<p><strong>ನವದೆಹಲಿ</strong>: ಭಯೋತ್ಪಾದನೆ ಬಗ್ಗೆ ‘ಶೂನ್ಯ ಸಹಿಷ್ಣುತೆ’ ಪಾಲಿಸಬೇಕು ಮತ್ತು ಭಾರತದ ನೆರೆಯ ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳ ಮೂಲಸೌಕರ್ಯದ ಉತ್ತೇಜನಕ್ಕೆ ಸಹಾಯ ಮಾಡಬಾರದು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪೋಲೆಂಡ್ ವಿದೇಶಾಂಗ ಸಚಿವ ರಾಡೋಸ್ಲಾವ್ ಸಿರ್ಕೋರ್ಸ್ಕಿಗೆ ಸೋಮವಾರ ಹೇಳಿದ್ದಾರೆ.</p>.<p>ಪೋಲೆಂಡ್–ಪಾಕಿಸ್ತಾನ ಅಕ್ಟೋಬರ್ನಲ್ಲಿ ನೀಡಿದ್ದ ಜಂಟಿ ಹೇಳಿಕೆಯಲ್ಲಿ ಕಾಶ್ಮೀರದ ಬಗ್ಗೆ ಉಲ್ಲೇಖಸಿದ್ದಕ್ಕೆ ಸಂಬಂಧಿಸಿ ಅವರು ಈ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ.</p>.<p>ಅಲ್ಲದೆ, ಉಕ್ರೇನ್ ಸಂಘರ್ಷದ ವಿಷಯದಲ್ಲಿ ಭಾರತವನ್ನು ಗುರಿಯಾಗಿಸುತ್ತಿರುವ ಬಗ್ಗೆಯೂ ಜೈಶಂಕರ್ ಅವರು ಪೋಲೆಂಡ್ನ ಉಪ ಪ್ರಧಾನಿಯೂ ಆಗಿರುವ ಸಕೋರ್ಸ್ಕಿ ಅವರೊಂದಿಗೆ ನಡೆದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೈಶಂಕರ್ ಅವರ ಈ ಅಭಿಪ್ರಾಯವನ್ನು ಸಂಪೂರ್ಣವಾಗಿ ಒಪ್ಪುತ್ತೇನೆ ಎಂದು ಸಿಕೋರ್ಸ್ಕಿ ಹೇಳಿದ್ದಾರೆ.</p>.<p>ಸಿಕೋರ್ಸ್ಕಿ ಮೂರು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ಐರೋಪ್ಯ ಒಕ್ಕೂಟದ ಉನ್ನತ ನಾಯಕರು ಭಾರತಕ್ಕೆ ಭೇಟಿ ನೀಡುವ 10 ದಿನಗಳ ಮೊದಲು ಅವರು ಈ ಪ್ರವಾಸ ಕೈಗೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಯೋತ್ಪಾದನೆ ಬಗ್ಗೆ ‘ಶೂನ್ಯ ಸಹಿಷ್ಣುತೆ’ ಪಾಲಿಸಬೇಕು ಮತ್ತು ಭಾರತದ ನೆರೆಯ ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳ ಮೂಲಸೌಕರ್ಯದ ಉತ್ತೇಜನಕ್ಕೆ ಸಹಾಯ ಮಾಡಬಾರದು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪೋಲೆಂಡ್ ವಿದೇಶಾಂಗ ಸಚಿವ ರಾಡೋಸ್ಲಾವ್ ಸಿರ್ಕೋರ್ಸ್ಕಿಗೆ ಸೋಮವಾರ ಹೇಳಿದ್ದಾರೆ.</p>.<p>ಪೋಲೆಂಡ್–ಪಾಕಿಸ್ತಾನ ಅಕ್ಟೋಬರ್ನಲ್ಲಿ ನೀಡಿದ್ದ ಜಂಟಿ ಹೇಳಿಕೆಯಲ್ಲಿ ಕಾಶ್ಮೀರದ ಬಗ್ಗೆ ಉಲ್ಲೇಖಸಿದ್ದಕ್ಕೆ ಸಂಬಂಧಿಸಿ ಅವರು ಈ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ.</p>.<p>ಅಲ್ಲದೆ, ಉಕ್ರೇನ್ ಸಂಘರ್ಷದ ವಿಷಯದಲ್ಲಿ ಭಾರತವನ್ನು ಗುರಿಯಾಗಿಸುತ್ತಿರುವ ಬಗ್ಗೆಯೂ ಜೈಶಂಕರ್ ಅವರು ಪೋಲೆಂಡ್ನ ಉಪ ಪ್ರಧಾನಿಯೂ ಆಗಿರುವ ಸಕೋರ್ಸ್ಕಿ ಅವರೊಂದಿಗೆ ನಡೆದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೈಶಂಕರ್ ಅವರ ಈ ಅಭಿಪ್ರಾಯವನ್ನು ಸಂಪೂರ್ಣವಾಗಿ ಒಪ್ಪುತ್ತೇನೆ ಎಂದು ಸಿಕೋರ್ಸ್ಕಿ ಹೇಳಿದ್ದಾರೆ.</p>.<p>ಸಿಕೋರ್ಸ್ಕಿ ಮೂರು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ಐರೋಪ್ಯ ಒಕ್ಕೂಟದ ಉನ್ನತ ನಾಯಕರು ಭಾರತಕ್ಕೆ ಭೇಟಿ ನೀಡುವ 10 ದಿನಗಳ ಮೊದಲು ಅವರು ಈ ಪ್ರವಾಸ ಕೈಗೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>