<p class="title"><strong>ಢಾಕಾ</strong>: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಗುರುವಾರ ಇಲ್ಲಿ ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ.ಅಬ್ದುಲ್ ಮೊಮೆನ್ ಜೊತೆಗೆ ದ್ವಿಪಕ್ಷೀಯ ಬಾಂಧವ್ಯ ವೃದ್ಧಿ ಕುರಿತು ಚರ್ಚಿಸಿದರು.</p>.<p class="title">‘ನೆರೆ ರಾಷ್ಟ್ರಗಳು ಮೊದಲು’ ಎಂಬ ಭಾರತದ ನೀತಿಗೆ ಅನುಗುಣವಾಗಿ ದಿನದ ಭೇಟಿಗೆ ಜೈಶಂಕರ್ಇಲ್ಲಿಗೆ ಬಂದಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಚ್ 26ರ ಬಾಂಗ್ಲಾದೇಶ ಭೇಟಿಗೆ ಪೂರ್ವಭಾವಿಯಾಗಿ ಅಗತ್ಯ ವೇದಿಕೆ ರೂಪಿಸುವುದು ಭೇಟಿ ಉದ್ದೇಶ.</p>.<p>ಕುರ್ಮಿಟೊಲಾ ವಾಯುನೆಲೆಯಲ್ಲಿ ಜೈಶಂಕರ್ ಅವರನ್ನು ಮೊಮೆನ್ ಬರಮಾಡಿಕೊಂಡರು. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾಗುವ ಸಂಭವವಿದೆ. ದ್ವಿಪಕ್ಷೀಯ ಬಾಂಧವ್ಯ ಕುರಿತು ವಿಸ್ತೃತವಾದ ಚರ್ಚೆ ನಡೆಯಿತು ಎಂದು ಭಾರತದ ರಾಯಭಾರ ಕಚೇರಿಯು ಟ್ವೀಟ್ ಮಾಡಿದೆ.</p>.<p>ಬಾಂಗ್ಲಾದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಎಂ.ಶರಿಯಾರ್ ಅಲಾಮ್ ಅವರು, ಬಾಂಗ್ಲಾದೇಶದ ವಿಮೋಚನಾ ದಿನದ 50ನೇ ವಾರ್ಷಿಕೋತ್ಸವ ನಿಮಿತ್ತ ಮಾರ್ಚ್ 17–26ರವರೆಗೆ ವಿವಿಧ ಕಾರ್ಯಕ್ರಮ ನಡೆಯಲಿವೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಢಾಕಾ</strong>: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಗುರುವಾರ ಇಲ್ಲಿ ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ.ಅಬ್ದುಲ್ ಮೊಮೆನ್ ಜೊತೆಗೆ ದ್ವಿಪಕ್ಷೀಯ ಬಾಂಧವ್ಯ ವೃದ್ಧಿ ಕುರಿತು ಚರ್ಚಿಸಿದರು.</p>.<p class="title">‘ನೆರೆ ರಾಷ್ಟ್ರಗಳು ಮೊದಲು’ ಎಂಬ ಭಾರತದ ನೀತಿಗೆ ಅನುಗುಣವಾಗಿ ದಿನದ ಭೇಟಿಗೆ ಜೈಶಂಕರ್ಇಲ್ಲಿಗೆ ಬಂದಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಚ್ 26ರ ಬಾಂಗ್ಲಾದೇಶ ಭೇಟಿಗೆ ಪೂರ್ವಭಾವಿಯಾಗಿ ಅಗತ್ಯ ವೇದಿಕೆ ರೂಪಿಸುವುದು ಭೇಟಿ ಉದ್ದೇಶ.</p>.<p>ಕುರ್ಮಿಟೊಲಾ ವಾಯುನೆಲೆಯಲ್ಲಿ ಜೈಶಂಕರ್ ಅವರನ್ನು ಮೊಮೆನ್ ಬರಮಾಡಿಕೊಂಡರು. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾಗುವ ಸಂಭವವಿದೆ. ದ್ವಿಪಕ್ಷೀಯ ಬಾಂಧವ್ಯ ಕುರಿತು ವಿಸ್ತೃತವಾದ ಚರ್ಚೆ ನಡೆಯಿತು ಎಂದು ಭಾರತದ ರಾಯಭಾರ ಕಚೇರಿಯು ಟ್ವೀಟ್ ಮಾಡಿದೆ.</p>.<p>ಬಾಂಗ್ಲಾದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಎಂ.ಶರಿಯಾರ್ ಅಲಾಮ್ ಅವರು, ಬಾಂಗ್ಲಾದೇಶದ ವಿಮೋಚನಾ ದಿನದ 50ನೇ ವಾರ್ಷಿಕೋತ್ಸವ ನಿಮಿತ್ತ ಮಾರ್ಚ್ 17–26ರವರೆಗೆ ವಿವಿಧ ಕಾರ್ಯಕ್ರಮ ನಡೆಯಲಿವೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>