<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಉಗ್ರರ ಅಡಗುದಾಣವನ್ನು ಭೇದಿಸಿದ್ದು, ಉಗ್ರರು ಸಂಗ್ರಹಿಸಿಟ್ಟಿದ್ದ ಹಲವು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಲಾರ್ಮೋಹ್ ಅವಂತಿಪೋರಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯ ವೇಳೆ ಭದ್ರತಾ ಪಡೆಗಳು ಉಗ್ರರ ಅಡಗುತಾಣವನ್ನು ಭೇದಿಸಿದ್ದಾರೆ. ಶೋಧದ ವೇಳೆ ಗ್ರೆನೇಡ್, ಯುಬಿಜಿಎಲ್, ಎಲೆಕ್ಟ್ರಿಕ್ ಡಿಟೋನೇಟರ್, ಪಿಸ್ತೂಲ್ ಮ್ಯಾಗಜೀನ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.</p>.<p><strong>ಪುಣೆ: ಶಂಕಿತ ಜಿಬಿಎಸ್ ಪ್ರಕರಣ 59ಕ್ಕೆ ಏರಿಕೆ</strong></p>.<p>ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿ ಗಿಲಾನ್– ಬರ್ರೆ ಸಿಂಡ್ರೋಮ್ನ (ಜಿಬಿಎಸ್) ಶಂಕಿತ 59 ಪ್ರಕರಣಗಳು ಪತ್ತೆಯಾಗಿರುವ ಬೆನ್ನಲ್ಲೇ, ಪ್ರಕರಣಗಳ ದಿಢೀರ್ ಏರಿಕೆ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯು ತಂಡವೊಂದನ್ನು ರಚಿಸಿದೆ. </p>.<p>38 ಪುರುಷರು ಹಾಗೂ 21 ಮಹಿಳೆಯರಲ್ಲಿ ಜಿಬಿಎಸ್ ಕಾಣಿಸಿಕೊಂಡಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 59ಕ್ಕೆ ಏರಿಕೆಯಾಗಿದೆ. ಈ ಪೈಕಿ 12 ಜನರನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರೋಗಿಗಳ ಮಾದರಿಯನ್ನು ಪರೀಕ್ಷೆಗಾಗಿ ಎನ್ಐವಿಗೆ ಕಳುಹಿಸಲಾಗಿದೆ. </p>.<p>ಪುಣೆ ನಗರ, ನೆರೆಯ ಅವಳಿ ನಗರಗಳಾದ ಪಿಂಪ್ರಿ – ಚಿಂಚವಾಡ ಹಾಗೂ ಕೆಲ ಗ್ರಾಮೀಣ ಪ್ರದೇಶಗಳ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಕುರಿತು ನಾಗರಿಕರು ಭಯಪಡುವ ಅಗತ್ಯವಿಲ್ಲ. ಬದಲಾಗಿ ಮುನ್ನೆಚ್ಚರಿಕೆಯನ್ನು ಕೈಗೊಳ್ಳಬೇಕು ಎಂದು ಜಿಲ್ಲಾಡಳಿತವು ಸೂಚನೆ ನೀಡಿದೆ. </p>.<p>ಜಿಬಿಎಸ್, ಮಾನವನ ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ನರಮಂಡಲ ವ್ಯವಸ್ಥೆ, ನರಗಳು ಮತ್ತು ಸ್ನಾಯುಗಳನ್ನು ದುರ್ಬಲಗೊಳಿಸುತ್ತದೆ. </p>.<p><strong>ರಾಮ್ ಗೋಪಾಲ್ ವರ್ಮಗೆ ಜೈಲು ಶಿಕ್ಷೆ</strong></p>.<p>ಮುಂಬೈ (ಪಿಟಿಐ): ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ, ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿರುವ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಿದೆ.</p>.<p>ಪ್ರಕರಣದ ವಿಚಾರಣೆ ನಡೆಸಿದ್ದ ಅಂಧೇರಿಯ ಮ್ಯಾಜಿಸ್ಟ್ರೇಟ್(ಪ್ರಥಮ ದರ್ಜೆ) ವೈ.ಪಿ ಪೂಜಾರಿ ಅವರು, ಮೂರು ತಿಂಗಳ ಒಳಗಾಗಿ ದೂರುದಾರರಿಗೆ ₹3,72,219 ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. </p>.<p>ವಿಚಾರಣೆ ವೇಳೆ ವರ್ಮ ಅವರು ಹಾಜರಿರದ ಕಾರಣ ಅವರ ವಿರುದ್ಧ ಜಾಮೀನುರಹಿತ ಬಂಧನದ ವಾರಂಟ್ ಜಾರಿಗೊಳಿಸಲಾಗಿದೆ. </p>.<p>ಚೆಕ್ ಬೌನ್ಸ್ ಆಗಿದೆ ಎಂದು ಆರೋಪಿಸಿ ವರ್ಮ ವಿರುದ್ಧ ಕಂಪನಿಯೊಂದು 2018ರಲ್ಲಿ ದೂರು ದಾಖಲಿಸಿತ್ತು.</p>.<p><strong>ಮಣಿಪುರ | ಅಹಿತಕರ ಪೋಸ್ಟ್ ಹಾಕಿದರೆ ಕಠಿಣ ಕ್ರಮ: ಸಿ.ಎಂ.</strong></p>.<p>ಇಂಫಾಲ: ‘ಕಾನೂನು ಉಲ್ಲಂಘನೆ ಮತ್ತು ಅನ್ಯರ ಖಾಸಗೀತನಕ್ಕೆ ಧಕ್ಕೆ ಆಗುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಮಣಿಪುರದ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.</p>.<p>‘ಈಶಾನ್ಯ ರಾಜ್ಯದಲ್ಲಿ 2023ರ ಮೇ ತಿಂಗಳಲ್ಲಿ ಜನಾಂಗೀಯ ಬಿಕ್ಕಟ್ಟು ಆರಂಭವಾದ ತರುವಾಯ ಬೃಹತ್ ಸಂಖ್ಯೆಯಲ್ಲಿ ಹೊಸ ಸಂಘಟನೆಗಳು ಹುಟ್ಟಿಕೊಂಡಿವೆ. ಇವುಗಳಲ್ಲಿ ಹೆಚ್ಚಿನವು ಸುಲಿಗೆ, ಹಲ್ಲೆ, ಒತ್ತೆ ಇರಿಸಿಕೊಳ್ಳುವ ಸಮಾಜವಿರೋಧಿ ಕೃತ್ಯಗಳಲ್ಲಿ ತೊಡಗಿವೆ’ ಎಂದು ಹೇಳಿದ್ದಾರೆ.</p>.<p>‘ರಾಜ್ಯದಲ್ಲಿ ಸಹಜ ಸ್ಥಿತಿ ಮೂಡುವ ಸೂಚನೆಗಳಿವೆ. ಪರಿಸ್ಥಿತಿ ತಿಳಿಯಾಗಲು ಮಾಧ್ಯಮ ಕೂಡ ಸಹಕರಿಸಬೇಕು ಎಂದು ಕೋರುತ್ತೇನೆ’ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. </p>.<p>ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾದ ಕೆಲ ಪೋಸ್ಟ್ಗಳು ಕೋಮುಸೌಹಾರ್ದ ವಿರೋಧಿ ಆಗಿವೆ. ಮಹಿಳೆಯರ ಖಾಸಗಿ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆಗೆ ಸೇರದವರು ನಡೆಸಿರುವ ಪೋಸ್ಟ್ಗಳೂ ಅಪ್ಲೋಡ್ ಆಗಿವೆ’ ಎಂದು ಉಲ್ಲೇಖಿಸಿದರು.</p>.<p>ಚುನಾಯಿತ ಪ್ರತಿನಿಧಿಗಳ ಮನೆಗಳಲ್ಲಿ ದಾಂದಲೆ, ಲೂಟಿ ಕೃತ್ಯದಲ್ಲಿ ತೊಡಗಿದ್ದ ಕೆಲವರ ವಿರುದ್ದ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದರು.</p>.<p><strong>ರಶೀದ್ ಜಾಮೀನು ಅರ್ಜಿ: ಎನ್ಐಎ ಪ್ರತಿಕ್ರಿಯೆ ಕೇಳಿದ ಕೋರ್ಟ್</strong></p>.<p>ನವದೆಹಲಿ: ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿರುವ ಆರೋಪದಡಿ ಬಂಧನದಲ್ಲಿರುವ ಜಮ್ಮು ಮತ್ತು ಕಾಶ್ಮೀರ ಸಂಸದ ಎಂಜಿನಿಯರ್ ರಶೀದ್ ಅವರ ಜಾಮೀನು ಅರ್ಜಿಯ ಬಗ್ಗೆ ಪ್ರತಿಕ್ರಿಯಿಸುವಂತೆ ‘ಎನ್ಐಎ’ಗೆ ದೆಹಲಿ ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.</p>.<p>ಅರ್ಜಿಯ ವಿಚಾರಣೆಯನ್ನು ಜನವರಿ 30ಕ್ಕೆ ಮುಂದೂಡಿರುವ ನ್ಯಾಯಮೂರ್ತಿ ವಿಕಾಸ್ ಮಹಾಜನ್ ಅವರು, ‘ಮುಂದಿನ ವಿಚಾರಣೆಯ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ(ಎನ್ಐಎ) ಸೂಚಿಸಿದ್ದಾರೆ.</p>.<p>ಜಾಮೀನು ಅರ್ಜಿಯು ಹಲವು ಸಮಯದಿಂದ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಇದ್ದು, ಅದರ ತ್ವರಿತ ವಿಚಾರಣೆಗೆ ಸೂಚಿಸಬೇಕು ಅಥವಾ ಹೈಕೋರ್ಟ್ನಲ್ಲೇ ವಿಚಾರಣೆ ನಡೆಸಬೇಕು ಎಂದು ರಶೀದ್ ಪರ ವಕೀಲರು ಮನವಿ ಮಾಡಿದ್ದರು.</p>.<p>ರಶೀದ್ ಸಂಸದರಾಗಿರುವುದರಿಂದ ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಜಿಲ್ಲಾ ನ್ಯಾಯಾಲಯವನ್ನು ಕೋರಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು, ರಶೀದ್ ಜಾಮೀನು ಅರ್ಜಿಯನ್ನು ಕಳೆದ ವರ್ಷ ಡಿ.4ರಂದು ವಜಾಗೊಳಿಸಿದ್ದರು.</p>.<p>ವಿಶೇಷ ಅರ್ಜಿಯನ್ನು ಮಾತ್ರ ವಿಚಾರಣೆ ನಡೆಸಬಹುದು, ಸಾಮಾನ್ಯ ಜಾಮೀನು ಅರ್ಜಿಯ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ವಿಚಾರಣಾ ನ್ಯಾಯಾಧೀಶರು ಹೇಳಿದ್ದರು.</p>.<p>ರಶೀದ್ ಅವರು ಬಾರಾಮುಲ್ಲಾ ಕ್ಷೇತ್ರದ ಸಂಸದರಾಗಿದ್ದು, ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ ಆರೋಪದಡಿ 2019ರಿಂದ ತಿಹಾರ ಜೈಲಿನಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಉಗ್ರರ ಅಡಗುದಾಣವನ್ನು ಭೇದಿಸಿದ್ದು, ಉಗ್ರರು ಸಂಗ್ರಹಿಸಿಟ್ಟಿದ್ದ ಹಲವು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಲಾರ್ಮೋಹ್ ಅವಂತಿಪೋರಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯ ವೇಳೆ ಭದ್ರತಾ ಪಡೆಗಳು ಉಗ್ರರ ಅಡಗುತಾಣವನ್ನು ಭೇದಿಸಿದ್ದಾರೆ. ಶೋಧದ ವೇಳೆ ಗ್ರೆನೇಡ್, ಯುಬಿಜಿಎಲ್, ಎಲೆಕ್ಟ್ರಿಕ್ ಡಿಟೋನೇಟರ್, ಪಿಸ್ತೂಲ್ ಮ್ಯಾಗಜೀನ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.</p>.<p><strong>ಪುಣೆ: ಶಂಕಿತ ಜಿಬಿಎಸ್ ಪ್ರಕರಣ 59ಕ್ಕೆ ಏರಿಕೆ</strong></p>.<p>ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿ ಗಿಲಾನ್– ಬರ್ರೆ ಸಿಂಡ್ರೋಮ್ನ (ಜಿಬಿಎಸ್) ಶಂಕಿತ 59 ಪ್ರಕರಣಗಳು ಪತ್ತೆಯಾಗಿರುವ ಬೆನ್ನಲ್ಲೇ, ಪ್ರಕರಣಗಳ ದಿಢೀರ್ ಏರಿಕೆ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯು ತಂಡವೊಂದನ್ನು ರಚಿಸಿದೆ. </p>.<p>38 ಪುರುಷರು ಹಾಗೂ 21 ಮಹಿಳೆಯರಲ್ಲಿ ಜಿಬಿಎಸ್ ಕಾಣಿಸಿಕೊಂಡಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 59ಕ್ಕೆ ಏರಿಕೆಯಾಗಿದೆ. ಈ ಪೈಕಿ 12 ಜನರನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರೋಗಿಗಳ ಮಾದರಿಯನ್ನು ಪರೀಕ್ಷೆಗಾಗಿ ಎನ್ಐವಿಗೆ ಕಳುಹಿಸಲಾಗಿದೆ. </p>.<p>ಪುಣೆ ನಗರ, ನೆರೆಯ ಅವಳಿ ನಗರಗಳಾದ ಪಿಂಪ್ರಿ – ಚಿಂಚವಾಡ ಹಾಗೂ ಕೆಲ ಗ್ರಾಮೀಣ ಪ್ರದೇಶಗಳ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಕುರಿತು ನಾಗರಿಕರು ಭಯಪಡುವ ಅಗತ್ಯವಿಲ್ಲ. ಬದಲಾಗಿ ಮುನ್ನೆಚ್ಚರಿಕೆಯನ್ನು ಕೈಗೊಳ್ಳಬೇಕು ಎಂದು ಜಿಲ್ಲಾಡಳಿತವು ಸೂಚನೆ ನೀಡಿದೆ. </p>.<p>ಜಿಬಿಎಸ್, ಮಾನವನ ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ನರಮಂಡಲ ವ್ಯವಸ್ಥೆ, ನರಗಳು ಮತ್ತು ಸ್ನಾಯುಗಳನ್ನು ದುರ್ಬಲಗೊಳಿಸುತ್ತದೆ. </p>.<p><strong>ರಾಮ್ ಗೋಪಾಲ್ ವರ್ಮಗೆ ಜೈಲು ಶಿಕ್ಷೆ</strong></p>.<p>ಮುಂಬೈ (ಪಿಟಿಐ): ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ, ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿರುವ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಿದೆ.</p>.<p>ಪ್ರಕರಣದ ವಿಚಾರಣೆ ನಡೆಸಿದ್ದ ಅಂಧೇರಿಯ ಮ್ಯಾಜಿಸ್ಟ್ರೇಟ್(ಪ್ರಥಮ ದರ್ಜೆ) ವೈ.ಪಿ ಪೂಜಾರಿ ಅವರು, ಮೂರು ತಿಂಗಳ ಒಳಗಾಗಿ ದೂರುದಾರರಿಗೆ ₹3,72,219 ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. </p>.<p>ವಿಚಾರಣೆ ವೇಳೆ ವರ್ಮ ಅವರು ಹಾಜರಿರದ ಕಾರಣ ಅವರ ವಿರುದ್ಧ ಜಾಮೀನುರಹಿತ ಬಂಧನದ ವಾರಂಟ್ ಜಾರಿಗೊಳಿಸಲಾಗಿದೆ. </p>.<p>ಚೆಕ್ ಬೌನ್ಸ್ ಆಗಿದೆ ಎಂದು ಆರೋಪಿಸಿ ವರ್ಮ ವಿರುದ್ಧ ಕಂಪನಿಯೊಂದು 2018ರಲ್ಲಿ ದೂರು ದಾಖಲಿಸಿತ್ತು.</p>.<p><strong>ಮಣಿಪುರ | ಅಹಿತಕರ ಪೋಸ್ಟ್ ಹಾಕಿದರೆ ಕಠಿಣ ಕ್ರಮ: ಸಿ.ಎಂ.</strong></p>.<p>ಇಂಫಾಲ: ‘ಕಾನೂನು ಉಲ್ಲಂಘನೆ ಮತ್ತು ಅನ್ಯರ ಖಾಸಗೀತನಕ್ಕೆ ಧಕ್ಕೆ ಆಗುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಮಣಿಪುರದ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.</p>.<p>‘ಈಶಾನ್ಯ ರಾಜ್ಯದಲ್ಲಿ 2023ರ ಮೇ ತಿಂಗಳಲ್ಲಿ ಜನಾಂಗೀಯ ಬಿಕ್ಕಟ್ಟು ಆರಂಭವಾದ ತರುವಾಯ ಬೃಹತ್ ಸಂಖ್ಯೆಯಲ್ಲಿ ಹೊಸ ಸಂಘಟನೆಗಳು ಹುಟ್ಟಿಕೊಂಡಿವೆ. ಇವುಗಳಲ್ಲಿ ಹೆಚ್ಚಿನವು ಸುಲಿಗೆ, ಹಲ್ಲೆ, ಒತ್ತೆ ಇರಿಸಿಕೊಳ್ಳುವ ಸಮಾಜವಿರೋಧಿ ಕೃತ್ಯಗಳಲ್ಲಿ ತೊಡಗಿವೆ’ ಎಂದು ಹೇಳಿದ್ದಾರೆ.</p>.<p>‘ರಾಜ್ಯದಲ್ಲಿ ಸಹಜ ಸ್ಥಿತಿ ಮೂಡುವ ಸೂಚನೆಗಳಿವೆ. ಪರಿಸ್ಥಿತಿ ತಿಳಿಯಾಗಲು ಮಾಧ್ಯಮ ಕೂಡ ಸಹಕರಿಸಬೇಕು ಎಂದು ಕೋರುತ್ತೇನೆ’ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. </p>.<p>ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾದ ಕೆಲ ಪೋಸ್ಟ್ಗಳು ಕೋಮುಸೌಹಾರ್ದ ವಿರೋಧಿ ಆಗಿವೆ. ಮಹಿಳೆಯರ ಖಾಸಗಿ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆಗೆ ಸೇರದವರು ನಡೆಸಿರುವ ಪೋಸ್ಟ್ಗಳೂ ಅಪ್ಲೋಡ್ ಆಗಿವೆ’ ಎಂದು ಉಲ್ಲೇಖಿಸಿದರು.</p>.<p>ಚುನಾಯಿತ ಪ್ರತಿನಿಧಿಗಳ ಮನೆಗಳಲ್ಲಿ ದಾಂದಲೆ, ಲೂಟಿ ಕೃತ್ಯದಲ್ಲಿ ತೊಡಗಿದ್ದ ಕೆಲವರ ವಿರುದ್ದ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದರು.</p>.<p><strong>ರಶೀದ್ ಜಾಮೀನು ಅರ್ಜಿ: ಎನ್ಐಎ ಪ್ರತಿಕ್ರಿಯೆ ಕೇಳಿದ ಕೋರ್ಟ್</strong></p>.<p>ನವದೆಹಲಿ: ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿರುವ ಆರೋಪದಡಿ ಬಂಧನದಲ್ಲಿರುವ ಜಮ್ಮು ಮತ್ತು ಕಾಶ್ಮೀರ ಸಂಸದ ಎಂಜಿನಿಯರ್ ರಶೀದ್ ಅವರ ಜಾಮೀನು ಅರ್ಜಿಯ ಬಗ್ಗೆ ಪ್ರತಿಕ್ರಿಯಿಸುವಂತೆ ‘ಎನ್ಐಎ’ಗೆ ದೆಹಲಿ ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.</p>.<p>ಅರ್ಜಿಯ ವಿಚಾರಣೆಯನ್ನು ಜನವರಿ 30ಕ್ಕೆ ಮುಂದೂಡಿರುವ ನ್ಯಾಯಮೂರ್ತಿ ವಿಕಾಸ್ ಮಹಾಜನ್ ಅವರು, ‘ಮುಂದಿನ ವಿಚಾರಣೆಯ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ(ಎನ್ಐಎ) ಸೂಚಿಸಿದ್ದಾರೆ.</p>.<p>ಜಾಮೀನು ಅರ್ಜಿಯು ಹಲವು ಸಮಯದಿಂದ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಇದ್ದು, ಅದರ ತ್ವರಿತ ವಿಚಾರಣೆಗೆ ಸೂಚಿಸಬೇಕು ಅಥವಾ ಹೈಕೋರ್ಟ್ನಲ್ಲೇ ವಿಚಾರಣೆ ನಡೆಸಬೇಕು ಎಂದು ರಶೀದ್ ಪರ ವಕೀಲರು ಮನವಿ ಮಾಡಿದ್ದರು.</p>.<p>ರಶೀದ್ ಸಂಸದರಾಗಿರುವುದರಿಂದ ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಜಿಲ್ಲಾ ನ್ಯಾಯಾಲಯವನ್ನು ಕೋರಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು, ರಶೀದ್ ಜಾಮೀನು ಅರ್ಜಿಯನ್ನು ಕಳೆದ ವರ್ಷ ಡಿ.4ರಂದು ವಜಾಗೊಳಿಸಿದ್ದರು.</p>.<p>ವಿಶೇಷ ಅರ್ಜಿಯನ್ನು ಮಾತ್ರ ವಿಚಾರಣೆ ನಡೆಸಬಹುದು, ಸಾಮಾನ್ಯ ಜಾಮೀನು ಅರ್ಜಿಯ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ವಿಚಾರಣಾ ನ್ಯಾಯಾಧೀಶರು ಹೇಳಿದ್ದರು.</p>.<p>ರಶೀದ್ ಅವರು ಬಾರಾಮುಲ್ಲಾ ಕ್ಷೇತ್ರದ ಸಂಸದರಾಗಿದ್ದು, ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ ಆರೋಪದಡಿ 2019ರಿಂದ ತಿಹಾರ ಜೈಲಿನಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>