<p><strong>ಜೈಪುರ:</strong> ತಾಯಿಯನ್ನು ಕೊಂದು 38 ವರ್ಷದ ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p>.Bengaluru Crime | ಬ್ಯಾಂಕ್ ವ್ಯವಸ್ಥಾಪಕನ ಪತ್ನಿ ಆತ್ಮಹತ್ಯೆ.<p>68 ವರ್ಷದ ತಾಯಿ ಪುಷ್ಪಾಂಜಲಿ ಎಂಬವರನ್ನು ಮಗ ಅಭಿಜಿತ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಮುಹಾನಾ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಶ್ವಂತ್ ಕಾಲೊನಿಯ ಬಾಡಿಗೆ ಫ್ಲ್ಯಾಟ್ ಒಂದರಲ್ಲಿ ಘಟನೆ ನಡೆದಿದೆ.</p><p>ಮನೆಗೆ ಬೀಗ ಹಾಕಿ ಬಳಿಕ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬ್ರೈನ್ ಟವರ್ ಆಸ್ಪತ್ರೆ ಬಳಿ ವ್ಯಕ್ತಿಯೊಬ್ಬನಿಗೆ ರೈಲು ಡಿಕ್ಕಿ ಹೊಡೆದಿದೆ ಎನ್ನುವ ವಿಷಯ ಸೋಮವಾರ ಗೊತ್ತಾದಾಗ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಕುಮಾರ್ ಶರ್ಮಾ ತಿಳಿಸಿದ್ದಾರೆ.</p>.ಮೈಕ್ರೊ ಫೈನಾನ್ಸ್ ಕಿರುಕುಳ ಆರೋಪ: ವ್ಯಕ್ತಿ ಆತ್ಮಹತ್ಯೆ.<p>ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿದಾಗ, ಆತನ ಜೇಬಿನಲ್ಲಿ ಕೀ ಹಾಗೂ ಕೆಲವು ದಾಖಲೆ ಪತ್ರಗಳಿಂದಾಗಿ ಗುರುತು ಪತ್ತೆ ಸಾಧ್ಯವಾಯಿತು. ಬಳಿಕ ವಿಳಾಸ ಪತ್ತೆ ಮಾಡಿದೆವು ಎಂದು ಶರ್ಮಾ ಹೇಳಿದ್ದಾರೆ.</p><p>ಫ್ಲ್ಯಾಟ್ನಲ್ಲಿ ತಾಯಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳದಿಂದ ಚಾಕು ವಶಪಡಿಸಿಕೊಳ್ಳಲಾಗಿದೆ.</p><p>ಅಭಿಜಿತ್ ಈ ಹಿಂದೆ ಕಾಲ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ, ಘಟನೆ ನಡೆದ ಸಮಯದಲ್ಲಿ ನಿರುದ್ಯೋಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಪ್ರಕರಣ ದಾಖಲಿಸಲಾಗಿದ್ದು, ಅಪರಾಧದ ಹಿಂದಿನ ಉದ್ದೇಶ ಮತ್ತು ಘಟನೆಗೆ ಸಂಬಂಧಿಸಿದ ಇತರ ಅಂಶಗಳನ್ನು ಕಂಡುಹಿಡಿಯಲು ಹೆಚ್ಚಿನ ತನಿಖೆ ನಡೆಯುತ್ತಿದೆ.</p>.ಕಲಬುರಗಿ | ಮಗಳ ಮದುವೆಗೆ ಹಣದ ಸಮಸ್ಯೆ: ಸಿಆರ್ಪಿಎಫ್ ಯೋಧ ಆತ್ಮಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ತಾಯಿಯನ್ನು ಕೊಂದು 38 ವರ್ಷದ ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p>.Bengaluru Crime | ಬ್ಯಾಂಕ್ ವ್ಯವಸ್ಥಾಪಕನ ಪತ್ನಿ ಆತ್ಮಹತ್ಯೆ.<p>68 ವರ್ಷದ ತಾಯಿ ಪುಷ್ಪಾಂಜಲಿ ಎಂಬವರನ್ನು ಮಗ ಅಭಿಜಿತ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಮುಹಾನಾ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಶ್ವಂತ್ ಕಾಲೊನಿಯ ಬಾಡಿಗೆ ಫ್ಲ್ಯಾಟ್ ಒಂದರಲ್ಲಿ ಘಟನೆ ನಡೆದಿದೆ.</p><p>ಮನೆಗೆ ಬೀಗ ಹಾಕಿ ಬಳಿಕ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬ್ರೈನ್ ಟವರ್ ಆಸ್ಪತ್ರೆ ಬಳಿ ವ್ಯಕ್ತಿಯೊಬ್ಬನಿಗೆ ರೈಲು ಡಿಕ್ಕಿ ಹೊಡೆದಿದೆ ಎನ್ನುವ ವಿಷಯ ಸೋಮವಾರ ಗೊತ್ತಾದಾಗ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಕುಮಾರ್ ಶರ್ಮಾ ತಿಳಿಸಿದ್ದಾರೆ.</p>.ಮೈಕ್ರೊ ಫೈನಾನ್ಸ್ ಕಿರುಕುಳ ಆರೋಪ: ವ್ಯಕ್ತಿ ಆತ್ಮಹತ್ಯೆ.<p>ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿದಾಗ, ಆತನ ಜೇಬಿನಲ್ಲಿ ಕೀ ಹಾಗೂ ಕೆಲವು ದಾಖಲೆ ಪತ್ರಗಳಿಂದಾಗಿ ಗುರುತು ಪತ್ತೆ ಸಾಧ್ಯವಾಯಿತು. ಬಳಿಕ ವಿಳಾಸ ಪತ್ತೆ ಮಾಡಿದೆವು ಎಂದು ಶರ್ಮಾ ಹೇಳಿದ್ದಾರೆ.</p><p>ಫ್ಲ್ಯಾಟ್ನಲ್ಲಿ ತಾಯಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳದಿಂದ ಚಾಕು ವಶಪಡಿಸಿಕೊಳ್ಳಲಾಗಿದೆ.</p><p>ಅಭಿಜಿತ್ ಈ ಹಿಂದೆ ಕಾಲ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ, ಘಟನೆ ನಡೆದ ಸಮಯದಲ್ಲಿ ನಿರುದ್ಯೋಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಪ್ರಕರಣ ದಾಖಲಿಸಲಾಗಿದ್ದು, ಅಪರಾಧದ ಹಿಂದಿನ ಉದ್ದೇಶ ಮತ್ತು ಘಟನೆಗೆ ಸಂಬಂಧಿಸಿದ ಇತರ ಅಂಶಗಳನ್ನು ಕಂಡುಹಿಡಿಯಲು ಹೆಚ್ಚಿನ ತನಿಖೆ ನಡೆಯುತ್ತಿದೆ.</p>.ಕಲಬುರಗಿ | ಮಗಳ ಮದುವೆಗೆ ಹಣದ ಸಮಸ್ಯೆ: ಸಿಆರ್ಪಿಎಫ್ ಯೋಧ ಆತ್ಮಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>