<p><strong>ಶ್ರೀನಗರ (ಪಿಟಿಐ):</strong> ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆ ಗುಪ್ತ ದಳದ ಅಧಿಕಾರಿಗಳು ಏಳು ಜಿಲ್ಲೆಗಳಲ್ಲಿ ಮಂಗಳವಾರ ಮುಂಜಾನೆ ದಾಳಿ ನಡೆಸಿದ್ದು, ಭಯೋತ್ಪಾದನಾ ಚಟುವಟಿಕಗಳಿಗೆ ಬೆಂಬಲ ನೀಡುತ್ತಿದ್ದ ಆರೋಪದಡಿ 12 ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.</p>.<p>ಶ್ರೀನಗರ, ಬಾರಾಮುಲ್ಲಾ, ಅನಂತನಾಗ್, ಪುಲ್ವಾಮಾ, ಕುಪ್ವಾರಾ, ಬುಡ್ಗಮ್ ಮತ್ತು ಶೋಪಿಯಾನ್ನ 12 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಯಿತು. 10 ಮೊಬೈಲ್ ಫೋನ್ಗಳು, ಒಂದು ಲ್ಯಾಪ್ಟಾಪ್ ಮತ್ತು 14 ಸಿಮ್ ಕಾರ್ಡ್ಗಳು ಸೇರಿದಂತೆ ಡಿಜಿಟಲ್ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>‘ಕಾಶ್ಮೀರ ಕಣಿವೆಯ ಹಲವು ಜಿಲ್ಲೆಗಳಲ್ಲಿ ಸಾಮಾಜಿಕ ಚಟುವಟಿಕೆಗಳ ಸೋಗಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವರು ಭಯೋತ್ಪಾದಕ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿದ್ದರು. ಇಂತಹ ರಾಷ್ಟ್ರವಿರೋಧಿ ಶಕ್ತಿಗಳಿಗೆ ಈ ದಾಳಿಯು ತೀವ್ರ ಹೊಡೆತ ನೀಡಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಶ್ರೀನಗರ ಪೊಲೀಸ್ ಠಾಣೆಯಲ್ಲಿ ಐಪಿಸಿಯ ವಿವಿಧ ಸೆಕ್ಷನ್ಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ 2023ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಶೋಧ ಕಾರ್ಯ ನಡೆಸಲಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ (ಪಿಟಿಐ):</strong> ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆ ಗುಪ್ತ ದಳದ ಅಧಿಕಾರಿಗಳು ಏಳು ಜಿಲ್ಲೆಗಳಲ್ಲಿ ಮಂಗಳವಾರ ಮುಂಜಾನೆ ದಾಳಿ ನಡೆಸಿದ್ದು, ಭಯೋತ್ಪಾದನಾ ಚಟುವಟಿಕಗಳಿಗೆ ಬೆಂಬಲ ನೀಡುತ್ತಿದ್ದ ಆರೋಪದಡಿ 12 ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.</p>.<p>ಶ್ರೀನಗರ, ಬಾರಾಮುಲ್ಲಾ, ಅನಂತನಾಗ್, ಪುಲ್ವಾಮಾ, ಕುಪ್ವಾರಾ, ಬುಡ್ಗಮ್ ಮತ್ತು ಶೋಪಿಯಾನ್ನ 12 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಯಿತು. 10 ಮೊಬೈಲ್ ಫೋನ್ಗಳು, ಒಂದು ಲ್ಯಾಪ್ಟಾಪ್ ಮತ್ತು 14 ಸಿಮ್ ಕಾರ್ಡ್ಗಳು ಸೇರಿದಂತೆ ಡಿಜಿಟಲ್ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>‘ಕಾಶ್ಮೀರ ಕಣಿವೆಯ ಹಲವು ಜಿಲ್ಲೆಗಳಲ್ಲಿ ಸಾಮಾಜಿಕ ಚಟುವಟಿಕೆಗಳ ಸೋಗಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವರು ಭಯೋತ್ಪಾದಕ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿದ್ದರು. ಇಂತಹ ರಾಷ್ಟ್ರವಿರೋಧಿ ಶಕ್ತಿಗಳಿಗೆ ಈ ದಾಳಿಯು ತೀವ್ರ ಹೊಡೆತ ನೀಡಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಶ್ರೀನಗರ ಪೊಲೀಸ್ ಠಾಣೆಯಲ್ಲಿ ಐಪಿಸಿಯ ವಿವಿಧ ಸೆಕ್ಷನ್ಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ 2023ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಶೋಧ ಕಾರ್ಯ ನಡೆಸಲಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>