<p>ಜೈಪುರ: ‘ಸಂವಿಧಾನ ಜಾರಿಗೆ ಬರುವ ಮುನ್ನವೇ ಭಾರತದಲ್ಲಿ ರಾಷ್ಟ್ರೀಯ ಪರಿಕಲ್ಪನೆ ಅಸ್ತಿತ್ವದಲ್ಲಿದ್ದುದು ಐತಿಹಾಸಿಕ ಸತ್ಯ. ಅಂತಹ ರಾಷ್ಟ್ರೀಯ ಮನೋಭಾವವನ್ನು ಹಾಳುಮಾಡುವ ಯತ್ನಕ್ಕೆ ದೇಶದ ಕೆಲವು ವಿಶ್ವವಿದ್ಯಾಲಯಗಳು ಈಗ ಕೈಹಾಕಿವೆ’ ಎಂದು ಹಿರಿಯ ಪತ್ರಕರ್ತ, ಬಿಜೆಪಿಯ ರಾಜ್ಯಸಭಾ ಸದಸ್ಯ ಸ್ವಪನ್ ದಾಸ್ಗುಪ್ತ ವಾಗ್ದಾಳಿ ನಡೆಸಿದರು.</p>.<p>ಜೈಪುರ ಸಾಹಿತ್ಯ ಸಮ್ಮೇಳನದಲ್ಲಿ ಗಣರಾಜ್ಯೋತ್ಸವ ದಿನವಾದ ಭಾನುವಾರ ನಡೆದ ‘ಬಲಪಂಥೀಯ ದೃಷ್ಟಿ: ಎಚ್ಚರಗೊಳ್ಳುತ್ತಿದ್ದಾಳೆ ಭಾರತ ಮಾತೆ’ ಗೋಷ್ಠಿ ಸಂವಿಧಾನದ ಕುರಿತ ಚರ್ಚೆಗೂ ವೇದಿಕೆ ಒದಗಿಸಿತು. </p>.<p>‘ಸಂವಿಧಾನ ಮುಖ್ಯ ನಿಜ. ಆದರೆ, ಸಂವಿಧಾನ ಪ್ರತಿಪಾದಿಸುವಂತಹ ರಾಷ್ಟ್ರೀಯತೆ, ಅದು 1950ರಲ್ಲಿ ಜಾರಿಗೆ ಬರುವುದಕ್ಕಿಂತ ತುಂಬಾ ಮೊದಲೇ ದೇಶದಲ್ಲಿ ಇತ್ತು. ಅಂತಹ ಮೌಲ್ಯಗಳ ಪುನರುತ್ಥಾನದ ಕೆಲಸವನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಾಡುತ್ತಿದೆ’ ಎಂದು ದಾಸ್ಗುಪ್ತ ಪ್ರತಿಪಾದಿಸಿದರು.</p>.<p>‘ದೇಶದಲ್ಲಿ ಶೇ 80ರಷ್ಟು ಜನ ಹಿಂದೂಗಳಿದ್ದರೂ ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತರನ್ನೇ ಓಲೈಸುತ್ತಾ ಬಂತು. ಆ ನಿಲುವಿನ ವಿರುದ್ಧದ ಸಿಟ್ಟು ಹರಳುಗಟ್ಟುತ್ತಾ ಹೋದಂತೆ 2014ರಲ್ಲಿ ಮೋದಿ ಭಾರತದ ಹೃದಯ ಸಾಮ್ರಾಟನಾಗಿ ಹೊರಹೊಮ್ಮಿದರು’ ಎಂದರು.</p>.<p>ಸಂವಾದದಲ್ಲಿ ಮಕರಂದ ಆರ್. ಪರಾಂಜಪೆ ಅವರೂ ಪಾಲ್ಗೊಂಡಿದ್ದರು. ‘ಸಿಎಎಯಿಂದ ಭಾರತೀಯ ಪ್ರಜೆಗಳಿಗೆ ಏನೂ ತೊಂದರೆ ಇಲ್ಲ ಎಂದಾದರೆ ಅದನ್ನು ವಿರೋಧಿಸುವವರಿಗೆ ಏನು ಬೇಕಿದೆ’ ಎಂಬ ಪ್ರಶ್ನೆ ಎದುರಾಯಿತು. ‘ಮೋದಿ ಸರ್ಕಾರವನ್ನು ತೆಗೆದುಹಾಕುವುದಲ್ಲದೆ ಇನ್ನೇನು’ ಎಂದು ಪರಾಂಜಪೆ ಉತ್ತರ ರೂಪವಾಗಿ ಮರುಪ್ರಶ್ನೆ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜೈಪುರ: ‘ಸಂವಿಧಾನ ಜಾರಿಗೆ ಬರುವ ಮುನ್ನವೇ ಭಾರತದಲ್ಲಿ ರಾಷ್ಟ್ರೀಯ ಪರಿಕಲ್ಪನೆ ಅಸ್ತಿತ್ವದಲ್ಲಿದ್ದುದು ಐತಿಹಾಸಿಕ ಸತ್ಯ. ಅಂತಹ ರಾಷ್ಟ್ರೀಯ ಮನೋಭಾವವನ್ನು ಹಾಳುಮಾಡುವ ಯತ್ನಕ್ಕೆ ದೇಶದ ಕೆಲವು ವಿಶ್ವವಿದ್ಯಾಲಯಗಳು ಈಗ ಕೈಹಾಕಿವೆ’ ಎಂದು ಹಿರಿಯ ಪತ್ರಕರ್ತ, ಬಿಜೆಪಿಯ ರಾಜ್ಯಸಭಾ ಸದಸ್ಯ ಸ್ವಪನ್ ದಾಸ್ಗುಪ್ತ ವಾಗ್ದಾಳಿ ನಡೆಸಿದರು.</p>.<p>ಜೈಪುರ ಸಾಹಿತ್ಯ ಸಮ್ಮೇಳನದಲ್ಲಿ ಗಣರಾಜ್ಯೋತ್ಸವ ದಿನವಾದ ಭಾನುವಾರ ನಡೆದ ‘ಬಲಪಂಥೀಯ ದೃಷ್ಟಿ: ಎಚ್ಚರಗೊಳ್ಳುತ್ತಿದ್ದಾಳೆ ಭಾರತ ಮಾತೆ’ ಗೋಷ್ಠಿ ಸಂವಿಧಾನದ ಕುರಿತ ಚರ್ಚೆಗೂ ವೇದಿಕೆ ಒದಗಿಸಿತು. </p>.<p>‘ಸಂವಿಧಾನ ಮುಖ್ಯ ನಿಜ. ಆದರೆ, ಸಂವಿಧಾನ ಪ್ರತಿಪಾದಿಸುವಂತಹ ರಾಷ್ಟ್ರೀಯತೆ, ಅದು 1950ರಲ್ಲಿ ಜಾರಿಗೆ ಬರುವುದಕ್ಕಿಂತ ತುಂಬಾ ಮೊದಲೇ ದೇಶದಲ್ಲಿ ಇತ್ತು. ಅಂತಹ ಮೌಲ್ಯಗಳ ಪುನರುತ್ಥಾನದ ಕೆಲಸವನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಾಡುತ್ತಿದೆ’ ಎಂದು ದಾಸ್ಗುಪ್ತ ಪ್ರತಿಪಾದಿಸಿದರು.</p>.<p>‘ದೇಶದಲ್ಲಿ ಶೇ 80ರಷ್ಟು ಜನ ಹಿಂದೂಗಳಿದ್ದರೂ ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತರನ್ನೇ ಓಲೈಸುತ್ತಾ ಬಂತು. ಆ ನಿಲುವಿನ ವಿರುದ್ಧದ ಸಿಟ್ಟು ಹರಳುಗಟ್ಟುತ್ತಾ ಹೋದಂತೆ 2014ರಲ್ಲಿ ಮೋದಿ ಭಾರತದ ಹೃದಯ ಸಾಮ್ರಾಟನಾಗಿ ಹೊರಹೊಮ್ಮಿದರು’ ಎಂದರು.</p>.<p>ಸಂವಾದದಲ್ಲಿ ಮಕರಂದ ಆರ್. ಪರಾಂಜಪೆ ಅವರೂ ಪಾಲ್ಗೊಂಡಿದ್ದರು. ‘ಸಿಎಎಯಿಂದ ಭಾರತೀಯ ಪ್ರಜೆಗಳಿಗೆ ಏನೂ ತೊಂದರೆ ಇಲ್ಲ ಎಂದಾದರೆ ಅದನ್ನು ವಿರೋಧಿಸುವವರಿಗೆ ಏನು ಬೇಕಿದೆ’ ಎಂಬ ಪ್ರಶ್ನೆ ಎದುರಾಯಿತು. ‘ಮೋದಿ ಸರ್ಕಾರವನ್ನು ತೆಗೆದುಹಾಕುವುದಲ್ಲದೆ ಇನ್ನೇನು’ ಎಂದು ಪರಾಂಜಪೆ ಉತ್ತರ ರೂಪವಾಗಿ ಮರುಪ್ರಶ್ನೆ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>