<p><strong>ನವದೆಹಲಿ</strong>:ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯೋಜಿಸಿರುವ ಸುಮಾರು 10,000 ಅರೆಸೇನಾಪಡೆ ಯೋಧರನ್ನು ತಕ್ಷಣವೇ ಹಿಂದಕ್ಕೆ ಕರೆಸಿಕೊಳ್ಳುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.</p>.<p>ಬುಧವಾರ ಸಂಜೆ ಕೇಂದ್ರ ಗೃಹ ಸಚಿವಾಲಯ ಈ ಆದೇಶ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಎಪಿಎಫ್) 100 ತುಕಡಿಗಳು ತಮ್ಮ ಮೂಲ ನೆಲೆಗೆ ಮರಳುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ.</p>.<p>2019ರ ಆಗಸ್ಟ್ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ಬಳಿಕ ಕಣಿವೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಾಗೂ ಭದ್ರತೆಯನ್ನು ಇನ್ನಷ್ಟು ಬಲಪಡಿಸಲು ಅಲ್ಲಿ ಬಾರೀ ಸಂಖ್ಯೆಯಲ್ಲಿ ಅರೆ ಸೇನಾಪಡೆಗಳನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿತ್ತು.</p>.<p>ವಿವಿಧ ಅರೆ ಸೇನಾಪಡೆಗಳಿಗೆ ಸುಮಾರು 10 ಸಾವಿರ ಸಿಬ್ಬಂದಿಗಳು ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಗಳಿಗೆ ತೆರಳುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಸಿಆರ್ಪಿಎಫ್, ಬಿಎಸ್ಎಫ್, ಆಸ್ಸಾಂ ರೈಫಲ್ಸ್, ಸಶಸ್ತ್ರ ಸೀಮಾಬಲ, ಸಿಐಎಸ್ಎಫ್ ಸೇರಿದಂತೆ ವಿವಿಧ ಪ್ಯಾರಾಮಿಲಿಟರಿ ಪಡೆಗಳಿಗೆ ಸೇರಿದ ನಾನಾ ಬೆಟಾಲಿಯನ್ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ 10 ಸಾವಿರ ಸಿಬ್ಬಂದಿ ಕಣಿವೆ ರಾಜ್ಯದಿಂದ ವಾಪಸ್ಸಾಗಲ್ಲಿದ್ದಾರೆ.</p>.<p>ಸಿಆರ್ಪಿಎಫ್ (40 ತುಕಡಿ), ಎಸ್ಎಸ್ಬಿ, ಸಿಐಎಸ್ಎಫ್ ಮತ್ತು ಬಿಎಸ್ಎಫ್ನ ತಲಾ 20 ತುಕಡಿಗಳನ್ನು ವಾರದೊಳಗೆ ವಾಪಸ್ ಕರೆಸಿಕೊಳ್ಳಲು ನಿರ್ದೇಶಿಸಲಾಗಿದೆ</p>.<p>ಈ ಆದೇಶ ತಕ್ಷಣದಿಂದಲೇ ಜಾರಿಯಾಗಿದ್ದರಿಂದ ಕೆಲವು ಬೆಟಾಲಿಯನ್ಗಳು ಸಂಜೆಯೇ ತೆರಳಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p>.<p>ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡಿ, ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>:ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯೋಜಿಸಿರುವ ಸುಮಾರು 10,000 ಅರೆಸೇನಾಪಡೆ ಯೋಧರನ್ನು ತಕ್ಷಣವೇ ಹಿಂದಕ್ಕೆ ಕರೆಸಿಕೊಳ್ಳುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.</p>.<p>ಬುಧವಾರ ಸಂಜೆ ಕೇಂದ್ರ ಗೃಹ ಸಚಿವಾಲಯ ಈ ಆದೇಶ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಎಪಿಎಫ್) 100 ತುಕಡಿಗಳು ತಮ್ಮ ಮೂಲ ನೆಲೆಗೆ ಮರಳುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ.</p>.<p>2019ರ ಆಗಸ್ಟ್ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ಬಳಿಕ ಕಣಿವೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಾಗೂ ಭದ್ರತೆಯನ್ನು ಇನ್ನಷ್ಟು ಬಲಪಡಿಸಲು ಅಲ್ಲಿ ಬಾರೀ ಸಂಖ್ಯೆಯಲ್ಲಿ ಅರೆ ಸೇನಾಪಡೆಗಳನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿತ್ತು.</p>.<p>ವಿವಿಧ ಅರೆ ಸೇನಾಪಡೆಗಳಿಗೆ ಸುಮಾರು 10 ಸಾವಿರ ಸಿಬ್ಬಂದಿಗಳು ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಗಳಿಗೆ ತೆರಳುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಸಿಆರ್ಪಿಎಫ್, ಬಿಎಸ್ಎಫ್, ಆಸ್ಸಾಂ ರೈಫಲ್ಸ್, ಸಶಸ್ತ್ರ ಸೀಮಾಬಲ, ಸಿಐಎಸ್ಎಫ್ ಸೇರಿದಂತೆ ವಿವಿಧ ಪ್ಯಾರಾಮಿಲಿಟರಿ ಪಡೆಗಳಿಗೆ ಸೇರಿದ ನಾನಾ ಬೆಟಾಲಿಯನ್ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ 10 ಸಾವಿರ ಸಿಬ್ಬಂದಿ ಕಣಿವೆ ರಾಜ್ಯದಿಂದ ವಾಪಸ್ಸಾಗಲ್ಲಿದ್ದಾರೆ.</p>.<p>ಸಿಆರ್ಪಿಎಫ್ (40 ತುಕಡಿ), ಎಸ್ಎಸ್ಬಿ, ಸಿಐಎಸ್ಎಫ್ ಮತ್ತು ಬಿಎಸ್ಎಫ್ನ ತಲಾ 20 ತುಕಡಿಗಳನ್ನು ವಾರದೊಳಗೆ ವಾಪಸ್ ಕರೆಸಿಕೊಳ್ಳಲು ನಿರ್ದೇಶಿಸಲಾಗಿದೆ</p>.<p>ಈ ಆದೇಶ ತಕ್ಷಣದಿಂದಲೇ ಜಾರಿಯಾಗಿದ್ದರಿಂದ ಕೆಲವು ಬೆಟಾಲಿಯನ್ಗಳು ಸಂಜೆಯೇ ತೆರಳಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p>.<p>ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡಿ, ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>