<p><strong>ನವದೆಹಲಿ</strong>: ಪರಿಸರ ಅನುಮತಿ ಪಡೆಯದೆ ಆರಂಭಿಸಿದ ಯೋಜನೆಗಳಿಗೆ ಘಟನೋತ್ತರದಲ್ಲಿ ಪೂರ್ವಾನ್ವಯ ಆಗುವಂತೆ ಅನುಮತಿ ನೀಡುವ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿರುವುದಾಗಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಶುಕ್ರವಾರ ಹೇಳಿದ್ದಾರೆ.</p>.<p>ಅರಾವಳಿ ಪರ್ವತ ಶ್ರೇಣಿಯ ಮರು ವ್ಯಾಖ್ಯಾನಕ್ಕೆ ಸಂಬಂಧಿಸಿದ ತನ್ನ ಆದೇಶವನ್ನು ಮರುಪರಿಶೀಲಿಸುವ ಸುಪ್ರೀಂ ಕೋರ್ಟ್ನ ನಿರ್ಧಾರದಿಂದ ಪ್ರೇರಿತರಾಗಿ ಈ ಅರ್ಜಿ ಸಲ್ಲಿಸಿರುವುದಾಗಿ ಜೈರಾಮ್ ರಮೇಶ್ ಹೇಳಿದ್ದಾರೆ.</p>.<p class="bodytext">‘ಪರಿಸರ ನಿಯಮ ಉಲ್ಲಂಘಿಸಿರುವ ಯೋಜನೆಗಳಿಗೆ ಘಟನೋತ್ತವಾಗಿ ದಂಡ ವಿಧಿಸಿ, ಪೂರ್ವಾನ್ವಯ ಅನುಮತಿ ನೀಡುವ ವ್ಯವಸ್ಥೆಯು ಕಾನೂನು ಬಾಹಿರ ಮಾತ್ರವಲ್ಲದೇ, ಪರಿಸರ ಆರೋಗ್ಯಕ್ಕೂ ಹಾನಿಕರವಾಗಿದೆ. ಜತೆಗೆ ಆಡಳಿತದ ನಿಯಮಗಳನ್ನು ನಿರ್ಲಕ್ಷ್ಯಿಸುವ ಪ್ರವೃತ್ತಿಗೆ ಒತ್ತು ನೀಡುತ್ತದೆ. ಹೀಗಾಗಿ ಅರ್ಜಿ ಸಲ್ಲಿಸಿದ್ದೇನೆ’ ಎಂದು ಅವರು ತಿಳಿಸಿದ್ದಾರೆ. </p>.<p>ಪರಿಸರ ಮಾನದಂಡಗಳನ್ನು ಉಲ್ಲಂಘಿಸಿರುವ ಯೋಜನೆಗೆ ಪೂರ್ವಾನ್ವಯವಾಗುವಂತೆ ಅನುಮತಿ ನೀಡದಂತೆ ನಿರ್ಬಂಧ ವಿಧಿಸಿ ಈ ಹಿಂದೆ ನ್ಯಾಯಮೂರ್ತಿಗಳಾದ ಎ.ಎಸ್ ಓಕಾ, ಉಜ್ವಲ್ ಭುಯಾನ್ ಅವರ ಪೀಠವು ಆದೇಶ ಹೊರಡಿಸಿತ್ತು. ಮೇ 16ರಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹಾಗೂ ನ್ಯಾ. ಚಂದ್ರನ್ ಅವರ ಪೀಠವು ಈ ಆದೇಶವನ್ನು ಹಿಂಪಡೆದು, ವಿಚಾರವನ್ನು ಮರು ಪರಿಶೀಲನೆಗೆ ಒಳಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪರಿಸರ ಅನುಮತಿ ಪಡೆಯದೆ ಆರಂಭಿಸಿದ ಯೋಜನೆಗಳಿಗೆ ಘಟನೋತ್ತರದಲ್ಲಿ ಪೂರ್ವಾನ್ವಯ ಆಗುವಂತೆ ಅನುಮತಿ ನೀಡುವ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿರುವುದಾಗಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಶುಕ್ರವಾರ ಹೇಳಿದ್ದಾರೆ.</p>.<p>ಅರಾವಳಿ ಪರ್ವತ ಶ್ರೇಣಿಯ ಮರು ವ್ಯಾಖ್ಯಾನಕ್ಕೆ ಸಂಬಂಧಿಸಿದ ತನ್ನ ಆದೇಶವನ್ನು ಮರುಪರಿಶೀಲಿಸುವ ಸುಪ್ರೀಂ ಕೋರ್ಟ್ನ ನಿರ್ಧಾರದಿಂದ ಪ್ರೇರಿತರಾಗಿ ಈ ಅರ್ಜಿ ಸಲ್ಲಿಸಿರುವುದಾಗಿ ಜೈರಾಮ್ ರಮೇಶ್ ಹೇಳಿದ್ದಾರೆ.</p>.<p class="bodytext">‘ಪರಿಸರ ನಿಯಮ ಉಲ್ಲಂಘಿಸಿರುವ ಯೋಜನೆಗಳಿಗೆ ಘಟನೋತ್ತವಾಗಿ ದಂಡ ವಿಧಿಸಿ, ಪೂರ್ವಾನ್ವಯ ಅನುಮತಿ ನೀಡುವ ವ್ಯವಸ್ಥೆಯು ಕಾನೂನು ಬಾಹಿರ ಮಾತ್ರವಲ್ಲದೇ, ಪರಿಸರ ಆರೋಗ್ಯಕ್ಕೂ ಹಾನಿಕರವಾಗಿದೆ. ಜತೆಗೆ ಆಡಳಿತದ ನಿಯಮಗಳನ್ನು ನಿರ್ಲಕ್ಷ್ಯಿಸುವ ಪ್ರವೃತ್ತಿಗೆ ಒತ್ತು ನೀಡುತ್ತದೆ. ಹೀಗಾಗಿ ಅರ್ಜಿ ಸಲ್ಲಿಸಿದ್ದೇನೆ’ ಎಂದು ಅವರು ತಿಳಿಸಿದ್ದಾರೆ. </p>.<p>ಪರಿಸರ ಮಾನದಂಡಗಳನ್ನು ಉಲ್ಲಂಘಿಸಿರುವ ಯೋಜನೆಗೆ ಪೂರ್ವಾನ್ವಯವಾಗುವಂತೆ ಅನುಮತಿ ನೀಡದಂತೆ ನಿರ್ಬಂಧ ವಿಧಿಸಿ ಈ ಹಿಂದೆ ನ್ಯಾಯಮೂರ್ತಿಗಳಾದ ಎ.ಎಸ್ ಓಕಾ, ಉಜ್ವಲ್ ಭುಯಾನ್ ಅವರ ಪೀಠವು ಆದೇಶ ಹೊರಡಿಸಿತ್ತು. ಮೇ 16ರಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹಾಗೂ ನ್ಯಾ. ಚಂದ್ರನ್ ಅವರ ಪೀಠವು ಈ ಆದೇಶವನ್ನು ಹಿಂಪಡೆದು, ವಿಚಾರವನ್ನು ಮರು ಪರಿಶೀಲನೆಗೆ ಒಳಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>