ರತಿಕ್ರಿಯಿಸಿದ ವಿದ್ಯಾರ್ಥಿಯೊಬ್ಬರು, ‘ನಮಗೆ ಸರಿಯಾದ ಸೌಲಭ್ಯಗಳಿಲ್ಲದ ಕಾರಣ ನಾವು ಆ ಹಂತ ತಲುಪಲು ಸಾಧ್ಯವಾಗಿಲ್ಲ’ ಎಂದರು.</p><p>ಇದಕ್ಕೆ ಉತ್ತರಿಸಿದ ರಾಹುಲ್, ‘ಡಾ. ಅಂಬೇಡ್ಕರ್ ಅವರಿಗೂ ಅವಕಾಶಗಳು ಇರಲಿಲ್ಲ. ಅವರ ಪರಿಶ್ರಮದ ಹಾದಿಯಲ್ಲಿ ಅವರೊಬ್ಬರೇ ಇದ್ದರು. ಹೀಗಿದ್ದರೂ ಈ ದೇಶದ ರಾಜಕೀಯವನ್ನು ಅಲುಗಾಡಿಸಿದರು’ ಎಂದರು.</p><p>‘ಇಡೀ ವ್ಯವಸ್ಥೆಯೇ ನಿಮ್ಮ ವಿರುದ್ಧವಿದೆ. ನಿಮ್ಮ ಬೆಳವಣಿಗೆ ಈ ವ್ಯವಸ್ಥೆಗೆ ಬೇಕಾಗಿಲ್ಲ. ಪ್ರತಿನಿತ್ಯ ಈ ವ್ಯವಸ್ಥೆ ನಿಮ್ಮ ಮೇಲೆ ನಿರಂತರ ದಾಳಿ ನಡೆಸುತ್ತಿದೆ. ಆ ದಾಳಿ ನಿಮ್ಮ ಮೇಲೆ ಹೇಗೆ ನಡೆಯಿತು ಎಂಬುದನ್ನು ತಿಳಿಯಲು ನಿಮಗೆ ಬಹುಕಾಲ ಬೇಕಾಗಬಹುದು’ ಎಂದು ರಾಹುಲ್ ಹೇಳಿದ್ದಾರೆ.</p><p>‘ಸಂವಿಧಾನದ ಸಿದ್ಧಾಂತವೇ ನಿಮ್ಮ ಸಿದ್ಧಾಂತ ಎನ್ನುವುದನ್ನು ನೀವು ಮೊದಲ ಅರ್ಥ ಮಾಡಿಕೊಳ್ಳಬೇಕು. ಈ ದೇಶದಲ್ಲಿ ದಲಿತರೇ ಇರದಿದ್ದರೆ ಇಂಥ ಬಲಿಷ್ಠ ಸಂವಿಧಾನ ರಚನೆಯೂ ಸಾಧ್ಯವಾಗುತ್ತಿರಲಿಲ್ಲ ಎಂಬುದನ್ನು ನಾನು ದೃಢವಾಗಿ ಹೇಳಬಲ್ಲೆ. ಹೀಗಾಗಿ ಇದು ನಿಮ್ಮ ಸಿದ್ಧಾಂತ, ನಿಮ್ಮ ಸಂವಿಧಾನ. ಹೀಗಿದ್ದರೂ ನಿಮ್ಮನ್ನು ನಿತ್ಯ ತುಳಿಯವ ವ್ಯವಸ್ಥೆ ಇರುವುದೇ ವಿಪರ್ಯಾಸ’ ಎಂದು ಕಳವಳ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯ್ಬರೇಲಿ:</strong> ‘ಸಂವಿಧಾನ ರಚನೆಯಲ್ಲಿ ದಲಿತರ ಯೋಗದಾನ ಮಹತ್ವದ್ದು. ಆದರೆ ಇಂದು ನಿಮ್ಮನ್ನು ಎಲ್ಲೆಡೆ ತುಳಿಯುವ ವ್ಯವಸ್ಥೆ ಇದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p><p>ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿ ಅವರು ಪ್ರತಿನಿಧಿಸುವ ರಾಯ್ಬರೇಲಿಗೆ ಎರಡು ದಿನಗಳ ಭೇಟಿ ನೀಡಿದ್ದು, ದಲಿತ ವಿದ್ಯಾರ್ಥಿಗಳೊಂದಿಗೆ ಗುರುವಾರ ಸಂವಾದ ನಡೆಸಿದ್ದಾರೆ.</p><p>‘ದೇಶದ ಪ್ರಮುಖ 500 ಕಂಪನಿಗಳ ಉನ್ನತ ಸ್ಥಾನದಲ್ಲಿ ದಲಿತರಿಗೆ ಎಷ್ಟು ಸ್ಥಾನ ದೊರೆತಿದೆ ಎಂಬುದನ್ನು ಪ್ರಶ್ನಿಸಬೇಕಿದೆ’ ಎಂದಿದ್ದಾರೆ.</p><p>ಇದಕ್ಕೆ ಪ್ರತಿಕ್ರಿಯಿಸಿದ ವಿದ್ಯಾರ್ಥಿಯೊಬ್ಬರು, ‘ನಮಗೆ ಸರಿಯಾದ ಸೌಲಭ್ಯಗಳಿಲ್ಲದ ಕಾರಣ ನಾವು ಆ ಹಂತ ತಲುಪಲು ಸಾಧ್ಯವಾಗಿಲ್ಲ’ ಎಂದರು.</p><p>ಇದಕ್ಕೆ ಉತ್ತರಿಸಿದ ರಾಹುಲ್, ‘ಡಾ. ಅಂಬೇಡ್ಕರ್ ಅವರಿಗೂ ಅವಕಾಶಗಳು ಇರಲಿಲ್ಲ. ಅವರ ಪರಿಶ್ರಮದ ಹಾದಿಯಲ್ಲಿ ಅವರೊಬ್ಬರೇ ಇದ್ದರು. ಹೀಗಿದ್ದರೂ ಈ ದೇಶದ ರಾಜಕೀಯವನ್ನು ಅಲುಗಾಡಿಸಿದರು’ ಎಂದರು.</p><p>‘ಇಡೀ ವ್ಯವಸ್ಥೆಯೇ ನಿಮ್ಮ ವಿರುದ್ಧವಿದೆ. ನಿಮ್ಮ ಬೆಳವಣಿಗೆ ಈ ವ್ಯವಸ್ಥೆಗೆ ಬೇಕಾಗಿಲ್ಲ. ಪ್ರತಿನಿತ್ಯ ಈ ವ್ಯವಸ್ಥೆ ನಿಮ್ಮ ಮೇಲೆ ನಿರಂತರ ದಾಳಿ ನಡೆಸುತ್ತಿದೆ. ಆ ದಾಳಿ ನಿಮ್ಮ ಮೇಲೆ ಹೇಗೆ ನಡೆಯಿತು ಎಂಬುದನ್ನು ತಿಳಿಯಲು ನಿಮಗೆ ಬಹುಕಾಲ ಬೇಕಾಗಬಹುದು’ ಎಂದು ರಾಹುಲ್ ಹೇಳಿದ್ದಾರೆ.</p><p>‘ಸಂವಿಧಾನದ ಸಿದ್ಧಾಂತವೇ ನಿಮ್ಮ ಸಿದ್ಧಾಂತ ಎನ್ನುವುದನ್ನು ನೀವು ಮೊದಲ ಅರ್ಥ ಮಾಡಿಕೊಳ್ಳಬೇಕು. ಈ ದೇಶದಲ್ಲಿ ದಲಿತರೇ ಇರದಿದ್ದರೆ ಇಂಥ ಬಲಿಷ್ಠ ಸಂವಿಧಾನ ರಚನೆಯೂ ಸಾಧ್ಯವಾಗುತ್ತಿರಲಿಲ್ಲ ಎಂಬುದನ್ನು ನಾನು ದೃಢವಾಗಿ ಹೇಳಬಲ್ಲೆ. ಹೀಗಾಗಿ ಇದು ನಿಮ್ಮ ಸಿದ್ಧಾಂತ, ನಿಮ್ಮ ಸಂವಿಧಾನ. ಹೀಗಿದ್ದರೂ ನಿಮ್ಮನ್ನು ನಿತ್ಯ ತುಳಿಯವ ವ್ಯವಸ್ಥೆ ಇರುವುದೇ ವಿಪರ್ಯಾಸ’ ಎಂದು ಕಳವಳ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>