<p><strong>ರಾಯಪುರ</strong>: ಭಾರತವು ದೇಶೀಯ ಮತ್ತು ಬಾಹ್ಯ ಸವಾಲುಗಳ್ನು ಯಶಸ್ವಿಯಾಗಿ ಎದುರಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಶನಿವಾರ ಹೇಳಿದರು.</p>.<p>ರಾಯಪುರ ಐಐಎಂನಲ್ಲಿ ನಡೆದ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ‘ದೇಶದ ಸಾಮರ್ಥ್ಯವನ್ನು ಪರೀಕ್ಷೆಗೊಡ್ಡಿದ್ದ ಜಾಗತಿಕ ಸವಾಲನ್ನು ಭಾರತ ಸಮರ್ಥವಾಗಿ ಎದುರಿಸುತ್ತಿದೆ. ಮುಖ್ಯವಾಹಿನಿಯಿಂದ ದೂರವಿರುವ ಸಮಾಜದ ಮೇಲೂ ಪಶ್ಚಿಮ ಏಷ್ಯಾ ಯುದ್ಧವು ಗಂಭೀರವಾದ ಪರಿಣಾಮವನ್ನು ಬೀರುತ್ತಿದೆ. ಇದು ಜಾಗತೀಕರಣವು ವ್ಯಾಪಿಸಿರುವುದಕ್ಕೆ ಸಾಕ್ಷಿಯಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಕೋವಿಡ್ ಸಾಂಕ್ರಾಮಿಕ, ಸಂಘರ್ಷ ಮತ್ತು ಹವಾಮಾನ ಬದಲಾವಣೆ– ಈ ದಶಕದಲ್ಲಿ ಎದುರಿಸುತ್ತಿರುವ ಮೂರು ಪ್ರಮುಖ ಸವಾಲುಗಳಾಗಿವೆ ಎಂದು ಹೇಳಿದರು.</p>.<p>ಇಂಥ ಸವಾಲುಗಳನ್ನು ಎದುರಿಸಲು ದೇಶದ ಸಾಮರ್ಥ್ಯವನ್ನು ಹೆಚ್ಚಿಸುವುದೊಂದೇ ದಾರಿ ಎಂದು ಅವರು ಪ್ರತಿಪಾದಿಸಿದರು.</p>.<p>ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ, ಪ್ರಾತಿನಿಧಿಕ ರಾಜಕೀಯ ಮತ್ತು ನಿರ್ಣಾಯಕ ನಾಯಕತ್ವವು ದೇಶಕ್ಕೆ ನೂತನ ಅಡಿಪಾಯವನ್ನು ನೀಡಿದೆ ಎಂದು ಹೇಳಿದರು.</p>.<p>ಅಮೆರಿಕ ಮತ್ತು ಇಸ್ರೇಲ್ ಕಳೆದ ಫೆಬ್ರುವರಿಯಲ್ಲಿ ಇರಾನ್ ಮೇಲೆ ಯುದ್ಧ ಸಾರಿದ ಬಳಿಕ ಕಚ್ಚಾತೈಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ಜಾಗತಿಕವಾಗಿ ಪರಿಣಾಮ ಬೀರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ</strong>: ಭಾರತವು ದೇಶೀಯ ಮತ್ತು ಬಾಹ್ಯ ಸವಾಲುಗಳ್ನು ಯಶಸ್ವಿಯಾಗಿ ಎದುರಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಶನಿವಾರ ಹೇಳಿದರು.</p>.<p>ರಾಯಪುರ ಐಐಎಂನಲ್ಲಿ ನಡೆದ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ‘ದೇಶದ ಸಾಮರ್ಥ್ಯವನ್ನು ಪರೀಕ್ಷೆಗೊಡ್ಡಿದ್ದ ಜಾಗತಿಕ ಸವಾಲನ್ನು ಭಾರತ ಸಮರ್ಥವಾಗಿ ಎದುರಿಸುತ್ತಿದೆ. ಮುಖ್ಯವಾಹಿನಿಯಿಂದ ದೂರವಿರುವ ಸಮಾಜದ ಮೇಲೂ ಪಶ್ಚಿಮ ಏಷ್ಯಾ ಯುದ್ಧವು ಗಂಭೀರವಾದ ಪರಿಣಾಮವನ್ನು ಬೀರುತ್ತಿದೆ. ಇದು ಜಾಗತೀಕರಣವು ವ್ಯಾಪಿಸಿರುವುದಕ್ಕೆ ಸಾಕ್ಷಿಯಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಕೋವಿಡ್ ಸಾಂಕ್ರಾಮಿಕ, ಸಂಘರ್ಷ ಮತ್ತು ಹವಾಮಾನ ಬದಲಾವಣೆ– ಈ ದಶಕದಲ್ಲಿ ಎದುರಿಸುತ್ತಿರುವ ಮೂರು ಪ್ರಮುಖ ಸವಾಲುಗಳಾಗಿವೆ ಎಂದು ಹೇಳಿದರು.</p>.<p>ಇಂಥ ಸವಾಲುಗಳನ್ನು ಎದುರಿಸಲು ದೇಶದ ಸಾಮರ್ಥ್ಯವನ್ನು ಹೆಚ್ಚಿಸುವುದೊಂದೇ ದಾರಿ ಎಂದು ಅವರು ಪ್ರತಿಪಾದಿಸಿದರು.</p>.<p>ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ, ಪ್ರಾತಿನಿಧಿಕ ರಾಜಕೀಯ ಮತ್ತು ನಿರ್ಣಾಯಕ ನಾಯಕತ್ವವು ದೇಶಕ್ಕೆ ನೂತನ ಅಡಿಪಾಯವನ್ನು ನೀಡಿದೆ ಎಂದು ಹೇಳಿದರು.</p>.<p>ಅಮೆರಿಕ ಮತ್ತು ಇಸ್ರೇಲ್ ಕಳೆದ ಫೆಬ್ರುವರಿಯಲ್ಲಿ ಇರಾನ್ ಮೇಲೆ ಯುದ್ಧ ಸಾರಿದ ಬಳಿಕ ಕಚ್ಚಾತೈಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ಜಾಗತಿಕವಾಗಿ ಪರಿಣಾಮ ಬೀರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>