<p><strong>ನವದೆಹಲಿ: </strong>ಮೇಘಾಲಯದಲ್ಲಿ ಕಾನ್ರಾಡ್ ಸಂಗ್ಮಾ ನೇತೃತ್ವದ ಸರ್ಕಾರ ಭ್ರಷ್ಟವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆನ್ನಲಾದ ಹೇಳಿಕೆ ಉಲ್ಲೇಖಿಸಿ, ಈ ಕುರಿತು ತನಿಖೆ ನಡೆಸಬೇಕು ಎಂದು ಕೋರಿ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ(ಸಂವಹನ) ಜೈರಾಮ್ ರಮೇಶ್ ಅವರು ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಪತ್ರದಲ್ಲಿ ಜೈರಾಮ್ ಅವರು,’ 2023 ಫೆಬ್ರವರಿ 17ರಂದು ಅಮಿತ್ ಶಾ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಮೇಘಾಲಯದಲ್ಲಿನ ಸರ್ಕಾರ ದೇಶದಲ್ಲೇ ಅತಿ ಭ್ರಷ್ಟ ಸರ್ಕಾರ’ ಎಂದಿದ್ದಾರೆ. ಈ ಹೇಳಿಕೆಯ ಸತ್ಯಾಸತ್ಯತೆ ಅರಿಯಲು ಶಾ ಅವರನ್ನು ವಿಚಾರಣೆಗೆ ಒಳಪಡಿಸಬೇಕು’ ಎಂದು ಕೋರಿದ್ದಾರೆ.</p>.<p>ಪತ್ರ ಬರೆದ ದಿನಾಂಕ ಮಾ.21 ಎಂದು ನಮೂದಿಸಿದ್ದು, ’ದೇಶದ ಗೃಹ ಸಚಿವರೂ ಆಗಿರುವ ಅಮಿತ್ ಶಾ ಅವರಿಗೆ ತಮ್ಮ ಹುದ್ದೆಯ ಅಧಿಕಾರ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ಕುರಿತು ಹೆಚ್ಚಿನ ಮಾಹಿತಿ ಗೊತ್ತಿರುತ್ತದೆ. ಹಾಗಾಗಿ ಶಾ ಅವರನ್ನು ವಿಚಾರಣೆಗೆ ಒಳಪಡಿಸಿದರೆ ಈ ಬಗ್ಗೆ ಖಂಡಿತಾ ತಿಳಿಯಬಹುದು’ ಎಂದು ಅವರು ಆಗ್ರಹಿಸಿದ್ದಾರೆ. </p>.<p>ಇತ್ತೀಚೆಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯ ಸಂದರ್ಭ ’ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯರ ಬಗ್ಗೆ ತಿಳಿದಿದೆ’ ಎಂಬ ಹೇಳಿಕೆ ಆಧರಿಸಿ ದೆಹಲಿ ಪೊಲೀಸರು ರಾಹುಲ್ ಅವರನ್ನು ವಿಚಾರಣೆ ನಡೆಸಿದ್ದರು. ಈ ಬೆಳವಣಿಗೆಯ ನಂತರ ಜೈರಾಮ್ ಅವರು ಶಾ ಹೇಳಿಕೆ ಉಲ್ಲೇಖಿಸಿ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮೇಘಾಲಯದಲ್ಲಿ ಕಾನ್ರಾಡ್ ಸಂಗ್ಮಾ ನೇತೃತ್ವದ ಸರ್ಕಾರ ಭ್ರಷ್ಟವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆನ್ನಲಾದ ಹೇಳಿಕೆ ಉಲ್ಲೇಖಿಸಿ, ಈ ಕುರಿತು ತನಿಖೆ ನಡೆಸಬೇಕು ಎಂದು ಕೋರಿ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ(ಸಂವಹನ) ಜೈರಾಮ್ ರಮೇಶ್ ಅವರು ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಪತ್ರದಲ್ಲಿ ಜೈರಾಮ್ ಅವರು,’ 2023 ಫೆಬ್ರವರಿ 17ರಂದು ಅಮಿತ್ ಶಾ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಮೇಘಾಲಯದಲ್ಲಿನ ಸರ್ಕಾರ ದೇಶದಲ್ಲೇ ಅತಿ ಭ್ರಷ್ಟ ಸರ್ಕಾರ’ ಎಂದಿದ್ದಾರೆ. ಈ ಹೇಳಿಕೆಯ ಸತ್ಯಾಸತ್ಯತೆ ಅರಿಯಲು ಶಾ ಅವರನ್ನು ವಿಚಾರಣೆಗೆ ಒಳಪಡಿಸಬೇಕು’ ಎಂದು ಕೋರಿದ್ದಾರೆ.</p>.<p>ಪತ್ರ ಬರೆದ ದಿನಾಂಕ ಮಾ.21 ಎಂದು ನಮೂದಿಸಿದ್ದು, ’ದೇಶದ ಗೃಹ ಸಚಿವರೂ ಆಗಿರುವ ಅಮಿತ್ ಶಾ ಅವರಿಗೆ ತಮ್ಮ ಹುದ್ದೆಯ ಅಧಿಕಾರ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ಕುರಿತು ಹೆಚ್ಚಿನ ಮಾಹಿತಿ ಗೊತ್ತಿರುತ್ತದೆ. ಹಾಗಾಗಿ ಶಾ ಅವರನ್ನು ವಿಚಾರಣೆಗೆ ಒಳಪಡಿಸಿದರೆ ಈ ಬಗ್ಗೆ ಖಂಡಿತಾ ತಿಳಿಯಬಹುದು’ ಎಂದು ಅವರು ಆಗ್ರಹಿಸಿದ್ದಾರೆ. </p>.<p>ಇತ್ತೀಚೆಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯ ಸಂದರ್ಭ ’ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯರ ಬಗ್ಗೆ ತಿಳಿದಿದೆ’ ಎಂಬ ಹೇಳಿಕೆ ಆಧರಿಸಿ ದೆಹಲಿ ಪೊಲೀಸರು ರಾಹುಲ್ ಅವರನ್ನು ವಿಚಾರಣೆ ನಡೆಸಿದ್ದರು. ಈ ಬೆಳವಣಿಗೆಯ ನಂತರ ಜೈರಾಮ್ ಅವರು ಶಾ ಹೇಳಿಕೆ ಉಲ್ಲೇಖಿಸಿ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>