<p><strong>ನವದೆಹಲಿ</strong>: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ವೈದ್ಯಕೀಯ ಕಾರಣಗಳನ್ನು ನೀಡಿ ಸೋಮವಾರ(ಜು.21) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.</p><p>ರಾಜೀನಾಮೆ, ನಿಧನ, ಪದಚ್ಯುತಿ ಅಥವಾ ಇನ್ಯಾವುದೇ ಕಾರಣದಿಂದ ಉಪ ರಾಷ್ಟ್ರಪತಿ ಸ್ಥಾನ ತೆರವಾದಲ್ಲಿ, ಆ ಸ್ಥಾನವನ್ನು ಭರ್ತಿ ಮಾಡಲು ಸಾಧ್ಯವಾದಷ್ಟು ಬೇಗ ಚುನಾವಣೆ ನಡೆಸಬೇಕೆಂದು ಸಂವಿಧಾನವು ಹೇಳುತ್ತದೆ.</p><p>ಈ ಬಗ್ಗೆ ಸಂವಿಧಾನದ 68ನೇ ವಿಧಿಯ 2ನೇ ಷರತ್ತಿನಲ್ಲಿ ವಿವರಿಸಲಾಗಿದೆ.</p><p>ಆಯ್ಕೆಯಾದ ವ್ಯಕ್ತಿಯು ಅಧಿಕಾರ ವಹಿಸಿಕೊಂಡ ದಿನದಿಂದ ಐದು ವರ್ಷಗಳ ಪೂರ್ಣ ಅವಧಿಗೆ ಅಧಿಕಾರದಲ್ಲಿರಲು ಅರ್ಹರಾಗಿರುತ್ತಾರೆ ಎಂದು ಹೇಳಿದೆ.</p><p>ಆದರೆ, ಉಪ ರಾಷ್ಟ್ರಪತಿ ಹುದ್ದೆಯಲ್ಲಿದ್ದವರು ಅವಧಿ ಮುಗಿಯುವ ಮೊದಲು ನಿಧನರಾದರೆ ಅಥವಾ ರಾಜೀನಾಮೆ ನೀಡಿದರೆ ಅಥವಾ ರಾಷ್ಟ್ರಪತಿಯಾಗಿ ಆಯ್ಕೆಯಾದರೆ, ಮುಂದಿನ ಉಪ ರಾಷ್ಟ್ರಪತಿ ಆಯ್ಕೆಯಾಗುವವರೆಗೆ ಅವರ ಕರ್ತವ್ಯಗಳನ್ನು ಯಾರು ನಿರ್ವಹಿಸುತ್ತಾರೆ ಎಂಬ ಬಗ್ಗೆ ಸಂವಿಧಾನದಲ್ಲಿ ವಿವರಿಸಿಲ್ಲ.</p><p>ಉಪ ರಾಷ್ಟ್ರಪತಿ ಹುದ್ದೆಯು ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾಗಿದೆ. ಅವರ ಅಧಿಕಾರವಧಿ ಐದು ವರ್ಷಗಳ ಕಾಲ ಇರುತ್ತದೆ. ಅವಧಿ ಮುಗಿದ ನಂತರ ಮುಂದಿನ ಉಪ ರಾಷ್ಟ್ರಪತಿ ಆಯ್ಕೆಯಾಗುವವರೆಗೂ ಅವರು ಅಧಿಕಾರದಲ್ಲಿ ಮುಂದುವರಿಯಬಹುದಾಗಿದೆ.</p><p>ಸಂವಿಧಾನದಲ್ಲಿರುವ ಏಕೈಕ ನಿಬಂಧನೆಯು ರಾಜ್ಯಸಭೆಯ ಸಭಾಪತಿಯಾಗಿ ಉಪ ರಾಷ್ಟ್ರಪತಿಯ ಕಾರ್ಯವನ್ನು ವಿವರಿಸುತ್ತದೆ. ಉಪ ರಾಷ್ಟ್ರಪತಿ ರಾಜೀನಾಮೆ ನೀಡಿದ ಸಂದರ್ಭ, ಉಪ ಸಭಾಪತಿ ಅಥವಾ ರಾಷ್ಟ್ರಪತಿಗಳು ಅಧಿಕಾರ ನೀಡಿದ ರಾಜ್ಯಸಭೆಯ ಸದಸ್ಯ ಅವರ ಕಾರ್ಯವನ್ನು ನಿರ್ವಹಿಸುತ್ತಾರೆ.</p><p>ಉಪ ರಾಷ್ಟ್ರಪತಿಗಳು ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿಗೆ ಸಲ್ಲಿಸುವ ಮೂಲಕ ತಮ್ಮ ಹುದ್ದೆಗೆ ರಾಜೀನಾಮೆ ನೀಡಬಹುದು. ರಾಜೀನಾಮೆಯು ಅಂಗೀಕರಿಸಲ್ಪಟ್ಟ ದಿನದಿಂದ ಜಾರಿಗೆ ಬರುತ್ತದೆ.</p><p>74 ವರ್ಷದ ಧನಕರ್ ಅವರು 2022ರ ಆಗಸ್ಟ್ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರದ ಅವಧಿ 2027ರ ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ವೈದ್ಯಕೀಯ ಕಾರಣಗಳನ್ನು ನೀಡಿ ಸೋಮವಾರ(ಜು.21) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.</p><p>ರಾಜೀನಾಮೆ, ನಿಧನ, ಪದಚ್ಯುತಿ ಅಥವಾ ಇನ್ಯಾವುದೇ ಕಾರಣದಿಂದ ಉಪ ರಾಷ್ಟ್ರಪತಿ ಸ್ಥಾನ ತೆರವಾದಲ್ಲಿ, ಆ ಸ್ಥಾನವನ್ನು ಭರ್ತಿ ಮಾಡಲು ಸಾಧ್ಯವಾದಷ್ಟು ಬೇಗ ಚುನಾವಣೆ ನಡೆಸಬೇಕೆಂದು ಸಂವಿಧಾನವು ಹೇಳುತ್ತದೆ.</p><p>ಈ ಬಗ್ಗೆ ಸಂವಿಧಾನದ 68ನೇ ವಿಧಿಯ 2ನೇ ಷರತ್ತಿನಲ್ಲಿ ವಿವರಿಸಲಾಗಿದೆ.</p><p>ಆಯ್ಕೆಯಾದ ವ್ಯಕ್ತಿಯು ಅಧಿಕಾರ ವಹಿಸಿಕೊಂಡ ದಿನದಿಂದ ಐದು ವರ್ಷಗಳ ಪೂರ್ಣ ಅವಧಿಗೆ ಅಧಿಕಾರದಲ್ಲಿರಲು ಅರ್ಹರಾಗಿರುತ್ತಾರೆ ಎಂದು ಹೇಳಿದೆ.</p><p>ಆದರೆ, ಉಪ ರಾಷ್ಟ್ರಪತಿ ಹುದ್ದೆಯಲ್ಲಿದ್ದವರು ಅವಧಿ ಮುಗಿಯುವ ಮೊದಲು ನಿಧನರಾದರೆ ಅಥವಾ ರಾಜೀನಾಮೆ ನೀಡಿದರೆ ಅಥವಾ ರಾಷ್ಟ್ರಪತಿಯಾಗಿ ಆಯ್ಕೆಯಾದರೆ, ಮುಂದಿನ ಉಪ ರಾಷ್ಟ್ರಪತಿ ಆಯ್ಕೆಯಾಗುವವರೆಗೆ ಅವರ ಕರ್ತವ್ಯಗಳನ್ನು ಯಾರು ನಿರ್ವಹಿಸುತ್ತಾರೆ ಎಂಬ ಬಗ್ಗೆ ಸಂವಿಧಾನದಲ್ಲಿ ವಿವರಿಸಿಲ್ಲ.</p><p>ಉಪ ರಾಷ್ಟ್ರಪತಿ ಹುದ್ದೆಯು ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾಗಿದೆ. ಅವರ ಅಧಿಕಾರವಧಿ ಐದು ವರ್ಷಗಳ ಕಾಲ ಇರುತ್ತದೆ. ಅವಧಿ ಮುಗಿದ ನಂತರ ಮುಂದಿನ ಉಪ ರಾಷ್ಟ್ರಪತಿ ಆಯ್ಕೆಯಾಗುವವರೆಗೂ ಅವರು ಅಧಿಕಾರದಲ್ಲಿ ಮುಂದುವರಿಯಬಹುದಾಗಿದೆ.</p><p>ಸಂವಿಧಾನದಲ್ಲಿರುವ ಏಕೈಕ ನಿಬಂಧನೆಯು ರಾಜ್ಯಸಭೆಯ ಸಭಾಪತಿಯಾಗಿ ಉಪ ರಾಷ್ಟ್ರಪತಿಯ ಕಾರ್ಯವನ್ನು ವಿವರಿಸುತ್ತದೆ. ಉಪ ರಾಷ್ಟ್ರಪತಿ ರಾಜೀನಾಮೆ ನೀಡಿದ ಸಂದರ್ಭ, ಉಪ ಸಭಾಪತಿ ಅಥವಾ ರಾಷ್ಟ್ರಪತಿಗಳು ಅಧಿಕಾರ ನೀಡಿದ ರಾಜ್ಯಸಭೆಯ ಸದಸ್ಯ ಅವರ ಕಾರ್ಯವನ್ನು ನಿರ್ವಹಿಸುತ್ತಾರೆ.</p><p>ಉಪ ರಾಷ್ಟ್ರಪತಿಗಳು ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿಗೆ ಸಲ್ಲಿಸುವ ಮೂಲಕ ತಮ್ಮ ಹುದ್ದೆಗೆ ರಾಜೀನಾಮೆ ನೀಡಬಹುದು. ರಾಜೀನಾಮೆಯು ಅಂಗೀಕರಿಸಲ್ಪಟ್ಟ ದಿನದಿಂದ ಜಾರಿಗೆ ಬರುತ್ತದೆ.</p><p>74 ವರ್ಷದ ಧನಕರ್ ಅವರು 2022ರ ಆಗಸ್ಟ್ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರದ ಅವಧಿ 2027ರ ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>