<p><strong>ಅಮರಾವತಿ: ‘</strong>ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರವು ಕಟ್ಟಡ ನಿರ್ಮಾಣದ ನಿಯಮಗಳನ್ನು ಉಲ್ಲಂಘಿಸಿ ಉಂದವಳ್ಳಿಯಲ್ಲಿ ನಿರ್ಮಿಸಿದ್ದ ‘ಪ್ರಜಾ ವೇದಿಕ’ ಕಟ್ಟಡವನ್ನು ನೆಲಸಮಗೊಳಿಸಬೇಕು’ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಸೋಮವಾರ ಆದೇಶಿಸಿದರು.</p>.<p>ಪ್ರಜಾ ವೇದಿಕ ಕಟ್ಟಡದಲ್ಲಿಯೇ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಗುರುವಾರದಿಂದಲೇ ನೆಲಸಮ ಕಾರ್ಯ ಆರಂಭವಾಗಬೇಕು’ ಎಂದು ತಾಕೀತು ಮಾಡಿದರು. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಇಲಾಖೆಗಳ ಮುಖ್ಯಸ್ಥರು, ಕಾರ್ಯದರ್ಶಿಗಳು ಹಾಗೂ ಸಂಪುಟ ಸಚಿವರು ಸಮ್ಮೇಳನದಲ್ಲಿ ಉಪಸ್ಥಿತರಿದ್ದರು.</p>.<p>‘ಉದ್ದೇಶಪೂರ್ವಕವಾಗಿ ನಾನು ಇದೇ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ಸಭೆ ಕರೆದಿದ್ದೇನೆ. ಕಟ್ಟಡ ನಿರ್ಮಾಣದ ನಿಯಮಗಳನ್ನು ಉಲ್ಲಂಘಿಸಿ ಹಿಂದಿನ ಸರ್ಕಾರವು ನದಿಪಾತ್ರದಲ್ಲಿ ಹೇಗೆ ನಿರ್ಮಾಣ ಚಟುವಟಿಕೆಯನ್ನು ಕೈಗೊಂಡಿತ್ತು ಎಂಬುದನ್ನು ನಿಮಗೆ ತೋರಿಸುವುದು ನನ್ನ ಉದ್ದೇಶ’ ಎಂದು ಮುಖ್ಯಮಂತ್ರಿ ಹೇಳಿದರು.</p>.<p>‘ಕಟ್ಟಡದ ಅಡಿಪಾಯ ಜಲಮಟ್ಟಕ್ಕಿಂತ ಕೆಳಗಿದೆ ಎಂಬ ಕಾರಣಕ್ಕೆ ಅಧಿಕಾರಿಯೊಬ್ಬರು ನಿರ್ಮಾಣ ಕಾರ್ಯಕ್ಕೆ ಅನುಮತಿ ನಿರಾಕರಿಸಿದ್ದರು. ಆದರೆ, ನಾಯ್ಡು ನೇತೃತ್ವದ ಸರ್ಕಾರ ಈ ಆಕ್ಷೇಪವನ್ನು ಕಡೆಗಣಿಸಿತು. ಬರುವ ದಿನಗಳಲ್ಲಿ ನೆಲಸಮಗೊಳ್ಳಲಿರುವ ಮೊದಲ ಅಕ್ರಮ ಕಟ್ಟಡ ‘ಪ್ರಜಾ ವೇದಿಕೆ’ ಆಗಬೇಕು ಎಂಬುದು ನನ್ನ ಇಚ್ಛೆ’ ಎಂದರು.</p>.<p>ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಅವರ ತೆಲುಗುದೇಶಂ ಪಕ್ಷಕ್ಕೆ ಸೇರಿದ ಎಲ್ಲ ವಸ್ತುಗಳನ್ನು ಪ್ರಜಾ ವೇದಿಕ ಕಟ್ಟಡದಿಂದ ತೆರವುಗೊಳಿಸುವ ಕಾರ್ಯಕ್ಕೆ ಸರ್ಕಾರ ಶನಿವಾರವಷ್ಟೇ ಚಾಲನೆ ನೀಡಿತ್ತು.</p>.<p>‘ಹಸಿರು ನ್ಯಾಯಮಂಡಳಿಯ ಸೂಚನೆಗಳನ್ನು ಕಡೆಗಣಿಸಿ ಕಟ್ಟಡ ನಿರ್ಮಿಸಿದ್ದು ತಪ್ಪು. ನಿರ್ಮಾಣ ವೆಚ್ಚವನ್ನು ಸಹ ₹ 5 ಕೋಟಿಯಿಂದ ₹8 ಕೋಟಿಗೆ ಏರಿಸಲಾಗಿದೆ. ಹೀಗಿರುವಾಗ ‘ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಬೇಡಿ’ ಎಂದುಜನರಿಗೆ ಹೇಳುವ ನೈತಿಕ ಹಕ್ಕು ನಮಗಿದೆಯೇ?’ ಎಂದು ಜಿಲ್ಲಾಧಿಕಾರಿಗಳಿಗೆ ಸಿ.ಎಂ. ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ: ‘</strong>ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರವು ಕಟ್ಟಡ ನಿರ್ಮಾಣದ ನಿಯಮಗಳನ್ನು ಉಲ್ಲಂಘಿಸಿ ಉಂದವಳ್ಳಿಯಲ್ಲಿ ನಿರ್ಮಿಸಿದ್ದ ‘ಪ್ರಜಾ ವೇದಿಕ’ ಕಟ್ಟಡವನ್ನು ನೆಲಸಮಗೊಳಿಸಬೇಕು’ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಸೋಮವಾರ ಆದೇಶಿಸಿದರು.</p>.<p>ಪ್ರಜಾ ವೇದಿಕ ಕಟ್ಟಡದಲ್ಲಿಯೇ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಗುರುವಾರದಿಂದಲೇ ನೆಲಸಮ ಕಾರ್ಯ ಆರಂಭವಾಗಬೇಕು’ ಎಂದು ತಾಕೀತು ಮಾಡಿದರು. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಇಲಾಖೆಗಳ ಮುಖ್ಯಸ್ಥರು, ಕಾರ್ಯದರ್ಶಿಗಳು ಹಾಗೂ ಸಂಪುಟ ಸಚಿವರು ಸಮ್ಮೇಳನದಲ್ಲಿ ಉಪಸ್ಥಿತರಿದ್ದರು.</p>.<p>‘ಉದ್ದೇಶಪೂರ್ವಕವಾಗಿ ನಾನು ಇದೇ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ಸಭೆ ಕರೆದಿದ್ದೇನೆ. ಕಟ್ಟಡ ನಿರ್ಮಾಣದ ನಿಯಮಗಳನ್ನು ಉಲ್ಲಂಘಿಸಿ ಹಿಂದಿನ ಸರ್ಕಾರವು ನದಿಪಾತ್ರದಲ್ಲಿ ಹೇಗೆ ನಿರ್ಮಾಣ ಚಟುವಟಿಕೆಯನ್ನು ಕೈಗೊಂಡಿತ್ತು ಎಂಬುದನ್ನು ನಿಮಗೆ ತೋರಿಸುವುದು ನನ್ನ ಉದ್ದೇಶ’ ಎಂದು ಮುಖ್ಯಮಂತ್ರಿ ಹೇಳಿದರು.</p>.<p>‘ಕಟ್ಟಡದ ಅಡಿಪಾಯ ಜಲಮಟ್ಟಕ್ಕಿಂತ ಕೆಳಗಿದೆ ಎಂಬ ಕಾರಣಕ್ಕೆ ಅಧಿಕಾರಿಯೊಬ್ಬರು ನಿರ್ಮಾಣ ಕಾರ್ಯಕ್ಕೆ ಅನುಮತಿ ನಿರಾಕರಿಸಿದ್ದರು. ಆದರೆ, ನಾಯ್ಡು ನೇತೃತ್ವದ ಸರ್ಕಾರ ಈ ಆಕ್ಷೇಪವನ್ನು ಕಡೆಗಣಿಸಿತು. ಬರುವ ದಿನಗಳಲ್ಲಿ ನೆಲಸಮಗೊಳ್ಳಲಿರುವ ಮೊದಲ ಅಕ್ರಮ ಕಟ್ಟಡ ‘ಪ್ರಜಾ ವೇದಿಕೆ’ ಆಗಬೇಕು ಎಂಬುದು ನನ್ನ ಇಚ್ಛೆ’ ಎಂದರು.</p>.<p>ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಅವರ ತೆಲುಗುದೇಶಂ ಪಕ್ಷಕ್ಕೆ ಸೇರಿದ ಎಲ್ಲ ವಸ್ತುಗಳನ್ನು ಪ್ರಜಾ ವೇದಿಕ ಕಟ್ಟಡದಿಂದ ತೆರವುಗೊಳಿಸುವ ಕಾರ್ಯಕ್ಕೆ ಸರ್ಕಾರ ಶನಿವಾರವಷ್ಟೇ ಚಾಲನೆ ನೀಡಿತ್ತು.</p>.<p>‘ಹಸಿರು ನ್ಯಾಯಮಂಡಳಿಯ ಸೂಚನೆಗಳನ್ನು ಕಡೆಗಣಿಸಿ ಕಟ್ಟಡ ನಿರ್ಮಿಸಿದ್ದು ತಪ್ಪು. ನಿರ್ಮಾಣ ವೆಚ್ಚವನ್ನು ಸಹ ₹ 5 ಕೋಟಿಯಿಂದ ₹8 ಕೋಟಿಗೆ ಏರಿಸಲಾಗಿದೆ. ಹೀಗಿರುವಾಗ ‘ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಬೇಡಿ’ ಎಂದುಜನರಿಗೆ ಹೇಳುವ ನೈತಿಕ ಹಕ್ಕು ನಮಗಿದೆಯೇ?’ ಎಂದು ಜಿಲ್ಲಾಧಿಕಾರಿಗಳಿಗೆ ಸಿ.ಎಂ. ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>