<p><strong>ಅಬುಧಾಬಿ:</strong> ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮತ್ತು ಅರಬ್ ಸಂಯುಕ್ತ ಸಂಸ್ಥಾನದ (ಯುಎಇ) ವಿದೇಶಾಂಗ ಸಚಿವಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾನುವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದರು.</p>.<p>ಈ ವೇಳೆ ಉಭಯ ನಾಯಕರು, ದ್ವಿಪಕ್ಷೀಯ ಸಂಬಂಧ ಮತ್ತು ಕೋವಿಡ್ನಿಂದಾಗಿ ತತ್ತರಿಸಿರುವ ಆರ್ಥಿಕತೆಯ ಚೇತರಿಕೆಯ ಬಗ್ಗೆ ಚರ್ಚಿಸಿದರು.</p>.<p>‘ದ್ವಿಪಕ್ಷೀಯ ಸಹಕಾರದ ಕುರಿತಾಗಿ ಯುಎಇನ ವಿದೇಶಾಂಗ ಸಚಿವರೊಂದಿಗೆ ಚರ್ಚೆ ನಡೆಸಿದ್ದೇನೆ. ಕೋವಿಡ್ನಿಂದಾಗಿ ಆರ್ಥಿಕತೆಯು ತತ್ತರಿಸುತ್ತಿದೆ. ಹಾಗಾಗಿ ಆರ್ಥಿಕತೆಯ ಚೇತರಿಕೆಯೂ ಉಭಯ ರಾಷ್ಟ್ರಗಳ ಮೊದಲ ಆದ್ಯತೆಯಾಗಿದೆ’ ಎಂದು ಜೈ ಶಂಕರ್ ಟ್ವೀಟ್ ಮಾಡಿದ್ದಾರೆ. ಇದರೊಂದಿಗೆ ಸಭೆಯ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.</p>.<p>‘ಯುಎಇ–ಭಾರತ ನಡುವಿನ ಸಹಭಾಗಿತ್ವವು ವಾಣಿಜ್ಯ, ಆರ್ಥಿಕ, ಸಾಂಸ್ಕೃತಿಕ ಮತ್ತು ಇತರ ಕ್ಷೇತ್ರಗಳ ಬೆಳವಣಿಗೆಗೆ ಕೊಡುಗೆಯನ್ನು ನೀಡಲಿದೆ’ ಎಂದು ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಅಭಿಪ್ರಾಯಪಟ್ಟರು.</p>.<p>ಕಳೆದ ವರ್ಷ ನವೆಂಬರ್ 25–26ರಂದು ಜೈ ಶಂಕರ್ ಅವರು ಯುಎಇಗೆ ಪ್ರವಾಸ ಕೈಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಬುಧಾಬಿ:</strong> ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮತ್ತು ಅರಬ್ ಸಂಯುಕ್ತ ಸಂಸ್ಥಾನದ (ಯುಎಇ) ವಿದೇಶಾಂಗ ಸಚಿವಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾನುವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದರು.</p>.<p>ಈ ವೇಳೆ ಉಭಯ ನಾಯಕರು, ದ್ವಿಪಕ್ಷೀಯ ಸಂಬಂಧ ಮತ್ತು ಕೋವಿಡ್ನಿಂದಾಗಿ ತತ್ತರಿಸಿರುವ ಆರ್ಥಿಕತೆಯ ಚೇತರಿಕೆಯ ಬಗ್ಗೆ ಚರ್ಚಿಸಿದರು.</p>.<p>‘ದ್ವಿಪಕ್ಷೀಯ ಸಹಕಾರದ ಕುರಿತಾಗಿ ಯುಎಇನ ವಿದೇಶಾಂಗ ಸಚಿವರೊಂದಿಗೆ ಚರ್ಚೆ ನಡೆಸಿದ್ದೇನೆ. ಕೋವಿಡ್ನಿಂದಾಗಿ ಆರ್ಥಿಕತೆಯು ತತ್ತರಿಸುತ್ತಿದೆ. ಹಾಗಾಗಿ ಆರ್ಥಿಕತೆಯ ಚೇತರಿಕೆಯೂ ಉಭಯ ರಾಷ್ಟ್ರಗಳ ಮೊದಲ ಆದ್ಯತೆಯಾಗಿದೆ’ ಎಂದು ಜೈ ಶಂಕರ್ ಟ್ವೀಟ್ ಮಾಡಿದ್ದಾರೆ. ಇದರೊಂದಿಗೆ ಸಭೆಯ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.</p>.<p>‘ಯುಎಇ–ಭಾರತ ನಡುವಿನ ಸಹಭಾಗಿತ್ವವು ವಾಣಿಜ್ಯ, ಆರ್ಥಿಕ, ಸಾಂಸ್ಕೃತಿಕ ಮತ್ತು ಇತರ ಕ್ಷೇತ್ರಗಳ ಬೆಳವಣಿಗೆಗೆ ಕೊಡುಗೆಯನ್ನು ನೀಡಲಿದೆ’ ಎಂದು ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಅಭಿಪ್ರಾಯಪಟ್ಟರು.</p>.<p>ಕಳೆದ ವರ್ಷ ನವೆಂಬರ್ 25–26ರಂದು ಜೈ ಶಂಕರ್ ಅವರು ಯುಎಇಗೆ ಪ್ರವಾಸ ಕೈಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>