‘ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಸರ್ಕಾರ ನೇಮಕ ಮಾಡಿರುವ ಲೆಫ್ಟಿನೆಂಟ್ ಗವರ್ನರ್ ಅಧಿಕಾರದಲ್ಲಿದ್ದರೂ ಆಡಳಿತ ವಿಫಲವಾಗಿದೆ. 370ನೇ ವಿಧಿ ರದ್ದತಿಯಿಂದ ಪ್ರಯೋಜನವಾಗಿಲ್ಲ. ಇದು ಕಾಶ್ಮೀರಿ ಪಂಡಿತರ ಮೇಲೆ ನಡೆಯುತ್ತಿರುವ ಮೊದಲ ದಾಳಿಯಲ್ಲ. ಕೇಂದ್ರ ಸರ್ಕಾರವು ಭದ್ರತೆ ಒದಗಿಸಲು ವಿಫಲವಾಗಿದ್ದು, ಕಾಶ್ಮೀರಿ ಪಂಡಿತರು ಕಾಶ್ಮೀರ ತೊರೆಯುತ್ತಿದ್ದಾರೆ’ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಟೀಕಿಸಿದ್ದಾರೆ.