<p><strong>ಶ್ರೀನಗರ:</strong> ಪ್ರಸಿದ್ಧ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕನಿಷ್ಠ 12 ಜನರು ಮೃತಪಟ್ಟು, 20 ಜನರು ಗಾಯಗೊಂಡಿರುವ ಕಾಲ್ತುಳಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶನಿವಾರ ತಿಳಿಸಿದ್ದಾರೆ.</p>.<p>ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿದ್ದು, ಘಟನೆಯ ಕುರಿತು ವಿವರಿಸಲಾಗಿದೆ. 'ಗೌರವಾನ್ವಿತ ಪ್ರಧಾನಿ ಮೋದಿಯವರು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ' ಎಂದು ತಿಳಿಸಿದ್ದಾರೆ.</p>.<p>ಹೊಸ ವರ್ಷಾಚರಣೆಗಾಗಿ ತ್ರಿಕೂಟ ಬೆಟ್ಟಗಳ ಮೇಲಿನ ದೇವಸ್ಥಾನದ ಮೂರನೇ ಗೇಟ್ ಬಳಿ ಶನಿವಾರ ಮುಂಜಾನೆ ಭಕ್ತರ ದಂಡು ನೆರೆದಿತ್ತು. ಈ ವೇಳೆ ಉಂಟಾದ ನೂಕು ನುಗ್ಗಲಿನಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/many-people-dead-and-so-many-injured-in-stampede-at-vaishno-devi-shrine-in-jammu-and-kashmir-897979.html" itemprop="url">ವೈಷ್ಣೋ ದೇವಿ ಮಂದಿರದಲ್ಲಿ ಕಾಲ್ತುಳಿತ: 12 ಜನರ ಸಾವು, ಹಲವರಿಗೆ ಗಾಯ </a></p>.<p>ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್, ಶ್ರೀ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ನಡೆದ ಕಾಲ್ತುಳಿತದಲ್ಲಿ ಸಾವಿಗೀಡಾಗಿರುವುದು ತುಂಬ ದಃಖವನ್ನುಂಟು ಮಾಡಿದೆ. ಮೃತರ ಕುಟುಂಬಗಳಿಗೆ ಸಂತಾಪಗಳು ಮತ್ತು ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ತಿಳಿಸಿದ್ದಾರೆ.</p>.<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಿದ್ದು, ಘಟನೆ ಬಗ್ಗೆ ತಿಳಿಸಿದ್ದೇನೆ. ಕಾಲ್ತುಳಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಸಲಾಗಿದೆ. ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಜಮ್ಮುವಿನ ಎಡಿಜಿಪಿ ಮತ್ತು ವಿಭಾಗೀಯ ಆಯುಕ್ತರು ತನಿಖಾ ಸಮಿತಿಯಲ್ಲಿದ್ದಾರೆ.</p>.<p>ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ತಲಾ 10 ಲಕ್ಷ ಮತ್ತು ಗಾಯಾಳುಗಳಿಗೆ ತಲಾ 2 ಲಕ್ಷ ಪರಿಹಾರವನ್ನು ಲೆಫ್ಟಿನೆಂಟ್ ಗವರ್ನರ್ ಘೋಷಿಸಿದ್ದಾರೆ.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/india-news/very-distressed-prez-kovind-on-loss-of-lives-in-stampede-at-vaishno-devi-shrine-897986.html" itemprop="url">ವೈಷ್ಣೋ ದೇವಿ ದುರಂತ: ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ಕೋವಿಂದ್, ರಾಹುಲ್ ಸಂತಾಪ </a></p>.<p><a href="https://www.prajavani.net/india-news/an-ex-gratia-of-twelve-lakhs-rupees-to-of-kin-those-who-died-in-the-stampede-at-mata-vaishno-devi-897980.html" itemprop="url">ವೈಷ್ಣೋ ದೇವಿ ಭವನದಲ್ಲಿ ಕಾಲ್ತುಳಿತ: ಮೃತರ ಕುಟುಂಬಕ್ಕೆ ತಲಾ ₹12 ಲಕ್ಷ ಪರಿಹಾರ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಪ್ರಸಿದ್ಧ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕನಿಷ್ಠ 12 ಜನರು ಮೃತಪಟ್ಟು, 20 ಜನರು ಗಾಯಗೊಂಡಿರುವ ಕಾಲ್ತುಳಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶನಿವಾರ ತಿಳಿಸಿದ್ದಾರೆ.</p>.<p>ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿದ್ದು, ಘಟನೆಯ ಕುರಿತು ವಿವರಿಸಲಾಗಿದೆ. 'ಗೌರವಾನ್ವಿತ ಪ್ರಧಾನಿ ಮೋದಿಯವರು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ' ಎಂದು ತಿಳಿಸಿದ್ದಾರೆ.</p>.<p>ಹೊಸ ವರ್ಷಾಚರಣೆಗಾಗಿ ತ್ರಿಕೂಟ ಬೆಟ್ಟಗಳ ಮೇಲಿನ ದೇವಸ್ಥಾನದ ಮೂರನೇ ಗೇಟ್ ಬಳಿ ಶನಿವಾರ ಮುಂಜಾನೆ ಭಕ್ತರ ದಂಡು ನೆರೆದಿತ್ತು. ಈ ವೇಳೆ ಉಂಟಾದ ನೂಕು ನುಗ್ಗಲಿನಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/many-people-dead-and-so-many-injured-in-stampede-at-vaishno-devi-shrine-in-jammu-and-kashmir-897979.html" itemprop="url">ವೈಷ್ಣೋ ದೇವಿ ಮಂದಿರದಲ್ಲಿ ಕಾಲ್ತುಳಿತ: 12 ಜನರ ಸಾವು, ಹಲವರಿಗೆ ಗಾಯ </a></p>.<p>ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್, ಶ್ರೀ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ನಡೆದ ಕಾಲ್ತುಳಿತದಲ್ಲಿ ಸಾವಿಗೀಡಾಗಿರುವುದು ತುಂಬ ದಃಖವನ್ನುಂಟು ಮಾಡಿದೆ. ಮೃತರ ಕುಟುಂಬಗಳಿಗೆ ಸಂತಾಪಗಳು ಮತ್ತು ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ತಿಳಿಸಿದ್ದಾರೆ.</p>.<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಿದ್ದು, ಘಟನೆ ಬಗ್ಗೆ ತಿಳಿಸಿದ್ದೇನೆ. ಕಾಲ್ತುಳಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಸಲಾಗಿದೆ. ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಜಮ್ಮುವಿನ ಎಡಿಜಿಪಿ ಮತ್ತು ವಿಭಾಗೀಯ ಆಯುಕ್ತರು ತನಿಖಾ ಸಮಿತಿಯಲ್ಲಿದ್ದಾರೆ.</p>.<p>ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ತಲಾ 10 ಲಕ್ಷ ಮತ್ತು ಗಾಯಾಳುಗಳಿಗೆ ತಲಾ 2 ಲಕ್ಷ ಪರಿಹಾರವನ್ನು ಲೆಫ್ಟಿನೆಂಟ್ ಗವರ್ನರ್ ಘೋಷಿಸಿದ್ದಾರೆ.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/india-news/very-distressed-prez-kovind-on-loss-of-lives-in-stampede-at-vaishno-devi-shrine-897986.html" itemprop="url">ವೈಷ್ಣೋ ದೇವಿ ದುರಂತ: ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ಕೋವಿಂದ್, ರಾಹುಲ್ ಸಂತಾಪ </a></p>.<p><a href="https://www.prajavani.net/india-news/an-ex-gratia-of-twelve-lakhs-rupees-to-of-kin-those-who-died-in-the-stampede-at-mata-vaishno-devi-897980.html" itemprop="url">ವೈಷ್ಣೋ ದೇವಿ ಭವನದಲ್ಲಿ ಕಾಲ್ತುಳಿತ: ಮೃತರ ಕುಟುಂಬಕ್ಕೆ ತಲಾ ₹12 ಲಕ್ಷ ಪರಿಹಾರ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>