<p><strong>ನವದೆಹಲಿ:</strong> ’ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿಗಾಗಿ ಸಮಾನ ಮನಸ್ಕ ಪಕ್ಷಗಳೊಂದಿಗೆ ಮಾತುಕತೆ ನಡೆಸಲು ಕಾಂಗ್ರೆಸ್ ಪಕ್ಷವು ಸಿದ್ಧವಿದೆ‘ ಎಂದು ಪಕ್ಷದ ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಘಟಕದ ಅಧ್ಯಕ್ಷ ತಾರೀಕ್ ಹಮೀದ್ ಕರ್ರ ಸೋಮವಾರ ಹೇಳಿದರು.</p>.<p>ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ‘ಈ ಬಾರಿಯ ಮೈತ್ರಿಯ ಮಾನದಂಡವು ಕಳೆದ ಲೋಕಸಭಾ ಚುನಾವಣೆಗಿಂತ ಭಿನ್ನವಾಗಿ ಇರಲಿದೆ’ ಎಂದು ಹೇಳಿದರು.</p>.<p>ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ನೀಡುವುದು ಕಾಂಗ್ರೆಸ್ ಪಕ್ಷದ ಮುಖ್ಯ ಆದ್ಯತೆ. ಕಣಿವೆ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವ ಮೂಲಕ ಕೇಂದ್ರ ಸರ್ಕಾರವು ಅಸಾಂವಿಧಾನಿಕ ಹೆಜ್ಜೆ ಇಟ್ಟಿದೆ ಎಂದು ದೂರಿದರು. </p>.<p>ಬಿಜೆಪಿಯ ಸರ್ವಾಧಿಕಾರಿ ಧೋರಣೆ ವಿರೋಧಿಸುವ ಎಲ್ಲ ಜಾತ್ಯತೀತ ಪಕ್ಷಗಳಿಗೆ ಈಗಾಗಲೇ ಸಂದೇಶ ರವಾನೆಯಾಗಿದೆ. ಬಿಜೆಪಿಯು ಜಮ್ಮು ಮತ್ತು ಕಾಶ್ಮೀರದ ವಿರುದ್ಧ ಮಲತಾಯಿ ಧೋರಣೆ ತೋರುತ್ತಿದೆ. ಕೇಂದ್ರಾಡಳಿತ ಪ್ರದೇಶವನ್ನು ಮತದಾಳವಾಗಿ ಬಳಸಿಕೊಂಡಿದೆ ಎಂದು ಆರೋಪಿಸಿದರು.</p>.<p>ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಲೋಕಸಭಾ ಚುನಾವಣೆ ಸಂದರ್ಭದಲ್ಲಾದ ಮೈತ್ರಿಗಿಂತ ಈ ಮೈತ್ರಿಯು ಭಿನ್ನವಾಗಿ ಇರಲಿದೆ. ಅದು ರಾಷ್ಟ್ರಮಟ್ಟದಲ್ಲಾದ ಮೈತ್ರಿ, ಇದು ವಿಧಾನಸಭಾ ಚುನಾವಣೆ. ಹೀಗಾಗಿ ಮೈತ್ರಿಯ ಮಾನದಂಡಗಳು ವಿಭಿನ್ನವಾಗಿ ಇರಲಿವೆ’ ಎಂದು ಹೇಳಿದರು.</p>.<p>ತಾರೀಕ್ ಹಮೀದ್ ಅವರು 2017ರಲ್ಲಿ ಪಿಡಿಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಿಡಿಪಿ–ಬಿಜೆಪಿ ಮೈತ್ರಿಯನ್ನು ಟೀಕಿಸಿದವರಲ್ಲಿ ತಾರೀಕ್ ಹಮೀದ್ ಪ್ರಮುಖರು.<br><br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ’ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿಗಾಗಿ ಸಮಾನ ಮನಸ್ಕ ಪಕ್ಷಗಳೊಂದಿಗೆ ಮಾತುಕತೆ ನಡೆಸಲು ಕಾಂಗ್ರೆಸ್ ಪಕ್ಷವು ಸಿದ್ಧವಿದೆ‘ ಎಂದು ಪಕ್ಷದ ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಘಟಕದ ಅಧ್ಯಕ್ಷ ತಾರೀಕ್ ಹಮೀದ್ ಕರ್ರ ಸೋಮವಾರ ಹೇಳಿದರು.</p>.<p>ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ‘ಈ ಬಾರಿಯ ಮೈತ್ರಿಯ ಮಾನದಂಡವು ಕಳೆದ ಲೋಕಸಭಾ ಚುನಾವಣೆಗಿಂತ ಭಿನ್ನವಾಗಿ ಇರಲಿದೆ’ ಎಂದು ಹೇಳಿದರು.</p>.<p>ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ನೀಡುವುದು ಕಾಂಗ್ರೆಸ್ ಪಕ್ಷದ ಮುಖ್ಯ ಆದ್ಯತೆ. ಕಣಿವೆ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವ ಮೂಲಕ ಕೇಂದ್ರ ಸರ್ಕಾರವು ಅಸಾಂವಿಧಾನಿಕ ಹೆಜ್ಜೆ ಇಟ್ಟಿದೆ ಎಂದು ದೂರಿದರು. </p>.<p>ಬಿಜೆಪಿಯ ಸರ್ವಾಧಿಕಾರಿ ಧೋರಣೆ ವಿರೋಧಿಸುವ ಎಲ್ಲ ಜಾತ್ಯತೀತ ಪಕ್ಷಗಳಿಗೆ ಈಗಾಗಲೇ ಸಂದೇಶ ರವಾನೆಯಾಗಿದೆ. ಬಿಜೆಪಿಯು ಜಮ್ಮು ಮತ್ತು ಕಾಶ್ಮೀರದ ವಿರುದ್ಧ ಮಲತಾಯಿ ಧೋರಣೆ ತೋರುತ್ತಿದೆ. ಕೇಂದ್ರಾಡಳಿತ ಪ್ರದೇಶವನ್ನು ಮತದಾಳವಾಗಿ ಬಳಸಿಕೊಂಡಿದೆ ಎಂದು ಆರೋಪಿಸಿದರು.</p>.<p>ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಲೋಕಸಭಾ ಚುನಾವಣೆ ಸಂದರ್ಭದಲ್ಲಾದ ಮೈತ್ರಿಗಿಂತ ಈ ಮೈತ್ರಿಯು ಭಿನ್ನವಾಗಿ ಇರಲಿದೆ. ಅದು ರಾಷ್ಟ್ರಮಟ್ಟದಲ್ಲಾದ ಮೈತ್ರಿ, ಇದು ವಿಧಾನಸಭಾ ಚುನಾವಣೆ. ಹೀಗಾಗಿ ಮೈತ್ರಿಯ ಮಾನದಂಡಗಳು ವಿಭಿನ್ನವಾಗಿ ಇರಲಿವೆ’ ಎಂದು ಹೇಳಿದರು.</p>.<p>ತಾರೀಕ್ ಹಮೀದ್ ಅವರು 2017ರಲ್ಲಿ ಪಿಡಿಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಿಡಿಪಿ–ಬಿಜೆಪಿ ಮೈತ್ರಿಯನ್ನು ಟೀಕಿಸಿದವರಲ್ಲಿ ತಾರೀಕ್ ಹಮೀದ್ ಪ್ರಮುಖರು.<br><br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>