<p><strong>ಜಲ್ನಾ:</strong> ಇಲ್ಲಿನ ಮಹಾರಾಷ್ಟ್ರ ಸರ್ಕಾರ ನಡೆಸುತ್ತಿರುವ ಕೋವಿಡ್ 19 ಆಸ್ಪತ್ರೆಯ ಆವರಣದಲ್ಲಿ ‘ದ್ರವರೂಪಿ ಆಮ್ಲಜನಕ’ (ಲಿಕ್ವಿಡ್ ಆಕ್ಸಿಜನ್) ತಯಾರಿಕಾ ಘಟಕವನ್ನು ನಿರ್ಮಿಸಲಾಗಿದೆ.ಇದರಿಂದ ಕೊರೊನಾ ಸೋಂಕಿನಿಂದ ಮೃತಪಡುವವರ ಪ್ರಮಾಣ ಇಳಿಕೆಯಾಗಿದೆ ಎಂದು ಹಿರಿಯ ವೈದ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಸಚಿವ ರಾಜೇಶ್ ತೋಪೆ ಆ ಘಟಕವನ್ನು ಉದ್ಘಾಟಿಸಿದ್ದಾರೆ. ಈ ಘಟಕದಲ್ಲಿ ನಿತ್ಯ ಲಿಕ್ವಿಡ್ ಆಕ್ಸಿಜನ್ ತಯಾರಿಸಿ, ಟ್ಯಾಂಕ್ಗಳಲ್ಲಿ ತುಂಬಿಸಿಡಲಾಗುತ್ತದೆ.</p>.<p>ಈ ಘಟಕದಿಂದ ಆಸ್ಪತ್ರೆಯಲ್ಲಿರುವ ನೂರು ರೋಗಿಗಳಿಗೆ ಏಕಕಾಲಕ್ಕೆ ಆಕ್ಸಿಜನ್ ಪೂರೈಕೆ ಮಾಡಬಹುದಾಗಿದೆ ಎಂದು ಆಸ್ಪತ್ರೆಯ ಸರ್ಜನ್ ಅರ್ಚನಾ ಭೋಸ್ಲೆ ಹೇಳಿದರು.</p>.<p>ಕೋವಿಡ್ 19 ರೋಗಿಗಳಿಗೆ ಆರೈಕೆ ಮಾಡುವಲ್ಲಿ ಆಕ್ಸಿಜನ್ ಚಿಕಿತ್ಸೆ ಬಹಳ ಪ್ರಮುಖವಾಗಿದೆ. ಈ ಘಟಕ ಆರಂಭಕ್ಕ ಮುನ್ನ ಜಿಲ್ಲೆಯಲ್ಲಿ ಕೋವಿಡ್19 ಸೋಂಕಿನಿಂದ ಸಾಯುವವರ ಶೇ 4.5ರಷ್ಟು ಇತ್ತು. ಈಗ ಅದು ಶೇ 2.8ಕ್ಕೆ ಇಳಿದಿದೆ. ಅಷ್ಟೇ ಅಲ್ಲ, ಕೊರೊನಾ ಸೋಂಕಿನಿಂದ ಗುಣಮುಖರಾಗುವವರ ಪ್ರಮಾಣ ಶೇ 71ರಷ್ಟಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಲ್ನಾ:</strong> ಇಲ್ಲಿನ ಮಹಾರಾಷ್ಟ್ರ ಸರ್ಕಾರ ನಡೆಸುತ್ತಿರುವ ಕೋವಿಡ್ 19 ಆಸ್ಪತ್ರೆಯ ಆವರಣದಲ್ಲಿ ‘ದ್ರವರೂಪಿ ಆಮ್ಲಜನಕ’ (ಲಿಕ್ವಿಡ್ ಆಕ್ಸಿಜನ್) ತಯಾರಿಕಾ ಘಟಕವನ್ನು ನಿರ್ಮಿಸಲಾಗಿದೆ.ಇದರಿಂದ ಕೊರೊನಾ ಸೋಂಕಿನಿಂದ ಮೃತಪಡುವವರ ಪ್ರಮಾಣ ಇಳಿಕೆಯಾಗಿದೆ ಎಂದು ಹಿರಿಯ ವೈದ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಸಚಿವ ರಾಜೇಶ್ ತೋಪೆ ಆ ಘಟಕವನ್ನು ಉದ್ಘಾಟಿಸಿದ್ದಾರೆ. ಈ ಘಟಕದಲ್ಲಿ ನಿತ್ಯ ಲಿಕ್ವಿಡ್ ಆಕ್ಸಿಜನ್ ತಯಾರಿಸಿ, ಟ್ಯಾಂಕ್ಗಳಲ್ಲಿ ತುಂಬಿಸಿಡಲಾಗುತ್ತದೆ.</p>.<p>ಈ ಘಟಕದಿಂದ ಆಸ್ಪತ್ರೆಯಲ್ಲಿರುವ ನೂರು ರೋಗಿಗಳಿಗೆ ಏಕಕಾಲಕ್ಕೆ ಆಕ್ಸಿಜನ್ ಪೂರೈಕೆ ಮಾಡಬಹುದಾಗಿದೆ ಎಂದು ಆಸ್ಪತ್ರೆಯ ಸರ್ಜನ್ ಅರ್ಚನಾ ಭೋಸ್ಲೆ ಹೇಳಿದರು.</p>.<p>ಕೋವಿಡ್ 19 ರೋಗಿಗಳಿಗೆ ಆರೈಕೆ ಮಾಡುವಲ್ಲಿ ಆಕ್ಸಿಜನ್ ಚಿಕಿತ್ಸೆ ಬಹಳ ಪ್ರಮುಖವಾಗಿದೆ. ಈ ಘಟಕ ಆರಂಭಕ್ಕ ಮುನ್ನ ಜಿಲ್ಲೆಯಲ್ಲಿ ಕೋವಿಡ್19 ಸೋಂಕಿನಿಂದ ಸಾಯುವವರ ಶೇ 4.5ರಷ್ಟು ಇತ್ತು. ಈಗ ಅದು ಶೇ 2.8ಕ್ಕೆ ಇಳಿದಿದೆ. ಅಷ್ಟೇ ಅಲ್ಲ, ಕೊರೊನಾ ಸೋಂಕಿನಿಂದ ಗುಣಮುಖರಾಗುವವರ ಪ್ರಮಾಣ ಶೇ 71ರಷ್ಟಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>