<p><strong>ಮುಂಬೈ</strong>: 2008ರಲ್ಲಿ ನಡೆದಿದ್ದ ಸುಲಿಗೆ ಪ್ರಕರಣದ ಆರೋಪಿಯಾಗಿರುವ ಪಾತಕಿ ಅರುಣ್ ಗವಳಿಯನ್ನು ಮುಂಬೈ ನ್ಯಾಯಾಲಯವೊಂದು ಬುಧವಾರ ಖುಲಾಸೆ ಗೊಳಿಸಿದೆ.</p>.<p>ಗವಳಿಯ ಕಿರಿಯ ಸಹೋದರ ವಿಜಯ್ ಅಹಿರ್ ಮತ್ತು ಆತನ ಗ್ಯಾಂಗ್ನ ಇತರೆ 5 ಮಂದಿಯನ್ನೂ ಖುಲಾಸೆಗೊಳಿಸಿ, ಇವರೆಲ್ಲರ ವಿರುದ್ಧದ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ.</p>.<p>2005ರಲ್ಲಿ ದಾದರ್ ಪ್ರದೇಶದ ಕೊಳೆಗೇರಿ ಪುನರ್ವಸತಿ ಪ್ರಾಧಿಕಾರದ ಮರು ಅಭಿವೃದ್ಧಿ ಯೋಜನೆ ವಹಿಸಿಕೊಂಡಿದ್ದ ಬಿಲ್ಡರ್ ಒಬ್ಬರಿಗೆ ಗವಳಿ ಮತ್ತು ಗ್ಯಾಂಗ್ ಬೆದರಿಕೆ ಒಡ್ಡಿತ್ತು. ₹50 ಲಕ್ಷ ಬೇಡಿಕೆ ಇಟ್ಟಿದ್ದಲ್ಲದೇ, ಆತನಿಂದ ₹7 ಲಕ್ಷ ವಸೂಲಿ ಮಾಡಿತ್ತು ಎಂದು 2008ರಲ್ಲಿ ಬಿಲ್ಡರ್ ದೂರು ನೀಡಿದ್ದರು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪೈಕಿ ಒಬ್ಬ ಆರೋಪಿ ವಿಚಾರಣೆ ಹಂತದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಆರೋಪಿ ತಪ್ಪು ಒಪ್ಪಿಕೊಂಡಿದ್ದ. ಉಳಿದ 7 ಮಂದಿಯ ವಿರುದ್ಧ ಆರೋಪದ ಸಾಬೀತಾಗದ ಕಾರಣ, ವಿಶೇಷ ನ್ಯಾಯಾಧೀಶರಾದ ಬಿ.ಡಿ. ಶೆಲ್ಕೆ ಆರೋಪಿಗಳನ್ನು ದೋಷಮುಕ್ತಗೊಳಿಸಿದ್ದಾರೆ. </p>.<p>ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅರುಣ್ ಗವಳಿ ನಾಗ್ಪುರದ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: 2008ರಲ್ಲಿ ನಡೆದಿದ್ದ ಸುಲಿಗೆ ಪ್ರಕರಣದ ಆರೋಪಿಯಾಗಿರುವ ಪಾತಕಿ ಅರುಣ್ ಗವಳಿಯನ್ನು ಮುಂಬೈ ನ್ಯಾಯಾಲಯವೊಂದು ಬುಧವಾರ ಖುಲಾಸೆ ಗೊಳಿಸಿದೆ.</p>.<p>ಗವಳಿಯ ಕಿರಿಯ ಸಹೋದರ ವಿಜಯ್ ಅಹಿರ್ ಮತ್ತು ಆತನ ಗ್ಯಾಂಗ್ನ ಇತರೆ 5 ಮಂದಿಯನ್ನೂ ಖುಲಾಸೆಗೊಳಿಸಿ, ಇವರೆಲ್ಲರ ವಿರುದ್ಧದ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ.</p>.<p>2005ರಲ್ಲಿ ದಾದರ್ ಪ್ರದೇಶದ ಕೊಳೆಗೇರಿ ಪುನರ್ವಸತಿ ಪ್ರಾಧಿಕಾರದ ಮರು ಅಭಿವೃದ್ಧಿ ಯೋಜನೆ ವಹಿಸಿಕೊಂಡಿದ್ದ ಬಿಲ್ಡರ್ ಒಬ್ಬರಿಗೆ ಗವಳಿ ಮತ್ತು ಗ್ಯಾಂಗ್ ಬೆದರಿಕೆ ಒಡ್ಡಿತ್ತು. ₹50 ಲಕ್ಷ ಬೇಡಿಕೆ ಇಟ್ಟಿದ್ದಲ್ಲದೇ, ಆತನಿಂದ ₹7 ಲಕ್ಷ ವಸೂಲಿ ಮಾಡಿತ್ತು ಎಂದು 2008ರಲ್ಲಿ ಬಿಲ್ಡರ್ ದೂರು ನೀಡಿದ್ದರು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪೈಕಿ ಒಬ್ಬ ಆರೋಪಿ ವಿಚಾರಣೆ ಹಂತದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಆರೋಪಿ ತಪ್ಪು ಒಪ್ಪಿಕೊಂಡಿದ್ದ. ಉಳಿದ 7 ಮಂದಿಯ ವಿರುದ್ಧ ಆರೋಪದ ಸಾಬೀತಾಗದ ಕಾರಣ, ವಿಶೇಷ ನ್ಯಾಯಾಧೀಶರಾದ ಬಿ.ಡಿ. ಶೆಲ್ಕೆ ಆರೋಪಿಗಳನ್ನು ದೋಷಮುಕ್ತಗೊಳಿಸಿದ್ದಾರೆ. </p>.<p>ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅರುಣ್ ಗವಳಿ ನಾಗ್ಪುರದ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>