<p><strong>ಜಮ್ಮು</strong>: ಸಂವಿಧಾನದ 370ನೇ ವಿಧಿಯಡಿ ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಬಳಿಕ ಇಲ್ಲಿ ಭಯೋತ್ಪಾದನಾ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದಲ್ಲಿ 2,327 ಮಂದಿಯನ್ನು ಬಂಧಿಸಲಾಗಿದೆ ಎಂಬ ಮಾಹಿತಿಯನ್ನು ಅಧಿಕೃತ ದತ್ತಾಂಶಗಳು ಬಹಿರಂಗಪಡಿಸಿವೆ.</p>.<p>2015ರಿಂದ 2019ರ ವರೆಗಿನ ನಾಲ್ಕು ವರ್ಷಗಳ ಅವಧಿಗೆ ಹೋಲಿಸಿದರೆ ಇಂತಹ ಬಂಧನಗಳು ಐದು ಪಟ್ಟು ಹೆಚ್ಚಾಗಿವೆ ಎಂಬುದು ಪೊಲೀಸರು ಸಂಗ್ರಹಿಸಿರುವ ದತ್ತಾಂಶಗಳಿಂದ ತಿಳಿದು ಬಂದಿದೆ.</p>.<p>ಭದ್ರತಾಪಡೆಗಳ ಯೋಧರು ಮತ್ತು ನಾಗರಿಕರ ಸಾವು–ನೋವುಗಳು, ಗ್ರೆನೇಡ್ ದಾಳಿಗಳು, ಕಚ್ಚಾ ಬಾಂಬ್ ಸ್ಫೋಟಗಳು, ಉಗ್ರರ ನೇಮಕಾತಿ ಮೊದಲಾದ ವಿಚಾರಗಳನ್ನು ಪರಿಶೀಲಿಸಿದರೆ, 2019 ಆಗಸ್ಟ್ 5ರಿಂದ 2023ರ ಜೂನ್ 20ರ ನಡುವೆ ಇಲ್ಲಿನ ಭದ್ರತಾ ಪರಿಸ್ಥಿತಿಯಲ್ಲಿ ಗಮನಾರ್ಹ ಸುಧಾರಣೆ ಕಂಡು ಬಂದಿದೆ.</p>.<p>ಭಯೋತ್ಪಾದಕರ ನೇಮಕಾತಿಯಲ್ಲಿ ಶೇ23ರಷ್ಟು ಇಳಿಕೆಯಾಗಿದೆ. 2015ರಿಂದ 2019ರ ನಡುವೆ 597 ಮಂದಿ ಉಗ್ರ ಸಂಘಟನೆಗಳಿಗೆ ಸೇರ್ಪಡೆಗೊಂಡಿದ್ದರೆ, 2019ರಿಂದ 2023ರ ನಡುವೆ 461 ಮಂದಿ ಸೇರ್ಪಡೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಉಗ್ರರ ವಿರುದ್ಧದ ಪರಿಣಾಮಕಾರಿ ಕಾರ್ಯಾಚರಣೆ, ಗುಪ್ತಚರ ಇಲಾಖೆಯ ಮಾಹಿತಿ ಸಂಗ್ರಹಣೆಯಲ್ಲಿನ ಸುಧಾರಣೆಯು ಭಯೋತ್ಪಾದಕ ಚಟುವಟಿಕೆಗಳು ಕಡಿಮೆಯಾಗಲು ಕಾರಣವಾಗಿದೆ ಎಂದಿದ್ದಾರೆ.</p>.<p>2019ರ ಆಗಸ್ಟ್ 5ರಿಂದ 2023ರ ಜೂನ್ ನಡುವೆ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ 675 ಮಂದಿ ಉಗ್ರರು ಹತರಾಗಿದ್ದಾರೆ. 2015ರಿಂದ 2019ರ ನಡುವೆ 740 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿತ್ತು ಎಂದು ವಿವರಿಸಿದ್ದಾರೆ.</p>.<p>2015ರಿಂದ 2019ರ ನಡುವೆ ಪೊಲೀಸ್ ಮತ್ತು ಭದ್ರತಾ ಪಡೆಯ 329 ಸಿಬ್ಬಂದಿ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿದ್ದರು. 2019 ಆಗಸ್ಟ್ 5ರ ನಂತರ 146 ಮಂದಿ ಉಗ್ರರ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು</strong>: ಸಂವಿಧಾನದ 370ನೇ ವಿಧಿಯಡಿ ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಬಳಿಕ ಇಲ್ಲಿ ಭಯೋತ್ಪಾದನಾ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದಲ್ಲಿ 2,327 ಮಂದಿಯನ್ನು ಬಂಧಿಸಲಾಗಿದೆ ಎಂಬ ಮಾಹಿತಿಯನ್ನು ಅಧಿಕೃತ ದತ್ತಾಂಶಗಳು ಬಹಿರಂಗಪಡಿಸಿವೆ.</p>.<p>2015ರಿಂದ 2019ರ ವರೆಗಿನ ನಾಲ್ಕು ವರ್ಷಗಳ ಅವಧಿಗೆ ಹೋಲಿಸಿದರೆ ಇಂತಹ ಬಂಧನಗಳು ಐದು ಪಟ್ಟು ಹೆಚ್ಚಾಗಿವೆ ಎಂಬುದು ಪೊಲೀಸರು ಸಂಗ್ರಹಿಸಿರುವ ದತ್ತಾಂಶಗಳಿಂದ ತಿಳಿದು ಬಂದಿದೆ.</p>.<p>ಭದ್ರತಾಪಡೆಗಳ ಯೋಧರು ಮತ್ತು ನಾಗರಿಕರ ಸಾವು–ನೋವುಗಳು, ಗ್ರೆನೇಡ್ ದಾಳಿಗಳು, ಕಚ್ಚಾ ಬಾಂಬ್ ಸ್ಫೋಟಗಳು, ಉಗ್ರರ ನೇಮಕಾತಿ ಮೊದಲಾದ ವಿಚಾರಗಳನ್ನು ಪರಿಶೀಲಿಸಿದರೆ, 2019 ಆಗಸ್ಟ್ 5ರಿಂದ 2023ರ ಜೂನ್ 20ರ ನಡುವೆ ಇಲ್ಲಿನ ಭದ್ರತಾ ಪರಿಸ್ಥಿತಿಯಲ್ಲಿ ಗಮನಾರ್ಹ ಸುಧಾರಣೆ ಕಂಡು ಬಂದಿದೆ.</p>.<p>ಭಯೋತ್ಪಾದಕರ ನೇಮಕಾತಿಯಲ್ಲಿ ಶೇ23ರಷ್ಟು ಇಳಿಕೆಯಾಗಿದೆ. 2015ರಿಂದ 2019ರ ನಡುವೆ 597 ಮಂದಿ ಉಗ್ರ ಸಂಘಟನೆಗಳಿಗೆ ಸೇರ್ಪಡೆಗೊಂಡಿದ್ದರೆ, 2019ರಿಂದ 2023ರ ನಡುವೆ 461 ಮಂದಿ ಸೇರ್ಪಡೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಉಗ್ರರ ವಿರುದ್ಧದ ಪರಿಣಾಮಕಾರಿ ಕಾರ್ಯಾಚರಣೆ, ಗುಪ್ತಚರ ಇಲಾಖೆಯ ಮಾಹಿತಿ ಸಂಗ್ರಹಣೆಯಲ್ಲಿನ ಸುಧಾರಣೆಯು ಭಯೋತ್ಪಾದಕ ಚಟುವಟಿಕೆಗಳು ಕಡಿಮೆಯಾಗಲು ಕಾರಣವಾಗಿದೆ ಎಂದಿದ್ದಾರೆ.</p>.<p>2019ರ ಆಗಸ್ಟ್ 5ರಿಂದ 2023ರ ಜೂನ್ ನಡುವೆ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ 675 ಮಂದಿ ಉಗ್ರರು ಹತರಾಗಿದ್ದಾರೆ. 2015ರಿಂದ 2019ರ ನಡುವೆ 740 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿತ್ತು ಎಂದು ವಿವರಿಸಿದ್ದಾರೆ.</p>.<p>2015ರಿಂದ 2019ರ ನಡುವೆ ಪೊಲೀಸ್ ಮತ್ತು ಭದ್ರತಾ ಪಡೆಯ 329 ಸಿಬ್ಬಂದಿ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿದ್ದರು. 2019 ಆಗಸ್ಟ್ 5ರ ನಂತರ 146 ಮಂದಿ ಉಗ್ರರ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>