ಯುವ ಕಾಂಗ್ರೆಸ್ ಕಚೇರಿಯ ಹಿಂಭಾಗದ ರಾಜೇಂದ್ರ ಪ್ರಸಾದ್ ರಸ್ತೆಯಲ್ಲಿ ಜಮಾಯಿಸಿದ ನೂರಾರು ಐವೈಸಿ ಕಾರ್ಯಕರ್ತರು, ಬ್ಯಾನರ್ಗಳನ್ನು ಹಿಡಿದು ಪ್ರತಾಪ ಸಿಂಹ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.
‘ನಿನ್ನೆ ಸಂಸತ್ತಿನಲ್ಲಿ ನಡೆದಿರುವುದು ತುಂಬಾ ಗಂಭೀರವಾದ ವಿಷಯವಾಗಿದೆ. ಆದರೆ, ಕೇಂದ್ರ ಸರ್ಕಾರ ಘಟನೆಯ ಬಗ್ಗೆ ತಲೆಕೆಡಿಸಿಕೊಂಡಂತೆ ತೋರುತ್ತಿಲ್ಲ. ಈ ವಿಷಯ ಸಂಸತ್ತಿನ ಭದ್ರತೆಯ ಪ್ರಶ್ನೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಈ ಕುರಿತು ಹೇಳಿಕೆ ನೀಡಬೇಕು. ಈ ಲೋಪಕ್ಕೆ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂಬುದನ್ನು ನಮಗೆ ತಿಳಿಸಬೇಕು ಎಂದು ಐವೈಸಿ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ. ವಿ ಒತ್ತಾಯಿಸಿದರು.