<p><strong>ನವದೆಹಲಿ:</strong> ಕೊರೊನೋತ್ತರ ಕಾಲದಲ್ಲಿ ದೇಶದ ವಿವಿಧ ಕ್ಷೇತ್ರಗಳಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಬೇಕಾದ ಸಾಮರ್ಥ್ಯ ವೃದ್ಧಿಗೆ ಸಹಕರಿಸುವಂತೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ವಿಶ್ವದ ವಿವಿಧ ಭಾಗದಲ್ಲಿರುವ ಭಾರತೀಯರಿಗೆ ಕರೆ ನೀಡಿದರು.</p>.<p>‘ಪ್ರವಾಸಿ ಭಾರತೀಯ ದಿವಸ್‘ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೊರೊನಾ ಸಾಂಕ್ರಾಮಿಕದಿಂದಾಗಿ ಹಲವು ಕಡೆಗಳಲ್ಲಿ ಅನಿಶ್ಚತತೆ ವಾತಾವರಣ ಸೃಷ್ಟಿಯಾಗಿದೆ. ಇದು ಜಾಗತಿಕವಾಗಿ ಹಂಚಿ ಹೋಗಿರುವ ನಮ್ಮ ದೇಶದ ನಾಗರಿಕರೊಂದಿಗೆ ಪರಸ್ಪರ ಸಂಪರ್ಕ ಬೆಳೆಸುವ ಅನಿವಾರ್ಯತೆ ಸೃಷ್ಟಿಸಿದೆ‘ ಎಂದು ಹೇಳಿದರು.</p>.<p>ಆತ್ಮನಿರ್ಭರ ಭಾರತ‘ದ ಮೂಲಕ ಕೊರೊನೋತ್ತರ ಕಾಲದ ಸವಾಲುಗಳನ್ನು ಎದುರಿಸಲು ಭಾರತ ಸಜ್ಜಾಗಿದೆ ಎಂದು ಹೇಳಿದ ಜೈಶಂಕರ್, ಈ ಮೂಲಕ ಎಲ್ಲ ಕ್ಷೇತ್ರಗಳಲ್ಲೂ ‘ಸಾಮರ್ಥ್ಯ‘ ಹೆಚ್ಚಿಸಿಕೊಳ್ಳುವ ಪ್ರಯತ್ನದಲ್ಲಿ ದ್ದೇವೆ. ಜತೆಗೆ ಜಾಗತಿಕವಾಗಿ ಕೊಡುಗೆ ನೀಡಲು ಮುಂದಾಗಿದ್ದೇವೆ. ವಿಶ್ವದ ಬೇರೆ ಬೇರೆ ಭಾಗಕ್ಕೆ ವಲಸೆ ಹೋಗಿರುವ ನಮ್ಮ ಭಾರತೀಯರನ್ನು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವಂತೆ ಆಹ್ವಾನಿಸುತ್ತಿದ್ದೇವೆ‘ ಎಂದರು.</p>.<p>‘ವಿಶ್ವದ ಬೇರೆ ಬೇರೆ ಭಾಗಗಳಲ್ಲಿ ನೆೆಲೆಸಿರುವ ಭಾರತೀಯರು, ನಮ್ಮ ದೇಶದೊಂದಿಗೆ ಭಾವನಾತ್ಮಕ ಬಾಂಧವ್ಯ ಹೊಂದಿದ್ದಾರೆ. ಈ ಅಂಶಗಳು ಭಾರತದ ಸಾಮರ್ಥ್ಯವನ್ನು ಹೆಚ್ಚಿಸಲು ಪ್ರೋತ್ಸಾಹಿಸುತ್ತವೆ‘ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೊರೊನೋತ್ತರ ಕಾಲದಲ್ಲಿ ದೇಶದ ವಿವಿಧ ಕ್ಷೇತ್ರಗಳಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಬೇಕಾದ ಸಾಮರ್ಥ್ಯ ವೃದ್ಧಿಗೆ ಸಹಕರಿಸುವಂತೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ವಿಶ್ವದ ವಿವಿಧ ಭಾಗದಲ್ಲಿರುವ ಭಾರತೀಯರಿಗೆ ಕರೆ ನೀಡಿದರು.</p>.<p>‘ಪ್ರವಾಸಿ ಭಾರತೀಯ ದಿವಸ್‘ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೊರೊನಾ ಸಾಂಕ್ರಾಮಿಕದಿಂದಾಗಿ ಹಲವು ಕಡೆಗಳಲ್ಲಿ ಅನಿಶ್ಚತತೆ ವಾತಾವರಣ ಸೃಷ್ಟಿಯಾಗಿದೆ. ಇದು ಜಾಗತಿಕವಾಗಿ ಹಂಚಿ ಹೋಗಿರುವ ನಮ್ಮ ದೇಶದ ನಾಗರಿಕರೊಂದಿಗೆ ಪರಸ್ಪರ ಸಂಪರ್ಕ ಬೆಳೆಸುವ ಅನಿವಾರ್ಯತೆ ಸೃಷ್ಟಿಸಿದೆ‘ ಎಂದು ಹೇಳಿದರು.</p>.<p>ಆತ್ಮನಿರ್ಭರ ಭಾರತ‘ದ ಮೂಲಕ ಕೊರೊನೋತ್ತರ ಕಾಲದ ಸವಾಲುಗಳನ್ನು ಎದುರಿಸಲು ಭಾರತ ಸಜ್ಜಾಗಿದೆ ಎಂದು ಹೇಳಿದ ಜೈಶಂಕರ್, ಈ ಮೂಲಕ ಎಲ್ಲ ಕ್ಷೇತ್ರಗಳಲ್ಲೂ ‘ಸಾಮರ್ಥ್ಯ‘ ಹೆಚ್ಚಿಸಿಕೊಳ್ಳುವ ಪ್ರಯತ್ನದಲ್ಲಿ ದ್ದೇವೆ. ಜತೆಗೆ ಜಾಗತಿಕವಾಗಿ ಕೊಡುಗೆ ನೀಡಲು ಮುಂದಾಗಿದ್ದೇವೆ. ವಿಶ್ವದ ಬೇರೆ ಬೇರೆ ಭಾಗಕ್ಕೆ ವಲಸೆ ಹೋಗಿರುವ ನಮ್ಮ ಭಾರತೀಯರನ್ನು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವಂತೆ ಆಹ್ವಾನಿಸುತ್ತಿದ್ದೇವೆ‘ ಎಂದರು.</p>.<p>‘ವಿಶ್ವದ ಬೇರೆ ಬೇರೆ ಭಾಗಗಳಲ್ಲಿ ನೆೆಲೆಸಿರುವ ಭಾರತೀಯರು, ನಮ್ಮ ದೇಶದೊಂದಿಗೆ ಭಾವನಾತ್ಮಕ ಬಾಂಧವ್ಯ ಹೊಂದಿದ್ದಾರೆ. ಈ ಅಂಶಗಳು ಭಾರತದ ಸಾಮರ್ಥ್ಯವನ್ನು ಹೆಚ್ಚಿಸಲು ಪ್ರೋತ್ಸಾಹಿಸುತ್ತವೆ‘ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>