<p><strong>ಸಿಯಾಟಲ್</strong>: 2023ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬರುತ್ತಿದ್ದ ಪೊಲೀಸ್ ಅಧಿಕಾರಿ ಚಾಲನೆ ಮಾಡುತ್ತಿದ್ದ ವಾಹನ ಡಿಕ್ಕಿ ಹೊಡೆದ ಪರಿಣಾಮ 23 ವರ್ಷದ ಭಾರತ ಮೂಲದ ಪದವಿ ವಿದ್ಯಾರ್ಥಿನಿ ಮೃತಪಟ್ಟಿದ್ದರು. ಇದೀಗ, ಅವರ ಕುಟುಂಬಕ್ಕೆ ಸಿಯಾಟೆಲ್ನ ಸ್ಥಳೀಯಾಡಳಿತ 29 ಮಿಲಿಯನ್ ಡಾಲರ್ (ಸುಮಾರು ₹ 262 ಕೋಟಿ) ಪರಿಹಾರ ಘೋಷಿಸಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.</p><p>ಮಾದಕವಸ್ತು ಸಂಬಂಧಿತ ದೂರವಾಣಿ ಕರೆಗೆ ಪ್ರತಿಕ್ರಿಯಿಸುತ್ತಿದ್ದಾಗ 25 ಕಿ.ಮೀ ವೇಗದಲ್ಲಿ ಚಲಿಸಬೇಕಿದ್ದ ವಲಯದಲ್ಲಿ 74 ಕಿ.ಮೀ ವೇಗದಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಅಧಿಕಾರಿ ಕೆವಿನ್ ಡೇವ್, ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರಿಗೆ ಡಿಕ್ಕಿ ಹೊಡೆದಿದ್ದರು.</p><p>‘ಜಾಹ್ನವಿ ಕಂದುಲಾ ಅವರ ಸಾವು ಹೃದಯವಿದ್ರಾವಕವಾಗಿತ್ತು. ಈ ಆರ್ಥಿಕ ಪರಿಹಾರವು ಕಂದುಲಾ ಕುಟುಂಬಕ್ಕೆ ಸ್ವಲ್ಪ ಮಟ್ಟಿಗೆ ಶಾಂತಿಯನ್ನು ತರುತ್ತದೆ ಎಂದು ಆಶಿಸುತ್ತೇವೆ’ಎಂಬುದಾಗಿ ಸಿಯಾಟೆಲ್ ನಗರದ ಸ್ಥಳೀಯಾಡಳಿತ ಹೇಳಿದೆ.</p><p>ಈ ಸಂಬಂಧ ವಕೀಲ ಎರಿಕಾ ಇವಾನ್ಸ್ ಬುಧವಾರ ಹೇಳಿಕೆ ಬಿಡುಗಡೆ ಮಾಡಿದ್ದು, ಜಾಹ್ನವಿ ಕಂದುಲಾ ಅವರ ಜೀವ ಅತ್ಯಂತ ಮುಖ್ಯವಾಗಿತ್ತು. ಈ ಪರಿಹಾರವು ಅವರ ಕುಟುಂಬ, ಅವರ ಸ್ನೇಹಿತರು ಮತ್ತು ನಮ್ಮ ಸಮುದಾಯಕ್ಕೆ ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.</p><p>ಕಂದುಲಾ ಅವರು ಸಿಯಾಟಲ್ ನಾರ್ಥ್ ಈಸ್ಟರ್ನ್ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಮಾಹಿತಿ ವ್ಯವಸ್ಥೆಗಳ ಸಂಬಂಧಿತ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು.</p><p>ಕಳೆದ ಶುಕ್ರವಾರ ಕಿಂಗ್ ಕೌಂಟಿ ಸುಪೀರಿಯರ್ ಕೋರ್ಟ್ನಲ್ಲಿ ಕಕ್ಷಿದಾರರು ಪರಿಹಾರ ಇತ್ಯರ್ಥದ ನೋಟಿಸ್ ಸಲ್ಲಿಸಿದ್ದರು. ಸ್ಥಳೀಯ ಸುದ್ದಿ ತಾಣ ಪಬ್ಲಿಕೋಲಾ ಮೊದಲು ಈ ಬಗ್ಗೆ ವರದಿ ಮಾಡಿತ್ತು.</p><p>ಕಂದುಲಾ ಅವರ ಸಾವು ಆಕ್ರೋಶ ಮತ್ತು ಪ್ರತಿಭಟನೆಗಳನ್ನು ಹುಟ್ಟುಹಾಕಿತ್ತು. ಪ್ರಕರಣ ಕುರಿತಂತೆ ತನಿಖೆಗೂ ರಾಯಭಾರ ಕಚೇರಿ ಮನವಿ ಮಾಡಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಯಾಟಲ್</strong>: 2023ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬರುತ್ತಿದ್ದ ಪೊಲೀಸ್ ಅಧಿಕಾರಿ ಚಾಲನೆ ಮಾಡುತ್ತಿದ್ದ ವಾಹನ ಡಿಕ್ಕಿ ಹೊಡೆದ ಪರಿಣಾಮ 23 ವರ್ಷದ ಭಾರತ ಮೂಲದ ಪದವಿ ವಿದ್ಯಾರ್ಥಿನಿ ಮೃತಪಟ್ಟಿದ್ದರು. ಇದೀಗ, ಅವರ ಕುಟುಂಬಕ್ಕೆ ಸಿಯಾಟೆಲ್ನ ಸ್ಥಳೀಯಾಡಳಿತ 29 ಮಿಲಿಯನ್ ಡಾಲರ್ (ಸುಮಾರು ₹ 262 ಕೋಟಿ) ಪರಿಹಾರ ಘೋಷಿಸಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.</p><p>ಮಾದಕವಸ್ತು ಸಂಬಂಧಿತ ದೂರವಾಣಿ ಕರೆಗೆ ಪ್ರತಿಕ್ರಿಯಿಸುತ್ತಿದ್ದಾಗ 25 ಕಿ.ಮೀ ವೇಗದಲ್ಲಿ ಚಲಿಸಬೇಕಿದ್ದ ವಲಯದಲ್ಲಿ 74 ಕಿ.ಮೀ ವೇಗದಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಅಧಿಕಾರಿ ಕೆವಿನ್ ಡೇವ್, ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರಿಗೆ ಡಿಕ್ಕಿ ಹೊಡೆದಿದ್ದರು.</p><p>‘ಜಾಹ್ನವಿ ಕಂದುಲಾ ಅವರ ಸಾವು ಹೃದಯವಿದ್ರಾವಕವಾಗಿತ್ತು. ಈ ಆರ್ಥಿಕ ಪರಿಹಾರವು ಕಂದುಲಾ ಕುಟುಂಬಕ್ಕೆ ಸ್ವಲ್ಪ ಮಟ್ಟಿಗೆ ಶಾಂತಿಯನ್ನು ತರುತ್ತದೆ ಎಂದು ಆಶಿಸುತ್ತೇವೆ’ಎಂಬುದಾಗಿ ಸಿಯಾಟೆಲ್ ನಗರದ ಸ್ಥಳೀಯಾಡಳಿತ ಹೇಳಿದೆ.</p><p>ಈ ಸಂಬಂಧ ವಕೀಲ ಎರಿಕಾ ಇವಾನ್ಸ್ ಬುಧವಾರ ಹೇಳಿಕೆ ಬಿಡುಗಡೆ ಮಾಡಿದ್ದು, ಜಾಹ್ನವಿ ಕಂದುಲಾ ಅವರ ಜೀವ ಅತ್ಯಂತ ಮುಖ್ಯವಾಗಿತ್ತು. ಈ ಪರಿಹಾರವು ಅವರ ಕುಟುಂಬ, ಅವರ ಸ್ನೇಹಿತರು ಮತ್ತು ನಮ್ಮ ಸಮುದಾಯಕ್ಕೆ ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.</p><p>ಕಂದುಲಾ ಅವರು ಸಿಯಾಟಲ್ ನಾರ್ಥ್ ಈಸ್ಟರ್ನ್ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಮಾಹಿತಿ ವ್ಯವಸ್ಥೆಗಳ ಸಂಬಂಧಿತ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು.</p><p>ಕಳೆದ ಶುಕ್ರವಾರ ಕಿಂಗ್ ಕೌಂಟಿ ಸುಪೀರಿಯರ್ ಕೋರ್ಟ್ನಲ್ಲಿ ಕಕ್ಷಿದಾರರು ಪರಿಹಾರ ಇತ್ಯರ್ಥದ ನೋಟಿಸ್ ಸಲ್ಲಿಸಿದ್ದರು. ಸ್ಥಳೀಯ ಸುದ್ದಿ ತಾಣ ಪಬ್ಲಿಕೋಲಾ ಮೊದಲು ಈ ಬಗ್ಗೆ ವರದಿ ಮಾಡಿತ್ತು.</p><p>ಕಂದುಲಾ ಅವರ ಸಾವು ಆಕ್ರೋಶ ಮತ್ತು ಪ್ರತಿಭಟನೆಗಳನ್ನು ಹುಟ್ಟುಹಾಕಿತ್ತು. ಪ್ರಕರಣ ಕುರಿತಂತೆ ತನಿಖೆಗೂ ರಾಯಭಾರ ಕಚೇರಿ ಮನವಿ ಮಾಡಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>