<p><strong>ಚೆನ್ನೈ:</strong> ತಮಿಳುನಾಡಿನಲ್ಲಿ ಕಾಣುಂ ಪೊಂಗಲ್ ದಿನ ನಡೆದ ಜಲ್ಲಿಕಟ್ಟು, ಮಂಜುವಿರಾಟ್ಟು ಸ್ಪರ್ಧೆಗಳಲ್ಲಿ ಏಳು ಜನರು ಸಾವಿಗೀಡಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.<p>ಮೃತರಲ್ಲಿ ಬಹುತೇಕರು ಪ್ರೇಕ್ಷಕರು ಮತ್ತು ಗೂಳಿಗಳ ಮಾಲೀಕರು. ಪ್ರತ್ಯೇಕ ಘಟನೆಗಳಲ್ಲಿ ಎರಡು ಗೂಳಿಗಳೂ ಮೃತಪಟ್ಟಿವೆ. ಪುದುಕ್ಕೊಟ್ಟೈನಲ್ಲಿ ನಡೆದ ಸ್ಪರ್ಧೆ ವೇಳೆ ಒಂದು ಗೂಳಿ ಸತ್ತರೆ, ಶಿವಗಂಗೆಯ ಸಿರವಯಲ್ ಮಂಜುವಿರಟ್ಟುವಿನಲ್ಲಿ ಗೂಳಿ ಮತ್ತು ಅದರ ಮಾಲೀಕ ಸತ್ತಿದ್ದಾರೆ.</p>.<p>ಶಿವಗಂಗಾ ಜಿಲ್ಲೆಯ ಸಿರವಯಲ್ನಲ್ಲಿನ ಮಂಜುವಿರಟ್ಟು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ನಡುವಿಕೊಟ್ಟೈ ಕೀಲ ಆವಂಧಿಪಟ್ಟಿ ಗ್ರಾಮದ ಥನೀಶ್ರಾಜ ಎಂಬವರು ಗೂಳಿ ತಂದಿದ್ದರು. ಅದು ಕಣದಿಂದ ಓಡಿಹೋಗಿ ಹತ್ತಿರದಲ್ಲಿನ ಕೃಷಿ ಬಾವಿಗೆ ಬಿದ್ದಿತು. ಆ ಗೂಳಿಯನ್ನು ಹಿಡಿಯಲು ಯತ್ನಿಸಿದ ಅದರ ಮಾಲೀಕ ಥನೀಶ್ರಾಜ ಕೂಡ ಬಾವಿಗೆ ಬಿದ್ದು, ಗೂಳಿ ಸಹಿತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. </p>.<p>ಗೂಳಿ ಪಳಗಿಸುವ ಮಂಜುವಿರಟ್ಟು ಸ್ಪರ್ಧೆಯಲ್ಲಿ 250 ಗೂಳಿಗಳು ಮತ್ತು 150 ಮಂದಿ ಗೂಳಿ ಪಳಗಿಸುವವರು ಭಾಗವಹಿಸಿದ್ದರು. ಇದರಲ್ಲಿ 130 ಮಂದಿ ಗಾಯಗೊಂಡಿದ್ದಾರೆ. ದೇವಕೋಟೆಯ ಪ್ರೇಕ್ಷಕ ಸುಬ್ಬಯ್ಯ ಎಂಬಾತನನ್ನು ಗೂಳಿ ತುಳಿದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆ ವ್ಯಕ್ತಿ ಮೃತಪಟ್ಟಿದ್ದಾರೆ.</p>.<p>ಮಧುರೈನ ಅಲಂಗನಲ್ಲೂರಿನಲ್ಲಿ ನಡೆದ ಸ್ಪರ್ಧೆ ವೇಳೆ ಕೆರಳಿದ ಗೂಳಿಯೊಂದು ಮೆಟ್ಟುಪಟ್ಟಿ ಗ್ರಾಮದ 55 ವರ್ಷದ ಪ್ರೇಕ್ಷಕ ಪಿ. ಪೆರಿಯಸಾಮಿ ಎಂಬವರ ಕುತ್ತಿಗೆಗೆ ಕೊಂಬಿನಿಂದ ಇರಿದಿದೆ. ಆ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಪರ್ಧೆ ವೇಳೆ ಸುಮಾರು 70 ಜನರು ಗಾಯಗೊಂಡಿದ್ದು, ಇವರಲ್ಲಿ ಬಹುತೇಕರು ಪ್ರೇಕ್ಷಕರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ತಿರುಚಿರಾಪಳ್ಳಿ, ಕರೂರ್ ಮತ್ತು ಪುದುಕೊಟ್ಟೈ ಜಿಲ್ಲೆಗಳಲ್ಲಿ ನಡೆದ ನಾಲ್ಕು ಪ್ರತ್ಯೇಕ ಜಲ್ಲಿಕಟ್ಟು ಸ್ಪರ್ಧೆಗಳಲ್ಲಿ ಇಬ್ಬರು ಪ್ರೇಕ್ಷಕರು ಮೃತಪಟ್ಟಿದ್ದಾರೆ. ಗೂಳಿ ಮಾಲೀಕರು ಮತ್ತು ಗೂಳಿ ಪಳಗಿಸುವವರು ಸೇರಿದಂತೆ 148 ಜನರು ಗಾಯಗೊಂಡಿದ್ದಾರೆ.</p>.<p>ಕೃಷ್ಣಗಿರಿ ಜಿಲ್ಲೆಯ ಬಸ್ತಲಪಲ್ಲಿಯಲ್ಲಿ ನಡೆದ ‘ಎರುತ್ತು ವಿದುಂ ವಿಳಾ’ ಸ್ಪರ್ಧೆಯಲ್ಲಿ 30 ವರ್ಷದ ವ್ಯಕ್ತಿ ಮತ್ತು ಸೇಲಂ ಜಿಲ್ಲೆಯ ಸೆಂತಾರಪಟ್ಟಿಯಲ್ಲಿ ಗೂಳಿ ದಾಳಿಗೆ 45 ವರ್ಷದ ವ್ಯಕ್ತಿ ಸತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡಿನಲ್ಲಿ ಕಾಣುಂ ಪೊಂಗಲ್ ದಿನ ನಡೆದ ಜಲ್ಲಿಕಟ್ಟು, ಮಂಜುವಿರಾಟ್ಟು ಸ್ಪರ್ಧೆಗಳಲ್ಲಿ ಏಳು ಜನರು ಸಾವಿಗೀಡಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.<p>ಮೃತರಲ್ಲಿ ಬಹುತೇಕರು ಪ್ರೇಕ್ಷಕರು ಮತ್ತು ಗೂಳಿಗಳ ಮಾಲೀಕರು. ಪ್ರತ್ಯೇಕ ಘಟನೆಗಳಲ್ಲಿ ಎರಡು ಗೂಳಿಗಳೂ ಮೃತಪಟ್ಟಿವೆ. ಪುದುಕ್ಕೊಟ್ಟೈನಲ್ಲಿ ನಡೆದ ಸ್ಪರ್ಧೆ ವೇಳೆ ಒಂದು ಗೂಳಿ ಸತ್ತರೆ, ಶಿವಗಂಗೆಯ ಸಿರವಯಲ್ ಮಂಜುವಿರಟ್ಟುವಿನಲ್ಲಿ ಗೂಳಿ ಮತ್ತು ಅದರ ಮಾಲೀಕ ಸತ್ತಿದ್ದಾರೆ.</p>.<p>ಶಿವಗಂಗಾ ಜಿಲ್ಲೆಯ ಸಿರವಯಲ್ನಲ್ಲಿನ ಮಂಜುವಿರಟ್ಟು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ನಡುವಿಕೊಟ್ಟೈ ಕೀಲ ಆವಂಧಿಪಟ್ಟಿ ಗ್ರಾಮದ ಥನೀಶ್ರಾಜ ಎಂಬವರು ಗೂಳಿ ತಂದಿದ್ದರು. ಅದು ಕಣದಿಂದ ಓಡಿಹೋಗಿ ಹತ್ತಿರದಲ್ಲಿನ ಕೃಷಿ ಬಾವಿಗೆ ಬಿದ್ದಿತು. ಆ ಗೂಳಿಯನ್ನು ಹಿಡಿಯಲು ಯತ್ನಿಸಿದ ಅದರ ಮಾಲೀಕ ಥನೀಶ್ರಾಜ ಕೂಡ ಬಾವಿಗೆ ಬಿದ್ದು, ಗೂಳಿ ಸಹಿತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. </p>.<p>ಗೂಳಿ ಪಳಗಿಸುವ ಮಂಜುವಿರಟ್ಟು ಸ್ಪರ್ಧೆಯಲ್ಲಿ 250 ಗೂಳಿಗಳು ಮತ್ತು 150 ಮಂದಿ ಗೂಳಿ ಪಳಗಿಸುವವರು ಭಾಗವಹಿಸಿದ್ದರು. ಇದರಲ್ಲಿ 130 ಮಂದಿ ಗಾಯಗೊಂಡಿದ್ದಾರೆ. ದೇವಕೋಟೆಯ ಪ್ರೇಕ್ಷಕ ಸುಬ್ಬಯ್ಯ ಎಂಬಾತನನ್ನು ಗೂಳಿ ತುಳಿದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆ ವ್ಯಕ್ತಿ ಮೃತಪಟ್ಟಿದ್ದಾರೆ.</p>.<p>ಮಧುರೈನ ಅಲಂಗನಲ್ಲೂರಿನಲ್ಲಿ ನಡೆದ ಸ್ಪರ್ಧೆ ವೇಳೆ ಕೆರಳಿದ ಗೂಳಿಯೊಂದು ಮೆಟ್ಟುಪಟ್ಟಿ ಗ್ರಾಮದ 55 ವರ್ಷದ ಪ್ರೇಕ್ಷಕ ಪಿ. ಪೆರಿಯಸಾಮಿ ಎಂಬವರ ಕುತ್ತಿಗೆಗೆ ಕೊಂಬಿನಿಂದ ಇರಿದಿದೆ. ಆ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಪರ್ಧೆ ವೇಳೆ ಸುಮಾರು 70 ಜನರು ಗಾಯಗೊಂಡಿದ್ದು, ಇವರಲ್ಲಿ ಬಹುತೇಕರು ಪ್ರೇಕ್ಷಕರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ತಿರುಚಿರಾಪಳ್ಳಿ, ಕರೂರ್ ಮತ್ತು ಪುದುಕೊಟ್ಟೈ ಜಿಲ್ಲೆಗಳಲ್ಲಿ ನಡೆದ ನಾಲ್ಕು ಪ್ರತ್ಯೇಕ ಜಲ್ಲಿಕಟ್ಟು ಸ್ಪರ್ಧೆಗಳಲ್ಲಿ ಇಬ್ಬರು ಪ್ರೇಕ್ಷಕರು ಮೃತಪಟ್ಟಿದ್ದಾರೆ. ಗೂಳಿ ಮಾಲೀಕರು ಮತ್ತು ಗೂಳಿ ಪಳಗಿಸುವವರು ಸೇರಿದಂತೆ 148 ಜನರು ಗಾಯಗೊಂಡಿದ್ದಾರೆ.</p>.<p>ಕೃಷ್ಣಗಿರಿ ಜಿಲ್ಲೆಯ ಬಸ್ತಲಪಲ್ಲಿಯಲ್ಲಿ ನಡೆದ ‘ಎರುತ್ತು ವಿದುಂ ವಿಳಾ’ ಸ್ಪರ್ಧೆಯಲ್ಲಿ 30 ವರ್ಷದ ವ್ಯಕ್ತಿ ಮತ್ತು ಸೇಲಂ ಜಿಲ್ಲೆಯ ಸೆಂತಾರಪಟ್ಟಿಯಲ್ಲಿ ಗೂಳಿ ದಾಳಿಗೆ 45 ವರ್ಷದ ವ್ಯಕ್ತಿ ಸತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>