ಅಕ್ಷಿತ್ ಅಪಾಯದಲ್ಲಿರುವ ವಿಷಯವನ್ನು ಆತನ ಸ್ನೇಹಿತರು ಗ್ರಾಮಸ್ಥರಿಗೆ ತಿಳಿಸಿದ್ದು, ಗ್ರಾಮಸ್ಥರು ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್, ಎಸ್ಡಿಆರ್ಎಫ್ ಮತ್ತು ಸಿವಿಲ್ ಡಿಫೆನ್ಸ್) ಬಾಲಕನ ರಕ್ಷಣೆಗೆ ಕಾರ್ಯಪ್ರವೃತ್ತರಾಗಿದ್ದಾರೆ.